ಒಂದ್‌ ಸಸ್ಪೆನ್ಸ್‌ ಕಥೆ ನೋಡ್ಲಾ


Team Udayavani, Apr 20, 2018, 6:15 AM IST

One-suspense-story.jpg

ಒಬ್ಬರು ಪಂಜಾಬ್‌ನವರು. ಇನ್ನೊಬ್ಬರು ಕರ್ನಾಟಕದವರು. ಇಬ್ಬರು ಎನ್‌ಆರ್‌ಐಗಳು. ಇರೋದು ದುಬೈನಲ್ಲಿ. ಇಬ್ಬರಿಗೂ ಅನಿಸಿದ್ದು ಒಂದು ಒಳ್ಳೆಯ ಸಿನಿಮಾ ಮಾಡಬೇಕು ಅಂತ. ಹಾಗನಿಸಿದ್ದೇ ತಡ, “2 ಸ್ಟೇಟ್ಸ್‌ ಫಿಲ್ಮ್’ ಬ್ಯಾನರ್‌ ಹುಟ್ಟುಹಾಕಿ, ಒಂದು ತಂಡ ರೆಡಿ ಮಾಡಿಕೊಂಡರು. ಒಳ್ಳೇ ಕಥೆ ಆಯ್ಕೆ ಮಾಡಿಕೊಂಡರು. ಅದಕ್ಕೆ ಚಾಲನೆಯನ್ನೂ ಕೊಟ್ಟರು. ಆ ನಿರ್ಮಾಪಕರ ಹೆಸರು ರಾಜಾನಂದ್‌ ಮತ್ತು ಕೌಶಲ್‌. ರಾಜಾನಂದ್‌ ಕನ್ನಡದವರು. ಕೌಶಲ್‌ ಪಂಜಾಬಿನವರು. ಇತ್ತೀಚೆಗೆ ಚಿತ್ರಕ್ಕೆ ಮುಹೂರ್ತವೂ ನೆರವೇರಿದೆ. ಆ ಚಿತ್ರಕ್ಕಿನ್ನೂ ನಾಮಕರಣ ಮಾಡಿಲ್ಲ. ಈ ಹಿಂದೆ “ಒಂದ್‌ ಕಥೆ ಹೇಳಾ’ ಎಂಬ ಶೀರ್ಷಿಕೆ ಇಡಬೇಕು ಅಂದುಕೊಂಡಿದ್ದರು. ಆ ಶೀರ್ಷಿಕೆಯಡಿ ಇನ್ನೊಂದು ಚಿತ್ರ ಶುರುವಾದ ಹಿನ್ನೆಲೆಯಲ್ಲಿ, ಅದನ್ನು ಕೈ ಬಿಟ್ಟು ಬೇರೆ ಹೆಸರಿಡಲು ನಿರ್ಧರಿಸಿದೆ ಚಿತ್ರತಂಡ.

ಈ ಚಿತ್ರವನ್ನು ಕೃಷ್ಣ ಸಾಯಿ ನಿರ್ದೇಶನ ಮಾಡುತ್ತಿದ್ದಾರೆ. ತಮಿಳಿನಲ್ಲಿ ಈಗಾಗಲೇ ಎರಡು ಚಿತ್ರಗಳನ್ನು ನಿರ್ದೇಶಿಸಿರುವ ಕೃಷ್ಣ ಸಾಯಿ ಅವರಿಗೆ ಕನ್ನಡದಲ್ಲಿ ಇದು ಮೊದಲ ಪ್ರಯತ್ನ. ತಮಿಳಿನ ಎರಡು ಚಿತ್ರಗಳು ಈಗ ಬಿಡುಗಡೆಗೆ ರೆಡಿಯಾಗಿವೆ. “ಇದೊಂದು ವಿಭಿನ್ನ ಕಾನ್ಸೆಪ್ಟ್ ಹೊಂದಿರುವ ಚಿತ್ರ. ಸಸ್ಪೆನ್ಸ್‌ ಥ್ರಿಲ್ಲರ್‌ ಹೊಂದಿರುವ ಒಂದು ಮರ್ಡರ್‌ ಮಿಸ್ಟರಿ ಕಥೆ ಇಲ್ಲಿದೆ. ಐಟಿ ಕ್ಷೇತ್ರದಲ್ಲಿರುವ ಮೂವರು ಹುಡುಗ, ಹುಡುಗಿಯರು ಒಂದು ಬಂಗಲೆಗೆ ಬರುತ್ತಾರೆ. ಸದಾ ತರೆಲ ಕೆಲಸ ಮಾಡುವ ಹುಡುಗರ ಬದುಕಲ್ಲೊಂದು ಘಟನೆ ನಡೆಯುತ್ತದೆ. ಅಲ್ಲೊಂದು ಕೊಲೆಯೂ ನಡೆಯುತ್ತದೆ. ಅದು ಯಾರು ಮಾಡಿದ್ದು, ಯಾಕೆ ಆಗಿದ್ದು ಎಂಬುದೇ ಸಸ್ಪೆನ್ಸ್‌’ ಎನ್ನುತ್ತಾರೆ ನಿರ್ದೇಶಕ ಕೃಷ್ಣ ಸಾಯಿ.

ನಿರ್ಮಾಪಕದ್ವಯರಾದ ರಾಜಾನಂದ್‌ ಮತ್ತು ಕೌಶಲ್‌ ಅವರಿಬ್ಬರಿಗೆ ಕನ್ನಡದಲ್ಲಿ ಹೊಸತನದ ಚಿತ್ರಗಳು ಸದ್ದು ಮಾಡುತ್ತಿವೆ ಎಂದು ತಿಳಿದು, ತಾವೂ ಒಂದು ಹೊಸ ಪ್ರಯೋಗ ಮಾಡಬೇಕು ಅಂತ, ಈ ಕಥೆ ಆಯ್ಕೆ ಮಾಡಿಕೊಂಡು, ಅದಕ್ಕೆ ತಕ್ಕಂತಹ ತಂತ್ರಜ್ಞರನ್ನು ಆಯ್ಕೆ ಮಾಡಿ ಸಿನಿಮಾ ಮಾಡುತ್ತಿರುವುದಾಗಿ ಹೇಳಿಕೊಂಡರು.

ಸಂಯುಕ್ತಾ ಹೊರನಾಡು, ಅವರಿಗಿಲ್ಲಿ ಚಾಲೆಂಜಿಂಗ್‌ ಪಾತ್ರ ಸಿಕ್ಕಿದೆಯಂತೆ. ಉಳಿದಂತೆ ಚಿತ್ರದಲ್ಲಿ ಶಂಕರ್‌, ಅಮೋಘ…, ರಾಹುಲ್‌, ನಿಮಿಷಾ, ನೀತು ಬಾಲ ಇತರರು ನಟಿಸುತ್ತಿದ್ದಾರೆ. ಯತೀಶ್‌ ಸಂಗೀತ ನೀಡುತ್ತಿದ್ದಾರೆ. ಮೂರು ಹಾಡುಗಳಿದ್ದು, ಪಾರ್ಟಿ, ಪಬ್‌ ಹಾಗೂ ಯೂಥ್‌ ಲೈಫ್ ಕುರಿತ ಹಾಡುಗಳು ಇಲ್ಲಿರಲಿವೆ ಎಂಬುದು ಯತೀಶ್‌ ಮಾತು.

– ವಿಜಯ್‌ ಭರಮಸಾಗರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.