ಪ್ರೇಕ್ಷಕ ಅಳ್ಳೋದು ಗ್ಯಾರಂಟಿ


Team Udayavani, Apr 20, 2018, 6:15 AM IST

Krishna-Tulasi_(101).jpg

ನಿರ್ಮಾಪಕ ನಾರಾಯಣಸ್ವಾಮಿಯವರು ಡಬಲ್‌ ಮೀನಿಂಗ್‌ ಇರದ, ಕುಟುಂಬ ಸಮೇತ ಕುಳಿತು ನೋಡುವಂತಹ ಸಿನಿಮಾ ಮಾಡಿಕೊಡಬೇಕು ಎಂದು ನಿರ್ದೇಶಕ ಸುಖೇಶ್‌ ಅವರಲ್ಲಿ ಮೊದಲೇ ಹೇಳಿದ್ದರಂತೆ. ಅದರಂತೆ ಈಗ “ಕೃಷ್ಣ ತುಳಸಿ’ ಚಿತ್ರ ಸಿದ್ಧವಾಗಿದೆ.

ಈ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರದ ಬಗ್ಗೆ ಒಂದಿಷ್ಟು ಮಾತನಾಡುವುದಕ್ಕೆ ಚಿತ್ರತಂಡದವರು ಜಮಾಯಿಸಿದ್ದರು. ಎಲ್ಲರೂ ಖುಷಿಯಾಗಿದ್ದರು. ಅದರಲ್ಲೂ ನಿರ್ಮಾಪಕ ನಾರಾಯಣಸ್ವಾಮಿ ಸ್ವಲ್ಪ ಜಾಸ್ತಿಯೇ ಖುಷಿಯಾಗಿದ್ದರು. “ಇತ್ತೀಚೆಗೆ ಸಿನಿಮಾ ನೋಡಿದೆ. ತುಂಬಾ ಖುಷಿಯಾಯಿತು. ಬಜೆಟ್‌ ಸ್ವಲ್ಪ ಜಾಸ್ತಿಯಾಯಿತು ಅನ್ನೋದು ಬಿಟ್ಟರೆ ಉಳಿದಂತೆ ನಿರ್ದೇಶಕರು ಕಥೆ ಹೇಳಿದಂತೆ ಸಿನಿಮಾ ಮಾಡಿದ್ದಾರೆ. ಸಿನಿಮಾ ತುಂಬಾ ಸೆಂಟಿಮೆಂಟ್‌ನಿಂದ ಕೂಡಿದ್ದು, ಪ್ರೇಕ್ಷಕರಿಗೆ ಒಂದೊಂದು ಕರ್ಚಿಫ್ ಬೇಕಾಗಬಹುದು. ಸಿನಿಮಾ ನೋಡಿ ಅತ್ತುಕೊಂಡೆ ಬರುತ್ತಾರೆ. ಈಗಾಗಲೇ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ತೆಲುಗಿನಿಂದಲೂ ಚಿತ್ರದ ರೀಮೇಕ್‌ ರೈಟ್ಸ್‌ ಕೇಳುತ್ತಿದ್ದಾರೆ. ಜೊತೆಗೆ ಟಿವಿ ರೈಟ್ಸ್‌ಗೂ ಬೇಡಿಕೆ ಇದೆ’ ಎಂದು ಸಿನಿಮಾ ಬಗ್ಗೆ ಮಾತನಾಡಿದರು.

ಚಿತ್ರದ ನಿರ್ದೇಶಕ ಸುಕೇಶ್‌ಗೆ “ಕೃಷ್ಣ ತುಳಸಿ’ ಕನ್ನಡಕ್ಕೊಂದು ಒಳ್ಳೆಯ ಸಿನಿಮಾವಾಗುವ ವಿಶ್ವಾಸವಿದೆ. “ದೃಷ್ಟಿವಿಕಲಚೇತನ ಬದುಕಿನ ಸುತ್ತ ಈ ಕಥೆ ಮಾಡಿದ್ದು, ಚಿತ್ರದಲ್ಲಿ ಸಾಕಷ್ಟು ಸೂಕ್ಷ್ಮ ಅಂಶಗಳನ್ನು ಹೇಳಿದ್ದೇವೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಕೂಡಾ ಮಾಡಿಕೊಂಡಿದ್ದು, ಅದು ಚಿತ್ರೀಕರಣ ಸಮಯದಲ್ಲಿ ಸಹಾಯಕ್ಕೆ ಬಂತು. ಚಿತ್ರದಲ್ಲಿ ಬಸ್‌ ಕೂಡಾ ಪ್ರಮುಖವಾಗಿದ್ದು, ಬಸ್‌ ಒಳಗಡೆ ಟ್ರಾಲಿ ಹಾಕಿ ಚಿತ್ರೀಕರಣ ಮಾಡಿದ್ದೇವೆ’ ಎಂದ ಅವರು ನಿರ್ಮಾಪಕರ ಸಿನಿಮಾ ಪ್ರೀತಿಯ ಬಗ್ಗೆಯೂ ಮಾತನಾಡಿದರು. 

ನಾಯಕ ಸಂಚಾರಿ ವಿಜಯ್‌ ಮೊದಲಿಗೆ ನಿರ್ಮಾಪಕರಿಗೆ ಥ್ಯಾಂಕ್ಸ್‌ ಹೇಳಿದರು. ಅದಕ್ಕೆ ಕಾರಣ ಚಿತ್ರದ ಬಜೆಟ್‌. “ನಾನು ಯಾವುದೇ ಕಮರ್ಷಿಯಲ್‌ ಹಿಟ್‌ ಕೊಡದಿದ್ದರೂ ನನ್ನನ್ನು ನಂಬಿ ಈ ಸಿನಿಮಾ ಮಾಡಿದ್ದೀರಿ. ನಾನು ಯಾವತ್ತೂ ನಿಮ್ಮನ್ನು ಮರೆಯೋದಿಲ್ಲ’ ಎಂದರು. ಈ ಚಿತ್ರದಲ್ಲಿ ವಿಜಯ್‌, ಅಂಧನಾಗಿ ಕಾಣಿಸಿಕೊಂಡಿದ್ದಾರೆ. “ತುಂಬಾ ಸೂಕ್ಷ್ಮ ಅಂಶಗಳನ್ನೊಳಗೊಂಡಿರುವ ಕಥೆ. ಈ ಚಿತ್ರಕ್ಕಾಗಿ ದೃಷ್ಟಿವಿಕಲಚೇತನರ ದಿನಚರಿ, ಅವರ ಹಾವಭಾವ ಸೇರಿದಂತೆ ಅನೇಕ ವಿಷಯಗಳನ್ನು ನಾನು ನೋಡಿಕೊಂಡೆ. ನಿರ್ದೇಶಕರಿಗೆ ಈ ಪಾತ್ರದ ಬಗ್ಗೆ ಸ್ಪಷ್ಟತೆ ಇತ್ತು. ಹಾಗಾಗಿ, ನಾನು ಒಂಚೂರು ಎಡವಿದರೂ ಅವರೇ ನಟಿಸಿ ತೋರಿಸುತ್ತಿದ್ದರು’ ಎಂದು ಸಿನಿಮಾ ಬಗ್ಗೆ ಹೇಳಿದರು. 

ನಾಯಕಿ ಮೇಘಶ್ರೀ ಕೂಡಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಕಿರಣ್‌ ರವೀಂದ್ರನಾಥ್‌ ಸಂಗೀತ, ನವೀನ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.