ವಾಸ್ತವ ಮಯಂ


Team Udayavani, Jul 6, 2018, 6:00 AM IST

u-27.jpg

ಸಂಬಂಧಗಳ ಕುರಿತು ಅನೇಕ ಚಿತ್ರಗಳು ಬಂದು ಹೋಗಿವೆ. ಬರುತ್ತಲೂ ಇವೆ. ಆ ಸಾಲಿಗೆ “ಅಸತೋಮ ಸದ್ಗಮಯ’ ಚಿತ್ರವೂ ಹೊಸ ಸೇರ್ಪಡೆ ಎನ್ನಬಹುದು. ಈ ವಾರ ಚಿತ್ರ ತೆರೆಗೆ ಬರುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಎರಡು ತಿಂಗಳ ಹಿಂದೆಯೇ ಚಿತ್ರ ಪ್ರೇಕ್ಷಕರ ಎದುರು ಬರಬೇಕಿತ್ತು. ಆದರೆ, ನಿರ್ಮಾಪಕ ಅಶ್ವಿ‌ನ್‌. ಜಿ.ಪರೋರ ಅವರು ಚುನಾವಣೆಯಲ್ಲಿ ತೊಡಗಿಕೊಂಡಿದ್ದರಿಂದ ಚಿತ್ರದ ಬಿಡುಗಡೆ ವಿಳಂಬವಾಗಿ, ಈ ವಾರ ರಾಜ್ಯಾದ್ಯಂತ ಸುಮಾರು 70 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ತೀರ್ಮಾನಿಸಿದ್ದಾರೆ ನಿರ್ಮಾಪಕರು.

ಇದು ಈಗಿನ ವಾಸ್ತವ ಚಿತ್ರಣ ಹೊಂದಿರುವ ಚಿತ್ರ. ಹಿಂದಿನವರು ಸಂಬಂಧಗಳನ್ನು ಇಂದಿಗೂ ಉಳಿಸಿಕೊಂಡಿದ್ದಾರೆ. ಆದರೆ, ಈಗಿನ ಜನರೇಷನ್‌ ಕೇವಲ ವಾಟ್ಸಾಪ್‌, ಫೇಸ್‌ಬುಕ್‌ ಮೂಲಕ ಸಂಬಂಧ ಬೆಸೆಯುತ್ತಿದ್ದಾರೆ. ಆ ಕುರಿತ ವಿಶೇಷ ಅಂಶಗಳು ಚಿತ್ರದ ಹೈಲೆಟ್‌. ಇನ್ನು, ಇಲ್ಲಿ ಹಾರರ್‌ಗೂ ಜಾಗವಿದೆ. ಜೊತೆಗೆ ಶಿಕ್ಷಣ ವ್ಯವಸ್ಥೆ ಕುರಿತಾದ ವಿಷಯವೂ ಇರಲಿದೆ. ಒಟ್ಟಾರೆ ಇಲ್ಲಿ ಭಾವನೆಗಳ ಕುರಿತಾದ ಒಂದು ಮೌಲ್ಯ ಸಾರುವ ಕಥೆ ಇಲ್ಲಿದೆ ಎಂಬುದು ಚಿತ್ರತಂಡದ ಮಾತು.

ಚಿತ್ರಕ್ಕೆ ರಾಜೇಶ್‌ ವೇಣೂರು ನಿರ್ದೇಶಕರು. ಕಥೆ, ಚಿತ್ರಕಥೆ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ. ವಹಾಬ್‌ ಸಲೀಂ ನಾಲ್ಕು ಹಾಡುಗಳಿಗೆ ಸಾಹಿತ್ಯ ರಚಿಸಿ ಸಂಗೀತ ನೀಡಿದ್ದಾರೆ. ರಾಧಿಕಾ ಚೇತನ್‌ ಇಲ್ಲಿ ಮುಖ್ಯ ಆಕರ್ಷಣೆ. ಅವರು ವಿದೇಶದಿಂದ ಭಾರತಕ್ಕೆ ಆಗಮಿಸುವ ಪಾತ್ರವಂತೆ. ಸದಾ ಸೋಷಿಯಲ್‌ ಮೀಡಿಯಾದ ನಂಟು ಬೆಳೆಸಿಕೊಂಡಿರುವ ಹುಡುಗಿಯ ಪಾತ್ರವದು. ಹೊಸ ರೀತಿಯ ಪಾತ್ರ ಮಾಡಿದ್ದಕ್ಕೆ ರಾಧಿಕಾ ಚೇತನ್‌ ಅವರಿಗೂ ಖುಷಿ ಇದೆ. ನಾಯಕ ರಾಜ್‌ ಕಿರಣ್‌ಗೆ ಚಿತ್ರ ಬಿಡುಗಡೆಯಾಗುತ್ತಿರುವುದಕ್ಕೆ ಒಂದು ಕಡೆ ಭಯ, ಇನ್ನೊಂದು ಕಡೆ ಖುಷಿ ಇದೆಯಂತೆ. ಜನರು ಹೇಗೆ ಸ್ವೀಕರಿಸುತ್ತಾರೆ ಎಂಬ ಕುತೂಹಲ ಅವರದು.  ವಿಕ್ರಮ್‌ ಖಳನಾಯಕರಾಗಿ ನಟಿಸಿದ್ದಾರೆ.

 ಚಿತ್ರಕ್ಕೆ ಮಣಿಕಾಂತ್‌ ಕದ್ರಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ಕಿಶನ್‌ ಛಾಯಗ್ರಹಣವಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.