ಇಲ್ಲಿ ಪ್ರತಿಯೊಬ್ಬರೂ ಕೀಚಕರೇ


Team Udayavani, Jul 20, 2018, 6:00 AM IST

x-26.jpg

“ಅನೇಕ ಚಿತ್ರಗಳಿಗೆ ಪತ್ರಿಕೆ ಹಾಗೂ ವಾಹಿನಿಗಳಲ್ಲಿ ಬರುವ ಕಥೆಗಳೇ ಸ್ಪೂರ್ತಿ…’
– “ಕೀಚಕರು’ ಎಂಬ ಚಿತ್ರದ ಕಥೆ ಕೂಡ ಪತ್ರಿಕೆಗಳೇ ಸ್ಫೂರ್ತಿ. ಹೀಗೆ ಹೇಳುತ್ತಾ ಹೋದರು ನಿರ್ದೇಶಕ ಶಿವಮಣಿ. ಇವರು ಆ ಹಿರಿಯ ನಿರ್ದೇಶಕ ಶಿವಮಣಿ ಅಲ್ಲ. ಅದೇ ಹೆಸರಿನ ಮತ್ತೂಬ್ಬ ನಿರ್ದೇಶಕರು. ಇವರು ಈಗ “ಕೀಚಕರು’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 

ತಮ್ಮ ಚೊಚ್ಚಲ ಚಿತ್ರ ಕುರಿತು ಮಾತಿಗಿಳಿದ ಶಿವಮಣಿ, “ಇತ್ತೀಚೆಗೆ ಪತ್ರಿಕೆಗಳಲ್ಲಿ ಬಾಲಕಿಯರ ಮೇಲೆ, ಅತ್ಯಾಚಾರ, ಕೊಲೆ ಸುದ್ದಿಗಳೇ ಹೆಚ್ಚಾಗಿವೆ. ಅದರ ಮೇಲೊಂದು ಸಿನಿಮಾ ಯಾಕೆ ಮಾಡಬಾರದು ಅಂತ ನಿರ್ಧರಿಸಿ, ಕಥೆ ಹೆಣೆದೆ. ಆರಂಭದಲ್ಲಿ ಯಾರೂ ನಿರ್ಮಾಪಕರು ಸಿಗಲಿಲ್ಲ. ಕೊನೆಗೆ ಗೆಳೆಯರೇ ಸೇರಿ ಚಿತ್ರ ನಿರ್ಮಾಣಕ್ಕೆ ಮುಂದಾದೆವು. ಸಮಾಜದಲ್ಲಿ ಈಗ ಅತ್ಯಾಚಾರ ಸುದ್ದಿಗಳೇ ಹೆಚ್ಚು. ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದ ಸುದ್ದಿ ಬೆಚ್ಚಿಬೀಳಿಸಿದ್ದು ನಿಜ. ಆ ರೀತಿಯ ವಿಷಯ ಇಲ್ಲಿದೆಯಾದರೂ, ಇಲ್ಲೊಂದು ಸಂದೇಶವಿದೆ. ಇಂತಹ ಘಟನೆಗಳು ನಡೆದಾಗ, ಪೊಲೀಸರ ಮೊರೆ ಹೋಗುತ್ತಾರೆ. ಆದರೆ, ಕೆಲವು ಅಧಿಕಾರಿಗಳೇ ರಕ್ಷಣೆ ಮಾಡುವುದನ್ನು ಬಿಟ್ಟು, ಕೀಚಕರಾಗುತ್ತಿದ್ದಾರೆ. ಅದೇ ವಸ್ತು ಚಿತ್ರದಲ್ಲಿದೆ. ಇಲ್ಲಿ ಕಾಣುವ ಪ್ರತಿ ಪಾತ್ರಗಳೂ ಕೀಚಕರೇ. ಹಾಗಂತ, ಇಲ್ಲಿ ಕೆಟ್ಟದ್ದನ್ನು ತೋರಿಸುವ ಮಟ್ಟಕ್ಕೆ ಹೋಗಿಲ್ಲ. ಕುಟುಂಬ ಕುಳಿತು ಚಿತ್ರ ನೋಡಬಹುದು. ಇಲ್ಲಿ ಸಾಕಷ್ಟು ಸಂದೇಶವಿದೆ. ಅದನ್ನು ಚಿತ್ರದಲ್ಲೇ ನೋಡಬೇಕೆಂಬುದು ನಿರ್ದೇಶಕರ ಮಾತು.

ಇನ್ನು, ಚಿತ್ರದಲ್ಲಿ “ಉಗ್ರಂ’ ರೆಡ್ಡಿ ಪೊಲೀಸ್‌ ಅಧಿಕಾರಿಯಾಗಿ ನಟಿಸಿದ್ದಾರೆ. ಹಾಗಂತ ಅವರದು ದಕ್ಷ ಪೊಲೀಸ್‌ ಪಾತ್ರವಲ್ಲ. ಬದಲಿಗೆ ಅದು ಕೀಚಕ ಪೊಲೀಸ್‌ ಪಾತ್ರವಂತೆ. ಇದುವರೆಗೆ ಅವರು 300 ಚಿತ್ರಗಳಲ್ಲಿ ನಟಿಸಿದ್ದು, ಕಳೆದ ಹದಿನೈದು ವರ್ಷಗಳಿಂದಲೂ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ. “ಈ ಚಿತ್ರದ ಪಾತ್ರ ಅವರಿಗೆ ಖುಷಿ ಕೊಟ್ಟಿದೆಯಂತೆ. ಒಬ್ಬ ಕಲಾವಿದನಿಗೆ ಇಂತಹ ಪಾತ್ರಗಳು ಚಾಲೆಂಜ್‌ ಎನಿಸುತ್ತವೆ. ಅಂಥದ್ದೊಂದು ಪಾತ್ರವನ್ನು ನಿರ್ದೇಶಕರು ಕಟ್ಟಿಕೊಟ್ಟಿದ್ದಾರೆ’ ಅಂದರು ಉಗ್ರಂ ರೆಡ್ಡಿ.

ಸಂಗೀತ ನಿರ್ದೇಶಕ ವಿನು ಮನಸು ಚಿತ್ರಕ್ಕೆ ಸಂಗೀತ ನೀಡಿದ್ದು, “ಒಂದು ಸಾಮಾಜಿಕ ಕಳಕಳಿ ಇರುವ ಚಿತ್ರದಲ್ಲಿ ಕೆಲಸ ಮಾಡಿರುವ ಖುಷಿ ನನ್ನದು’ ಎಂದರು. ಎಸ್‌.ಕೆ. ಸಾಲಿ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ಉಳಿದಂತೆ ಚಿತ್ರದಲ್ಲಿ ಜಯನಾಯ್ಕ ಪೊಲೀಸ್‌ ಎಂಟ್‌ಕೌಂಟರ್‌ ಅಧಿಕಾರಿಯಾಗಿ ನಟಿಸಿದ್ದಾರೆ. ಚಾಮಿ ಸುನೀಲ್‌ ಕಾಮಿಡಿ ಪಾತ್ರ ನಿರ್ವಹಿಸಿದ್ದಾರೆ. ಬುಲೆಟ್‌ ರಾಜ ಖಳನಾದರೆ, ಜಗ್ಗಿ ಕಲಾಕಾರ್‌ ಅವರಿಗೆ ಇಲ್ಲಿ ಕಿಡ್ನಾಪರ್‌ ಪಾತ್ರ ಸಿಕ್ಕಿದೆಯಂತೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.