10 ನಿಮಿಷ ಜನ ಏನ್ಮಾಡ್ತಾರೆ?


Team Udayavani, Jun 8, 2018, 6:00 AM IST

cc-28.jpg

“ಇಂಟರ್‌ವಲ್‌ ಮಧ್ಯದ 10 ನಿಮಿಷ ನೀವೇನ್‌ ಮಾಡ್ತೀರೋ ಗೊತ್ತಿಲ್ಲ. ಅದು ಬಿಟ್ಟರೆ ಎರಡು ಗಂಟೆ ಅಂತೂ ಸಖತ್‌ ಎಂಜಾಯ್‌ ಮಾಡ್ತೀರಾ …’

– ನಿರ್ದೇಶಕ ಸಂದೀಪ್‌ ಗೌಡ ಸಿಕ್ಕಾಪಟ್ಟೆ ವಿಶ್ವಾಸದಿಂದ ಹೀಗೆ ಹೇಳಿಕೊಂಡರು. ಅವರ ವಿಶ್ವಾಸ ಎಷ್ಟಿತ್ತೆಂದರೆ ಸಿನಿಮಾದ ಇಂಟರ್‌ವಲ್‌ನ ಹತ್ತು ನಿಮಿಷ ಪ್ರೇಕ್ಷಕ ಹಾಗೂ ವಿಮರ್ಶಕರು ಏನು ಮಾಡುತ್ತಾರೋ ಎಂದು ಯೋಚಿಸುತ್ತಿದ್ದರು. ಏಕೆಂದರೆ, ಅವರು ಮಾಡಿರುವ ಸಿನಿಮಾ ಅಷ್ಟರ ಮಟ್ಟಿಗೆ ಚೆನ್ನಾಗಿ ಮೂಡಿ ಬಂದಿದೆಯಂತೆ. ಅಂದ ಹಾಗೆ, ಅವರು ನಿರ್ಮಿಸಿ, ನಿರ್ದೇಶಿಸಿರುವ ಸಿನಿಮಾ “ಶತಾಯ ಗತಾಯ’. ಚಿತ್ರ ಈ ವಾರ ತೆರೆಕಾಣುತ್ತಿದೆ. ಬಿಡುಗಡೆಗೆ ಮುನ್ನ ಮಾಧ್ಯಮ ಮುಂದೆ ಬಂದಿದ್ದ ಸಂದೀಪ್‌ ಗೌಡ, ಫ‌ುಲ್‌ ಜೋಶ್‌ನಲ್ಲಿದ್ದರು. ಸಿನಿಮಾ ಸಕ್ಸಸ್‌ ಮೀಟ್‌ನಲ್ಲಿರಬೇಕಾದ ಜೋಶ್‌ “ರಿಲೀಸ್‌ ಮೀಟ್‌’ನಲ್ಲಿ ಎದ್ದು ಕಾಣುತ್ತಿತ್ತು. 

ಸಂದೀಪ್‌ ಗೌಡ ಅವರಿಗೆ ಇದು ಮೊದಲ ಸಿನಿಮಾ. ಈ ಹಿಂದೆ ಕಿರುಚಿತ್ರ ಮಾಡಿದ ಅನುಭವವಿದೆ. ಆ ಅನುಭವದೊಂದಿಗೆ ಸಿನಿಮಾ ಮಾಡಿದ್ದಾರೆ. ಜೊತೆಗೆ ಅವರಿಗೆ ಸಿನಿಮಾ ಆಸಕ್ತಿ ಬೆಳೆಯುವಲ್ಲಿ ಕಂಠೀರವ ಸ್ಟುಡಿಯೋದ ಪಾತ್ರ ಕೂಡಾ ಇದೆಯಂತೆ. ಟ್ರಾವೆಲ್ಸ್‌ ನಡೆಸುತ್ತಿರುವ ಸಂದೀಪ್‌ ಗೌಡ ಅವರ ಕಚೇರಿ ಕಂಠೀರವ ಸ್ಟುಡಿಯೋ ಪಕ್ಕದ ಕಟ್ಟಡದ ಮೂರನೇ ಮಹಡಿಯಲ್ಲಿತ್ತಂತೆ. ಕಚೇರಿಯಿಂದ ಚಿತ್ರೀಕರಣ ನೋಡುತ್ತಲೇ ಸಿನಿಮಾ ಆಸಕ್ತಿ ಹೆಚ್ಚಾಯಿತಂತೆ. ಅದರ ಪರಿಣಾಮವಾಗಿ ಈಗ “ಶತಾಯ ಗತಾಯ’ ಮಾಡಿದ್ದಾರೆ. ಅವರೇ ಹೇಳುವಂತೆ ಸಿನಿಮಾ ನೋಡಿದವರು, ಇದು ಚೊಚ್ಚಲ ನಿರ್ದೇಶಕನ ಸಿನಿಮಾದಂತೆ ಕಾಣುತ್ತಿಲ್ಲ ಎಂದರಂತೆ. ಆ ಮಟ್ಟಿಗೆ ಚೆನ್ನಾಗಿ ಮೂಡಿಬಂದಿದೆ ಎಂದು ಮತ್ತೂಮ್ಮೆ ಹೇಳಿಕೊಂಡರು ಅವರು.

ಎಲ್ಲಾ ಓಕೆ, “ಶತಾಯ ಗತಾಯ’ದಲ್ಲಿ ಏನು ಹೇಳಲು ಹೊರಟಿದ್ದಾರೆಂದು ನೀವು ಕೇಳಿದರೆ, ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಸಿನಿಮಾ ಎಂಬ ಉತ್ತರ ಅವರಿಂದ ಬರುತ್ತದೆ. ತಾಯಿ-ಮಗ ಸೆಂಟಿಮೆಂಟ್‌ ಜೊತೆಗೆ ಇದೊಂದು ರಿವೆಂಜ್‌ ಸ್ಟೋರಿಯಂತೆ. ಮಗ ಹೇಗೆ ತನ್ನ ಸೇಡು ತೀರಿಸಿಕೊಳ್ಳುತ್ತಾನೆಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆಯಂತೆ. ತಾಯಿ-ಮಗನ ಸಿನಿಮಾ ಎಂದಾಕ್ಷಣ ಇಲ್ಲಿ ಅತಿಯಾದ ಸೆಂಟಿಮೆಂಟ್‌ ಇಲ್ಲದೇ, ಆ್ಯಕ್ಷನ್‌ಗೆ ಹೆಚ್ಚು ಒತ್ತುಕೊಡಲಾಗಿದೆ ಎನ್ನುವುದು ನಿರ್ದೇಶಕರ ಮಾತು. ಚಿತ್ರದಲ್ಲಿ ರಘು ರಾಮಪ್ಪ ನಾಯಕರಾಗಿ ನಟಿಸಿದ್ದಾರೆ. ಈ ಹಿಂದೆ “ಜಸ್ಟ್‌ ಪಾಸ್‌’ ಎಂಬ ಸಿನಿಮಾದಲ್ಲಿ ನಟಿಸಿದ್ದ ರಘು ಆ ನಂತರ ಸಿನಿಮಾ ಮಾಡಿರಲಿಲ್ಲ. ಈಗ “ಶತಾಯ ಗತಾಯ’ ಮೂಲಕ ವಾಪಾಸ್ಸಾಗುತ್ತಿದ್ದಾರೆ. ಈ ಚಿತ್ರದಲ್ಲಿ ಅವರಿಗೆ ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. ನಾಯಕಿಯಾಗಿ ಸೋನಿಕಾ ನಟಿಸಿದ್ದಾರೆ. ಚಿತ್ರಕ್ಕೆ ಸಂಗೀತ ನೀಡಿರುವ ರವಿನಂದನ್‌ ಜೈನ್‌ ಕೂಡಾ ಹಾಡುಗಳ ಬಗ್ಗೆ ಮಾತನಾಡಿದರು. ಚಿತ್ರವನ್ನು ವೆಂಕಟ್‌ ಬಿಡುಗಡೆ ಮಾಡುತ್ತಿದ್ದಾರೆ. 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.