ಉಡದಂತೆ ಇರುವ ಹುಂಬನ ಕಥೆ


Team Udayavani, Jul 20, 2018, 6:00 AM IST

x-29.jpg

    
“ಗೂಳಿಹಟ್ಟಿ’ ಚಿತ್ರದಲ್ಲಿ ನಟಿಸಿದ್ದ ಪವನ್‌ ಸೂರ್ಯ ಈಗ ಹೆಸರು ಬದಲಾಯಿಸಿಕೊಂಡಿದ್ದಾರೆ. ಸೂರ್ಯನನ್ನು ಶೌರ್ಯನನ್ನಾಗಿಸಿಕೊಂಡಿದ್ದಾರೆ. ಅಲ್ಲಿಗೆ ಇನ್ನು ಅವರು ಪವನ್‌ ಶೌರ್ಯ. ಅದೇ ಹೆಸರಲ್ಲಿ “ಉಡುಂಬ’ ಎಂಬ ಚಿತ್ರವನ್ನು ಮಾಡಿ ಮುಗಿಸಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಮುಂದಿನ ತಿಂಗಳು ಚಿತ್ರ ಬಿಡುಗಡೆಯಾಗುತ್ತದಂತೆ. ಅದಕ್ಕೂ ಮುನ್ನ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಈ ಚಿತ್ರಕ್ಕೆ ಶಿವರಾಜ್‌ ಎನ್ನುವವರು ಕಥೆ ಬರೆದು ನಿರ್ದೇಶಿಸಿದ್ದಾರೆ. ಹೋದಲ್ಲಿ ಬಂದಲ್ಲಿ ಎಲ್ಲರೂ ಅವರನ್ನು “ಉಡುಂಬ’ ಎಂದರೇನು ಎಂದು ಕೇಳುತ್ತಾರಂತೆ. ನಿರ್ದೇಶಕರು ಹೇಳುವಂತೆ, ಇದು “ಉಡುಂಬ’ ಎಂದರೆ ಉಡದಂತೆ ಇರುವ ಹುಂಬನ ಕಥೆ. “ಉಡ ಎಂದರೆ ಹೇಗೆ ಅಂತ ಎಲ್ಲರಿಗೂ ಗೊತ್ತು. ಒಮ್ಮೆ ಹಿಡಿದರೆ ಬಿಡೋದಿಲ್ಲ. ಅದೇ ರೀತಿ ಒಬ್ಬ ಹುಂಬ, ಉಡದಂತೆ ಆಡಿದರೆ ಹೇಗಿರುತ್ತದೋ ಅದೇ ಕಥೆ. ಚಿತ್ರ ಬಹಳ ಚೆನ್ನಾಗಿ ಬಂದಿದೆ’ ಎಂದರು.

ಪವನ್‌ ಶೌರ್ಯ ಇಲ್ಲಿ ಮೀನುಗಾರರ ಹುಡುಗನಾಗಿ ಕಾಣಿಸಿಕೊಂಡಿದ್ದಾರಂತೆ. “”ಗೂಳಿಹಟ್ಟಿ’ ನಂತರ ವಿಭಿನ್ನವಾದ ಪಾತ್ರ ಇದು. ಹಾಡು, ಫೈಟು, ಎಮೋಷನ್‌ ಎಲ್ಲಾ ಚೆನ್ನಾಗಿ ಬಂದಿದೆ. ಚಿತ್ರಕ್ಕೆ ಕುಂಗು ಚಂದ್ರು ಮತ್ತು ಜಾಗ್ವಾರ್‌ ಸಣ್ಣಪ್ಪ ಅವರು ಫೈಟ್‌ ಮಾಡಿಸಿದ್ದಾರೆ. ಕನ್ನಡ ಚಿತ್ರ ನೋಡಿ ಬೆಳಸಿ’ ಎಂದು ಹೇಳಿದರು. ಇನ್ನು ನಾಯಕಿ ಚಿರಶ್ರೀ ಇಲ್ಲಿ ನರ್ಸಿಂಗ್‌ ವಿದ್ಯಾರ್ಥಿನಿಯಾಗಿ ನಟಿಸಿದ್ದಾರಂತೆ. “ಸಿಟಿಗೆ ಹೋಗಿರಿ¤àನಿ. ಅಲ್ಲಿ ಹೀರೋ ಜೊತೆ …’ ಅಂತ ಏನೋ ಹೇಳುವುದಕ್ಕೆ ಹೊರಟಿದ್ದರು. ಅಷ್ಟರಲ್ಲಿ ನಿರ್ದೇಶಕರು ಕಣ್ಣು ಬಿಟ್ಟಿದ್ದರಿಂದ, “ಸಾಕು ಅಷ್ಟೇ’ ಅಂತ ಹೇಳಿ ಮೈಕು ಕೆಳಗಿಟ್ಟರು.

ಚಿತ್ರಕ್ಕೆ “ಬಹದ್ದೂರ್‌’ ಚೇತನ್‌, “ಅಲೆಮಾರಿ’ ಸಂತು ಮತ್ತು ಲೋಕೇಶ್‌ ಹಾಡುಗಳನ್ನು ಬರೆದಿದ್ದಾರೆ. ಇನ್ನು ಚಿತ್ರಕ್ಕೆ ವಿನೀತ್‌ ರಾಜ್‌ ಸಂಗೀತ ಸಂಯೋಜಿಸಿದ್ದಾರೆ. ಕಥೆ ಇಷ್ಟವಾದ ಕಾರಣ ಈ ಚಿತ್ರವನ್ನು ಅವರು ಒಪ್ಪಿದರಂತೆ. “ಇದು ನನ್ನ ಮೂನೆಯ ಚಿತ್ರ. ಇದಕ್ಕೂ ಮುನ್ನ “ಮುದ್ದು ಮನಸೇ’ ಮತ್ತು “ಪ್ರೇಮ ಪಲ್ಲಕ್ಕಿ’ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದೆ. ಇಲ್ಲಿ ಹಾಡುಗಳು ಚೆನ್ನಾಗಿ ಬಂದಿವೆ’ ಎಂದರು.

ಚಿತ್ರದ ನಿರ್ಮಾಪಕರಾದ ಹನುಮಂತ ರಾವ್‌ ಮತ್ತು ವೆಂಕಟ ರೆಡ್ಡಿ ಇಬ್ಬರಿಗೂ ಕನ್ನಡ ಬರುವುದಿಲ್ಲ. ಕಾರಣ ಇಬ್ಬರೂ ತೆಲುಗಿನವರು. ಇಬ್ಬರೂ ಚಾಲಾ ಬಾಗುಂದಿ, ಮಂಚಿ ಆಡಿಯೋ, ಅಂದರಿಕಿ ನಮಸ್ಕಾರಾಲು ಎಂದು ಮಾತು ಮುಗಿಸಿದರು.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.