ಅನಾಥನೊಬ್ಬನ ಆತ್ಮಚರಿತ್ರೆ


Team Udayavani, May 18, 2018, 6:00 AM IST

k-25.jpg

ಸುದೀಪ್‌ “ಪಾರ್ಥ’ ಎಂಬ ಸಿನಿಮಾ ಮಾಡಿದ್ದರು. ದರ್ಶನ್‌ “ಸಾರಥಿ’ ಮಾಡಿದ್ದರು. ಎರಡೂ ಸೇರಿದರೆ ಏನಾಗುತ್ತದೆ ಹೇಳಿ, “ಪಾರ್ಥಸಾರಥಿ’. ಈಗ “ಪಾರ್ಥಸಾರಥಿ’ ಎಂಬ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದೆ. ಸ್ವತಃ ಆ ಚಿತ್ರತಂಡವೇ ಟ್ರೇಲರ್‌ನಲ್ಲಿ “ಪಾರ್ಥ’ ಹಾಗೂ “ಸಾರಥಿ’ ಎರಡೂ ಸೂಪರ್‌ ಹಿಟ್‌ ಈಗ “ಪಾರ್ಥಸಾರಥಿ’ ಕೂಡಾ ಸೂಪರ್‌ ಹಿಟ್‌ ಎಂದು ಹೇಳಿಕೊಂಡು ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಈ ವಾರ ತೆರೆಕಾಣುತ್ತಿದೆ.

ರಾಬರ್ಟ್‌ ನವರಾಜ್‌ ಈ ಸಿನಿಮಾದ ನಿರ್ದೇಶಕರು. ನಿರ್ದೇಶನದ ಜೊತೆಗೆ ನಿರ್ಮಾಣ ಕೂಡಾ ಇವರದ್ದೇ. ಮೂವತ್ತು ವರ್ಷಗಳಿಂದ ಗೋವಾದಲ್ಲಿ ನೆಲೆಸಿರುವ ರಾಬರ್ಟ್‌, ಸಿನಿಮಾ ಮೇಲಿನ ಪ್ರೀತಿಯಿಂದ “ಪಾರ್ಥಸಾರಥಿ’ ಸಿನಿಮಾ  ಮಾಡಿದ್ದಾಗಿ ಹೇಳುತ್ತಾರೆ. ಆರಂಭದಲ್ಲಿ ಕನ್ನಡ ಸಿನಿಮಾ ಮಾಡುತ್ತೇನೆ ಎಂದಾಗ ಅನೇಕರು ಹೆದರಿಸಿದ್ದರಂತೆ. ಆದರೆ, ಈಗ ಎಲ್ಲರೂ ನೀಡುತ್ತಿರುವ ಸಹಕಾರ ನೋಡಿ ಆವರ ಮಾತು ಸುಳ್ಳು ಎಂದು ರಾಬರ್ಟ್‌ಗೆ ಮನವರಿಕೆಯಾಗಿದೆ. ಚಿತ್ರದಲ್ಲಿ ಅನಾಥ ಹುಡುಗನ ಕಥೆಯನ್ನು ರಾಬರ್ಟ್‌ ಹೇಳಿದ್ದಾರಂತೆ. 

ಕೇವಲ ತಂದೆ-ತಾಯಿ ಪ್ರೀತಿ ಸಿಕ್ಕ ಮಕ್ಕಳಷ್ಟೇ ಒಳ್ಳೆಯವರಾಗುವುದಿಲ್ಲ, ಅನಾಥ ಮಕ್ಕಳಿಗೂ ಪ್ರೀತಿ ಕೊಟ್ಟು ಸಾಕಿದರೆ ಅವರು ಕೂಡಾ ಮುಂದೆ ಒಳ್ಳೆಯ ದಾರಿ ಹಿಡಿಯುತ್ತಾರೆಂಬ ಅಂಶವನ್ನು ಈ ಸಿನಿಮಾ ಮೂಲಕ ಹೇಳಿದ್ದಾರಂತೆ ರಾಬರ್ಟ್‌. ಅನಾಥನಾಗಿ ಬೆಳೆದು ಜನರ ಪ್ರೀತಿಯಿಂದ ಮುಂದೆ ಪ್ರಾಮಾಣಿಕ ಐಪಿಎಸ್‌ ಆಧಿಕಾರಿಯಾಗುವ ಅಂಶದೊಂದಿಗೆ ಚಿತ್ರ ಸಾಗುತ್ತದೆಯಂತೆ. ಚಿತ್ರದಲ್ಲಿ ಪೊಲೀಸ್‌ ಇಲಾಖೆಯ ಕತೆ ಇದ್ದರೂ ಆಕ್ಷನ್‌ಗಿಂತ  ಭಾವನೆಗಳಿಗೆ ಹೆಚ್ಚು ಒತ್ತುಕೊಡಲಾಗಿದೆಯಂತೆ. ಚಿತ್ರದಲ್ಲಿ ರೇಣುಕುಮಾರ್‌ ನಾಯಕರಾಗಿ ನಟಿಸಿದ್ದಾರೆ. ಹಲವು ಸಿನಿಮಾ, ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರ ಮಾಡುತ್ತಿದ್ದ ರೇಣುಕ್‌ಗೆ ನಾಯಕರಾಗಿ ಇದು ಚೊಚ್ಚಲ ಸಿನಿಮಾ. ಮೊದಲ ಚಿತ್ರದಲ್ಲಿ ಅವಕಾಶ ನೀಡಿದ ನಿರ್ದೇಶಕರಿಗೆ ಥ್ಯಾಂಕ್ಸ್‌ ಹೇಳುತ್ತಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಚಿತ್ರದಲ್ಲಿ ಅವರದು ಅನಾಥ ಹುಡುಗನಾಗಿ ಬೆಳೆದು ಮುಂದೆ ಪೊಲೀಸ್‌ ಅಧಿಕಾರಿಯಾಗುವ
ಪಾತ್ರವಂತೆ. ಚಿತ್ರದಲ್ಲಿ ಅಕ್ಷತಾ ನಾಯಕಿ. ಅವರಿಲ್ಲಿ ಪತ್ರಕರ್ತೆಯಾಗಿ ನಟಿಸಿದ್ದಾರೆ. ಪೊಲೀಸ್‌ ಇಲಾಖೆಯಲ್ಲಿನ ವರದಿ ಮಾಡುವ ಸಂದರ್ಭದಲ್ಲಿ ಅಲ್ಲಿನ ಅಧಿಕಾರಿಗಳನ್ನು ಹೇಗೆ ನಿಭಾಯಿಸುತ್ತಾಳೆ ಎಂಬ ಅಂಶದ ಮೂಲಕ ಅವರ ಪಾತ್ರ ಸಾಗುತ್ತದೆಯಂತೆ. ಚಿತ್ರದಲ್ಲಿ ನಟಿಸಿದ ಇತರ ಕಲಾವಿದರು ಕೂಡಾ ತಮ್ಮ ಅನುಭವ ಹಂಚಿಕೊಂಡರು.

ಮೈಸೂರು, ಬೆಂಗಳೂರು, ಉತ್ತರ ಕನ್ನಡ, ಮಂಗಳೂರು, ಗೋವಾ, ಗುಜರಾತ್‌, ರಾಜಸ್ಥಾನ ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರಕ್ಕೆ ಹರ್ಷವರ್ಧನ್‌-ಎನ್‌. ರಾಘವೇಂದ್ರ ಅವರ ಸಂಭಾಷಣೆ, ವಿಕ್ಟರ್‌ ಲೋಗಿದಾಸನ್‌ ಸಂಗೀತ, ನೀಲೇಶ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.