ಟ್ರೇಲರ್‌ ಪುರಾಣ!


Team Udayavani, Jun 29, 2018, 6:00 AM IST

x-28.jpg

“ಜೂನ್‌ 23, 2017 ರಂದು ಚಿತ್ರಕ್ಕೆ ಮುಹೂರ್ತ. ಜೂನ್‌ 23, 2018 ರಂದು ಚಿತ್ರದ ಟ್ರೇಲರ್‌ ಬಿಡುಗಡೆ. ಒಂದು ವರ್ಷದಲ್ಲಿ ಸಿನಿಮಾ ಶುರುವಾಗಿ, ಮುಗಿದು ಇದೀಗ ಬಿಡುಗಡೆ ಹಂತಕ್ಕೆ ಬಂದಿದೆ…’

– ಹೀಗೆ ಖುಷಿಯಿಂದ ಹೇಳಿಕೊಂಡರು ನಿರ್ದೇಶಕ ಮೋಹನ್‌ ಕಾಮಾಕ್ಷಿ. ಅವರು ಹೇಳಿಕೊಂಡಿದ್ದು, ತಮ್ಮ ನಿರ್ದೇಶನದ “ಆದಿ ಪುರಾಣ’ ಚಿತ್ರದ ಬಗ್ಗೆ. ಅಂದು ಇಡೀ ಚಿತ್ರತಂಡ ಸಂತಸದಲ್ಲಿತ್ತು. ಅದಕ್ಕೆ ಕಾರಣ, ಚಿತ್ರದ ಟ್ರೇಲರ್‌ಗೆ ಉಪೇಂದ್ರ ಚಾಲನೆ ಕೊಟ್ಟಿದ್ದು. ಶೂಟಿಂಗ್‌ ಸೆಟ್‌ಗೆ ಹೋಗಿದ್ದ ಚಿತ್ರತಂಡವನ್ನು ಪ್ರೀತಿಯಿಂದ ಬರಮಾಡಿಕೊಂಡ ಉಪೇಂದ್ರ, “ಆದಿಪುರಾಣ’ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಆ ಖುಷಿ ಹಂಚಿಕೊಳ್ಳುವುದರ ಜೊತೆಗೆ ಅಂದು ಟ್ರೇಲರ್‌ ತೋರಿಸಿ, ಮಾತಿಗೆ ನಿಂತರು ನಿರ್ದೇಶಕರು.

“ಚಿತ್ರ ಸೆನ್ಸಾರ್‌ಗೆ ಹೋಗಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ ಜುಲೈನಲ್ಲಿ ಬಿಡುಗಡೆಯಾಗಲಿದೆ. ಈ ಕಥೆಗೆ ಕಾಶೀನಾಥ್‌ ಅವರು ಸ್ಫೂರ್ತಿ. ಅವರಿಂದಲೇ ಟ್ರೇಲರ್‌ ಬಿಡುಗಡೆ ಮಾಡಿಸುವ ಆಸೆ ಇತ್ತು. ಆದರೆ, ಆಗಲಿಲ್ಲ. ಅವರ ಶಿಷ್ಯ ಉಪೇಂದ್ರ ಅವರು ಟ್ರೇಲರ್‌ ರಿಲೀಸ್‌ ಮಾಡಿ ಶುಭ ಹಾರೈಸಿದ್ದಾರೆ. ಇದು ಈಗಿನ ಯುವ ಮನಸ್ಸಿನ ತಳಮಳ ಕುರಿತಾದ ಚಿತ್ರ. ಪಕ್ಕಾ ಮನರಂಜನೆ ಚಿತ್ರವಾಗಿದ್ದು, ಎಲ್ಲಾ ವರ್ಗದವರು ನೋಡಬಹುದಾದ ಚಿತ್ರ’ ಅಂತ ವಿವರ ಕೊಟ್ಟರು ನಿರ್ದೇಶಕರು.

ನಿರ್ಮಾಪಕ ಶಮಂತ್‌ ಮಾತನಾಡಿ, “ಈಗಾಗಲೇ ಟ್ರೇಲರ್‌ಗೆ ಒಳ್ಳೆಯ ಮೆಚ್ಚುಗೆ ಸಿಕ್ಕಿದೆ. ಇಲ್ಲಿ ಕಾಲೇಜ್‌ ಹುಡುಗನ ಓದು, ಲವ್ವು, ಮದುವೆ ಮತ್ತು ಆ ನಂತರದಲ್ಲಿ ನಡೆಯುವ ಒದ್ದಾಟಗಳು ಚಿತ್ರದ ಹೈಲೆಟ್‌. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಒಂದೊಂದೇ ಹಾಡನ್ನು ವಿಶೇಷವಾಗಿ ಬಿಡುಗಡೆ ಮಾಡಲು ಯೋಚಿಸಿದ್ದೇವೆ. ಈ ಬಾರಿ, ನಮ್ಮ ಸಂಸ್ಥೆಯಿಂದ ಅಪ್ಪಟ ಮನರಂಜನೆ ಚಿತ್ರ ಹೊರಬರುತ್ತಿದೆ. ಪಕ್ಕಾ ಯೂಥ್‌ ಸಿನಿಮಾ ಇದಾಗಿದ್ದು, ಆರಂಭದಿಂದ ಅಂತ್ಯದವರೆಗೆ ನಕ್ಕು ಹೊರಬರುವಂತಹ ಚಿತ್ರ ಇದಾಗಲಿದೆ’ ಎಂಬ ಗ್ಯಾರಂಟಿ ಕೊಟ್ಟರು ಶಮಂತ್‌.

ನಾಯಕ ಶಶಾಂಕ್‌ ಅವರಿಗೆ ಒಂದು ವರ್ಷ ಹೇಗೆ ಕಳೆಯಿತೆಂಬುದೇ ಗೊತ್ತಾಗಲಿಲ್ಲವಂತೆ. ಮೊದಲ ಚಿತ್ರವಾದ್ದರಿಂದ ಖುಷಿ ಮತ್ತು ಭಯ ಎರಡೂ ಇದೆಯಂತೆ. “ಒಳ್ಳೆಯ ಚಿತ್ರ ಮಾಡಿದ ಖುಷಿ ಒಂದಡೆಯಾದರೆ, ಜನರು ಹೇಗೆ ಸ್ವೀಕರಿಸುತ್ತಾರೋ ಎಂಬ ಭಯ ಇನ್ನೊಂದೆಡೆ. ನಾನು ಉಪೇಂದ್ರ ಅವರ ಅಭಿಮಾನಿ, ನನ್ನ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಅವರು ಶುಭಕೋರಿದ್ದು ಮರೆಯದ ಕ್ಷಣ. ಟೀಸರ್‌ಗೆ ಮೆಚ್ಚುಗೆ ಸಿಕ್ಕಿದ್ದು, ಈಗ ಟ್ರೇಲರ್‌ಗೂ ಎಲ್ಲೆಡೆಯಿಂದ ಉತ್ತಮ ಮಾತುಗಳು ಕೇಳಿಬರುತ್ತಿವೆ’ ಎಂಬುದು ಶಶಾಂಕ್‌ ಮಾತು.

ನಾಯಕಿ ಮೋಕ್ಷ ಕುಶಾಲ್‌ ಸಿನಿಮಾ ಯಾವಾಗ ರಿಲೀಸ್‌ ಆಗುತ್ತೋ ಎಂಬುದನ್ನು ಎದುರು ನೋಡುತ್ತಿದ್ದಾರಂತೆ. ಇನ್ನುತಾಯಿಯಾಗಿ ನಟಿಸಿರುವ ವತ್ಸಲಾ ಮೋಹನ್‌ ಪಾತ್ರ ಕುರಿತು ಹೇಳಿಕೊಂಡರು. ಸಂಗೀತ ನಿರ್ದೇಶಕ ಸಿದ್ಧಾರ್ಥ, ವಿಕ್ರಮ್‌ ಹಾಡು ಹುಟ್ಟಿದ ಬಗ್ಗೆ ವಿವರಿಸಿದರು. ಅಂದು ನಟ ಕಿರಣ್‌, ನಿರ್ಮಾಪಕ ಮನುಗೌಡ ಟ್ರೇಲರ್‌ ವೀಕ್ಷಿಸಿ, ಚಿತ್ರತಂಡಕ್ಕೆ ಹಾರೈಸಿದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.