ಸಹಿ ತಂದ ಆಪತ್ತು; ಹೆಂಡ್ತಿ ಕಥೆ, ಗಂಡನ ಕಾಸು


Team Udayavani, Apr 20, 2018, 6:15 AM IST

Signature.jpg

“ಇದು ಜಿದ್ದಾಜಿದ್ದಿಯ ಕಥೆ’
– ಹೀಗೆಂದು ಒಂದು ಕ್ಷಣ ಮೌನವಾದರು ಗುರು ಮದೆÉàಸರ. ತಮ್ಮ ಚೊಚ್ಚಲ ನಿರ್ದೇಶನದ “ಸಿಗ್ನೇಚರ್‌’ ಚಿತ್ರದ ಬಗ್ಗೆ ಮಾಹಿತಿ ನೀಡಲು ತಮ್ಮ ತಂಡದೊಂದಿಗೆ ಮಾಧ್ಯಮದ ಮುಂದೆ ಬಂದಿದ್ದರು. ಅನೇಕ ವರ್ಷಗಳಿಂದ ಚಿತ್ರಗಳಿಂದ ಕೆಲಸ ಮಾಡಿದ ಅನುಭವವಿರುವ ಗುರು ಈಗ “ಸಿಗ್ನೇಚರ್‌’ ಎಂಬ ಸಿನಿಮಾ ಮಾಡುತ್ತಿದ್ದಾರೆ. ಮಯೂರಿ ಈ ಸಿನಿಮಾದ ನಾಯಕಿ. ರಂಜಿತ್‌ ಎಂಬ ಹೊಸ ಮುಖ ನಾಯಕ. 

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಗುರು, “ಇದು ಕಾಲ್ಪನಿಕ ಜಗತ್ತಿನ ಚಿತ್ರ. ಒಂದು ಸಹಿಯಿಂದ ಶೂನ್ಯದಲ್ಲಿ ಇದ್ದವನು ಮೇಲಕ್ಕೆ ಎತ್ತರಕ್ಕೆ ಬೆಳೆಯಬಹುದು. ಅದೇ ಸಹಿಯಿಂದ ಎತ್ತರದಲ್ಲಿದ್ದವನು ಪಾತಾಳಕ್ಕೂ ಬೀಳಬಹುದು. ಇದೊಂದು ರೀತಿ ಜಿದ್ದಾಜಿದ್ದಿ ಕಥೆ. ಜಿಲ್ಲಾಧಿಕಾರಿ ಮತ್ತು ಮಾಜಿ ಮುಖ್ಯಮಂತ್ರಿಯ ನಡುವೆ ಕಥೆ ಸಾಗುತ್ತದೆ. ಒಂದು ಸಹಿಯಿಂದ ಏನೆಲ್ಲಾ ಆಗುತ್ತದೆ ಎಂಬ ಅಂಶದೊಂದಿಗೆ ಚಿತ್ರ ಸಾಗುತ್ತದೆ. ಒಂದೇ ಹಂತದಲ್ಲಿ ಕುಂದಾಪುರದ ಮಂದಾರ್ತಿಯಲ್ಲಿ ಚಿತ್ರೀಕರಣ ನಡೆಯಲಿದೆ’ ಎಂದು ವಿವರ ಕೊಟ್ಟರು.

ಚಿತ್ರದಲ್ಲಿ ಮಯೂರಿ ನಾಯಕಿ. ಇಲ್ಲಿ ಅವರು ಸೋನಾ ಎಂಬ ಮಾಜಿ ಸಿಎಂ ಮಗಳಾಗಿ ನಟಿಸುತ್ತಿದ್ದಾರೆ. ಜೀವನದಲ್ಲಿ ಸಂಗಾತಿ ಬಂದಾಗ ಏನೆಲ್ಲಾ ಸಮಸ್ಯೆಗಳು ಎದುರಾಗುತ್ತವೆ ಮತ್ತು ಅದನ್ನು ಹೇಗೆ ನಿಭಾಹಿಸುತ್ತಾಳೆ ಎಂಬ ಅಂಶದೊಂದಿಗೆ ಪಾತ್ರ ಸಾಗುತ್ತದೆಯಂತೆ. ಚಿತ್ರದಲ್ಲಿ ನಿರ್ಮಾಪಕರ ಮಗಳು ಬೇಬಿ ಮಾನ್ಯಾಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಚಿತ್ರದಲ್ಲಿ ರಂಜಿತ್‌ ನಾಯಕರಾಗಿ ನಟಿಸುತ್ತಿದ್ದು, ಇಲ್ಲಿ ಅವರು ಮಧ್ಯಮ ವರ್ಗದ ಹುಡುಗನಾಗಿ ನಟಿಸುತ್ತಿದ್ದಾರೆ.

ಚಿತ್ರಕ್ಕೆ ವಿ. ಮನೋಹರ್‌ ಸಂಗೀತ ನೀಡುತ್ತಿದ್ದಾರೆ. “ಚಿತ್ರದ ಶೀರ್ಷಿಕೆ ತುಂಬಾ ಸೊಗಸಾಗಿದೆ. ಇದನ್ನು ನೆನಪನ್ನು ಮೂಡಿಸುವ ಸಹಿ ಎಂದಾದರೂ ಕರೆಯಬಹುದು. ಈಗ ಚಿತ್ರರಂಗ ಸಾಕಷ್ಟು ಬದಲಾಗಿದೆ. ಪ್ರೇಕ್ಷಕರು ಬೇರೆ ಬೇರೆ ಭಾಷೆಯ ಸಿನಿಮಾಗಳನ್ನು ನೋಡುತ್ತಿದ್ದಾರೆ. ಒಂದು ಸಣ್ಣ ತಪ್ಪಾದರೂ ಅದನ್ನು ಎತ್ತಿ ತೋರಿಸುತ್ತಾರೆ. ಈ ಅಂಶಗಳನ್ನು ನಿರ್ದೇಶಕರು ಗಮನದಲ್ಲಿಟ್ಟುಕೊಂಡು ಸಿನಿಮಾ ಮಾಡಿದರೆ ಒಳ್ಳೆಯ ಸಿನಿಮಾ ಬರುತ್ತದೆ. ಒಬ್ಬ ನಿರ್ಮಾಪಕ ಗೆದ್ದರೆ ಅನೇಕರಿಗೆ ಅವಕಾಶ ಸಿಗುತ್ತದೆ’ ಎಂದರು. ಚಿತ್ರವನ್ನು ಕುಂದಾಪುರ ಮೂಲದ ಭಾಸ್ಕರ್‌ ಪೂಜಾರಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಅವರ ಪತ್ನಿ ಪೂರ್ಣಿಮಾ ಭಾಸ್ಕರ್‌ ಅವರ ಕಥೆ ಇದೆ. 

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.