12 ನಿಮಿಷದಲ್ಲೊಂದು ಕಾರ್ಯಕ್ರಮ


Team Udayavani, Jun 15, 2018, 6:00 AM IST

bb-28.jpg

ಸಾಮಾನ್ಯವಾಗಿ ಚಿತ್ರಗಳ ಆಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮಗಳೆಂದರೆ ಅದಕ್ಕೆ ಗಂಟೆಗಟ್ಟಲೆ ಸಮಯ ಮೀಸಲಿಡಬೇಕು. ಇನ್ನೂ ಕೆಲ ಚಿತ್ರಗಳ ಆಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮಗಳಂತೂ ಸಾಕೆನಿಸಿದರೂ ವೇದಿಕೆ ಮೇಲೆ ಮಾತು-ಮಂಥನ ಜೋರಾಗಿಯೇ ನಡೆಯುತ್ತಿರುತ್ತೆ. ಆದರೆ, ಕೇವಲ 12 ನಿಮಿಷಗಳಲ್ಲಿ ಆಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮ ಮಾಡಿ ಮುಗಿಸಬಹುದು ಎಂಬುದಕ್ಕೆ ಇತ್ತೀಚೆಗೆ ಹೊಸಬರ “ಸಂಕಷ್ಟಕರ ಗಣಪತಿ’ ಚಿತ್ರ ಸಾಕ್ಷಿಯಾಗಿದ್ದು ವಿಶೇಷ.

ಲಿಖೀತ್‌ ಶೆಟ್ಟಿ ಅಭಿನಯದ “ಸಂಕಷ್ಟಕರ ಗಣಪತಿ’ ಚಿತ್ರದ ಆಡಿಯೋ ಬಿಡುಗಡೆ ಅಷ್ಟು ಬೇಗ ಮುಗಿಯೋಕೆ ಕಾರಣ, ಅಚ್ಚುಕಟ್ಟಾದ ನಿರೂಪಣೆ, ವೇದಿಕೆಯಲ್ಲಿ ನಿರ್ದೇಶಕ, ನಾಯಕ, ನಾಯಕಿ, ಸಂಗೀತ ನಿರ್ದೇಶಕ ಹಾಗೂ ಅತಿಥಿಯಾಗಿ ಆಗಮಿಸಿದ್ದವರು ಪುನೀತ್‌ ರಾಜಕುಮಾರ್‌ ಮತ್ತು ಗುರುಕಿರಣ್‌. ಹೀಗಾಗಿ ಎಲ್ಲರೂ ಒಂದೊಂದು ನಿಮಿಷ ಮಾತಾಡುವ ಹೊತ್ತಿಗೆ ಆಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮಕ್ಕೂ ತೆರೆಬಿತ್ತು. ಮೊದಲಿಗೆ ಚಿತ್ರದ ಟ್ರೇಲರ್‌ ತೋರಿಸಲಾಯಿತು. ಅದಾದ ಬಳಿಕ ವೇದಿಕೆಗೆ ಎಲ್ಲರನ್ನೂ ಕರೆಯಲಾಯಿತು. ಮೊದಲಿಗೆ ನಿರ್ದೇಶಕ ಅರ್ಜುನ್‌ ಕುಮಾರ್‌ ಅವರಿಗೆ ಮೈಕ್‌ ಕೊಡಲಾಯಿತು. ಮಾತಿಗಿಳಿದ ನಿರ್ದೇಶಕರು, “ಇದೊಂದು ಹೊಸ ಬಗೆಯ ಚಿತ್ರ. ಈಗಾಗಲೇ ಟ್ರೇಲರ್‌ಗೆ ಒಳ್ಳೆಯ ಮೆಚ್ಚುಗೆ ಸಿಕ್ಕಿದೆ. ಹೊಸ ಕಾನ್ಸೆಪ್ಟ್ ಮೆಚ್ಚಿಕೊಂಡು ನಿರ್ಮಾಪಕರು ಅವಕಾಶ ಕೊಟ್ಟಿದ್ದಾರೆ. ಸಿನಿಮಾ ಕೂಡ ನಿರೀಕ್ಷೆ ಮೀರಿ ಮೂಡಿಬಂದಿದೆ. ಜನರು ಹೇಗೆ ಸ್ವೀಕರಿಸುತ್ತಾರೆ ಎಂಬ ಕುತೂಹಲವಿದೆ. ಪಿಆರ್‌ಕೆ ಆಡಿಯೋ ಸಂಸ್ಥೆ ನಮ್ಮ ಹಾಡುಗಳನ್ನು ಬಿಡುಗಡೆ ಮಾಡಿದೆ. ನಿಶ್ಚಲ್‌ ದಂಬೆಕೋಡಿ, ನಿತಿನ್‌ ಜಯ್‌, ಮದನ್‌ ಬೆಳ್ಳಿಸಾಲು ಸಾಹಿತ್ಯವಿದೆ. ರಘು ದೀಕ್ಷೀತ್‌, ಸಂಚಿತ್‌ ಹೆಗಡೆ, ರಕ್ಷಿತಾರಾವ್‌, ದೀಪಕ್‌ ದೊಡೆರ, ಇಶಾ ಸುಚಿ, ಮೆಹಬೂಬ್‌ ಸಾಬ್‌, ಗುರುಕಿರಣ್‌, ಅನನ್ಯ ಭಟ್‌ ಹಾಡಿದ್ದಾರೆ ಅಂತ ವಿವರ ಕೊಟ್ಟರು ನಿರ್ದೇಶಕರು.ಆಡಿಯೋ ಬಿಡುಗಡೆ ಮಾಡಿದ ಪುನೀತ್‌ ರಾಜಕುಮಾರ್‌, “ಹೊಸಬರೆಲ್ಲಾ ಸೇರಿ ಪ್ರೀತಿಯಿಂದ ಕನಸು ಕಟ್ಟಿಕೊಂಡು ಸಿನಿಮಾ ಮಾಡಿದ್ದಾರೆ. ಹೊಸಬರು ಹೊಸತನದೊಂದಿಗೆ ಬರುತ್ತಿದ್ದಾರೆ. ಅವರ ಹೊಸ ಪ್ರಯೋಗಗಳು ಕ್ಲಿಕ್‌ ಆಗುತ್ತಿವೆ. ಈ ಚಿತ್ರಕ್ಕೆ ದೇವರು ಒಳ್ಳೆಯದನ್ನ ಮಾಡಲಿ, ಅಭಿಮಾನಿ ದೇವರುಗಳು ಇವರ ಸಿನಿಮಾಗೆ ಗೆಲುವು ಕೊಡಲಿ. ನಿರ್ಮಾಪಕರಿಗೆ ಹಾಕಿದ ಹಣ ಹಿಂದಿರುಗಲಿ’ ಅಂದರು ಪುನೀತ್‌.

“ರಿತ್ವಿಕ್‌ ಮುರಳೀಧರ್‌ ಅವರಿಗೆ ಇದು ಮೊದಲ ಚಿತ್ರ. ಒಳ್ಳೆಯ ಸಂಗೀತ, ಹಾಡು ಕೊಟ್ಟಿದ್ದಾರೆ. ನನಗೆ ಇದುವರೆಗೆ ಫಾಸ್ಟ್‌ ಸಾಂಗ್‌ ಅಥವಾ ವೆಸ್ಟ್ರನ್‌ ಶೈಲಿಯ ಹಾಡು ಸಿಗುತ್ತಿದ್ದವು. ಇಲ್ಲಿ ಪ್ಯಾಥೋ ಹಾಡು ಹಾಡುವ ಅವಕಾಶ ಸಿಕ್ಕಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಹರಸಿದರು ಗುರುಕಿರಣ್‌.

ನಾಯಕ ಲಿಖೀತ್‌ ಶೆಟ್ಟಿಗೆ ಒಳ್ಳೆಯ ಪ್ರಯತ್ನ ಮಾಡಿರುವ ಖುಷಿ. “ಕನಸು ನನಸಾಗಿದೆ. ಈ ನಮ್ಮ ಹೊಸ ಪ್ರಯತ್ನಕ್ಕೆ ಎಲ್ಲರೂ ಸಹಕರಿಸಿ’ ಅಂತ ಮನವಿ ಇಟ್ಟರೆ, ನಾಯಕಿ ಶ್ರುತಿ ಮೊದಲ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಖುಷಿಗೊಂಡಿದ್ದಾರಂತೆ. ಇನ್ನು ಈ ವೇಳೆ ಸಂಗೀತ ನಿರ್ದೇಶಕ ರಿತ್ವಿಕ್‌ ಮುರಳೀಧರ್‌, ನಿರ್ಮಾಪಕರಾದ ರಾಜೇಶ್‌ ಬಾಬು, ಫೈಜಾನ್‌ ಖಾನ್‌, ಜೋಡಿದಾರ್‌, ಹೇಮಂತ್‌ ಕುಮಾರ್‌, ಪ್ರಮೋದ್‌ ನಿಂಬಾಳ್ಕರ್‌, ಚೆಲುವರಾಜ್‌ ನಾಯ್ಡು ಸೇರಿದಂತೆ ಚಿತ್ರತಂಡ ಹಾಜರಿತ್ತು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.