ಮತ್ತದೇ ರಕ್ತ ಚರಿತ್ರೆ


Team Udayavani, Jul 20, 2018, 6:00 AM IST

x-32.jpg

“3′ ಚಿತ್ರದಲ್ಲೇ ದಂಡುಪಾಳ್ಯ ಗ್ಯಾಂಗ್‌ನ ರಕ್ತಚರಿತ್ರೆ ಮುಗಿಯಬಹುದು ಎಂದುಕೊಂಡಿದ್ದ ಪ್ರೇಕ್ಷಕರಿಗೆ ಇನ್ನೊಂದು ಸುದ್ದಿ ಇದೆ. ಅದೇನೆಂದರೆ, “ದಂಡುಪಾಳ್ಯಂ 4′ ಎಂಬ ಚಿತ್ರವೊಂದು ಸದ್ದಿಲ್ಲದೆ ಚಿತ್ರೀಕರಣವಾಗಿ ಮುಗಿದಿದೆ. ಈ ಹಿಂದೆ “2′ ಚಿತ್ರವನ್ನು ನಿರ್ಮಿಸಿರುವ ವೆಂಕಟ್‌, ಈ ಚಿತ್ರವನ್ನು ನಿರ್ಮಿಸುವುದಷ್ಟೇ ಅಲ್ಲ, ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯಾಗಿಯೂ ಅಭಿನಯಿಸಿದ್ದಾರೆ. ಚಿತ್ರದ ಬಗ್ಗೆ ವಿವರ ನೀಡುವುದಕ್ಕೆ ವೆಂಕಟ್‌ ತಮ್ಮ ತಂಡದವರೊಂದಿಗೆ ಮಾಧ್ಯಮದವರೆದುರು ಕುಳಿತಿದ್ದರು.

ಅಂದು ನಿರ್ಮಾಪಕ ವೆಂಕಟ್‌ ಮತ್ತು ನಿರ್ದೇಶಕ ಕೆ.ಟಿ. ನಾಯಕ್‌ ಜೊತೆಗೆ ಚಿತ್ರದಲ್ಲಿ ನಟಿಸಿರುವ ಸುಮನ್‌ ರಂಗನಾಥ್‌, ಮುಮೈತ್‌ ಖಾನ್‌, ಸಂಜೀವ್‌, ಅರುಣ್‌, ಬ್ಯಾನರ್ಜಿ ಮುಂತಾದವರು ಅಂದು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ವೆಂಕಟ್‌ ಸ್ವಲ್ಪ ಸಿಟ್ಟಾಗಿಯೇ ಇದ್ದರು. ಅವರ ಸಿಟ್ಟು ಸಿನಿಮಾಗೆ ತಡೆಯೊಡುವವರ ಕುರಿತದ್ದಾಗಿತ್ತು. “ದಂಡುಪಾಳ್ಯಂ 4′ ಎಂಬ ಹೆಸರಿನ ಕುರಿತು ಕೆಲವರು ಮಾಡುತ್ತಿರುವ ಗಲಾಟೆ ಕುರಿತು ಮಾತನಾಡಿದ ಅವರು, “ಜನ “ಕೋಲಾರ’, “ಕೆಜಿಎಫ್’ ಅಂತ ಹೆಸರಿಟ್ಟು ಸಿನಿಮಾ ಮಾಡಿದರೆ, ಯಾರೂ ಏನು ಹೇಳುವುದಿಲ್ಲ. ಆದರೆ, “ದಂಡುಪಾಳ್ಯಂ 4′ ಎಂಬ ಹೆಸರಿಟ್ಟರೆ ಸಮಸ್ಯೆ ಮಾಡುತ್ತಾರೆ. ಇಷ್ಟಕ್ಕೂ ನಾವು “ದಂಡುಪಾಳ್ಯ’ ಎಂದು ಹೆಸರಿಟ್ಟಿಲ್ಲ. ಈ ಚಿತ್ರಕ್ಕೂ ಹಿಂದಿನ ಚಿತ್ರಕ್ಕೂ ಯಾವುದೇ ಸಂಬಂಧವೂ ಇಲ್ಲ. “ದಂಡುಪಾಳ್ಯ’ ನಂತರ ಅದರ ಮುಂದಿನ ಭಾಗಗಳಿಗೆ ಅದೇ ಹೆಸಿರುಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದ ಮೇಲೆ, ಮುಂದುವರೆದ ಭಾಗಗಳಿಗೆ “2′ ಮತ್ತು “3′ ಎಂಬ ಹೆಸರುಗಳನ್ನು ಇಡಲಾಗಿತ್ತು. ನಾವು “ದಂಡುಪಾಳ್ಯಂ 4′ ಎಂದು ಹೆಸರಿಟ್ಟಿದ್ದೇವೆ. ದಂಡುಪಾಳ್ಯಂ ಎನ್ನುವುದು ತೆಲುಗು ಹೆಸರು. ಈ ಹೆಸರಿನ ಕುರಿತು ಯಾರೂ ಸಮಸ್ಯೆ ಮಾಡುವುದಕ್ಕೆ ಸಾಧ್ಯವಿಲ್ಲ’ ಎಂದು ಹೇಳಿದರು.

ಅಪರಿಚಿತ ವ್ಯಕ್ತಿಗಳನ್ನು ವಿಚಾರಿಸದೆ ಒಳಗೆ ಬಿಟ್ಟುಕೊಂಡರೆ, ಅವರು ಹೇಗೆ ದುರುಪಯೋಗ ಪಡಿಸಿಕೊಳ್ಳುತ್ತಾರೆ ಎಂಬ ವಿಷಯವನ್ನು ಈ ಚಿತ್ರದ ಮೂಲಕ ಹೇಳಲಾಗುತ್ತಿದೆಯಂತೆ. “ಇದೊಂದು ಕ್ರೈಮ್‌ ಚಿತ್ರ. ಈ ಕ್ರೈಮ್‌ ವಿಷಯ  ಎನ್ನುವುದು ಒಂದು ದೊಡ್ಡ ಮರದ ಕೊಂಬೆಯಿದ್ದಂತೆ. ನಾವು ಒಂದು ಕೊಂಬೆಯನ್ನಷ್ಟೇ ತೆಗೆದುಕೊಂಡಿದ್ದೇವೆ. ಈ ಚಿತ್ರಕ್ಕೂ ಹಿಂದಿನ ಚಿತ್ರಗಳಿಗೂ ಯಾವುದೇ ಸಂಬಂಧವಿಲ್ಲ. ಇದು ಬೇರೆಯೇ ಚಿತ್ರವಾಗುತ್ತದೆ’ ಎಂದು ಹೇಳಿದರು.

“ದಂಡುಪಾಳ್ಯಂ 4′ ಚಿತ್ರದಲ್ಲಿ ಸುಮನ್‌ ರಂಗನಾಥ್‌ ಅವರು ಗ್ಯಾಂಗ್‌ ಲೀಡರ್‌ ಆಗಿ ನಟಿಸಿದ್ದಾರಂತೆ. ಅವರಿಗೆ ಈ ಪಾತ್ರ ಸಿಕ್ಕಾಗ, ಹಿಂದಿನ ಚಿತ್ರಗಳನ್ನು ನೋಡಿರಲಿಲ್ಲವಂತೆ. “ನನ್ನದು ಯಾರಿಗೂ ಭಯ ಬೀಳದ ಪಾತ್ರ. ಚಿತ್ರದಲ್ಲಿ ಕೆಲಸ ಮಾಡುವಾಗ ಯಾವುದೇ ತೊಂದರೆಯಾಗಲಿಲ್ಲ’ ಎಂದು ಹೇಳಿಕೊಂಡರು. ಇನ್ನು ಮುಮೈತ್‌ ಖಾನ್‌, ಈ ಚಿತ್ರದಲ್ಲೊಂದು ಐಟಂ ಡ್ಯಾನ್ಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

“ದಂಡುಪಾಳ್ಯಂ 4′ ಚಿತ್ರವು ಐದು ಭಾಷೆಗಳಲ್ಲಿ ತಯಾರಾಗುತ್ತಿದ್ದು, ಏಕಕಾಲಕ್ಕೆ ಬಿಡುಗಡೆ ಮಾಡಲಾಗುವುದಂತೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.