ಕೋಕೋ ಆಟದಲ್ಲಿ ಅರಳಿದ ಪ್ರೀತಿ


Team Udayavani, Jul 27, 2018, 6:00 AM IST

27.jpg

ಕನ್ನಡದಲ್ಲಿ ಈಗಾಗಲೇ ಕ್ರೀಡೆ ಮತ್ತು ಪ್ರೀತಿ ಈ ವಿಷಯ ಕುರಿತ ಸಾಕಷ್ಟು ಚಿತ್ರಗಳು ಬಂದಿವೆ. ಆ ಸಾಲಿಗೆ ಈಗ ಹೊಸಬರ ಚಿತ್ರವೂ ಸೇರಿದೆ. “ಪುಟ್ಟರಾಜು ಲವ್ವರ್‌ ಆಫ್ ಶಶಿಕಲಾ’ ಚಿತ್ರ ಇದೀಗ ಸದ್ದಿಲ್ಲದೆಯೇ ಮುಗಿದು, ತೆರೆಗೆ ಬರಲು ಸಜ್ಜಾಗುತ್ತಿದೆ. ಈ ಚಿತ್ರವನ್ನು ಸಹದೇವ ನಿರ್ದೇಶಿಸಿದ್ದಾರೆ. ನಿರ್ದೇಶಕರ ಸಂಬಂಧಿಗಳಾದ ನಾಗರಾಜು, ರಾಜು ಬಾಲಕೃಷ್ಣ ಅವರು ನಿರ್ಮಾಣ ಮಾಡುವ ಮೂಲಕ ಸಾಥ್‌ ಕೊಟ್ಟಿದ್ದಾರೆ. ಇತ್ತೀಚೆಗೆ ಆಡಿಯೋ ಸಿಡಿ ಬಿಡುಗಡೆಯಾಗಿದೆ.

ಹೆಸರೇ ಹೇಳುವಂತೆ ಇದೊಂದು ಪಕ್ಕಾ ಲವ್‌ಸ್ಟೋರಿ ಚಿತ್ರ. ಇದು ನೈಜ ಘಟನೆಯೊಂದರ ಸುತ್ತ ಹೆಣೆದ ಕಥೆ. ಕಳೆದ 2001ರಲ್ಲಿ ತುಮಕೂರು ಸಮೀಪ ನಡೆದ ಒಂದು ಘಟನೆ ಚಿತ್ರಕ್ಕೆ ಸ್ಫೂರ್ತಿ ಎಂಬುದು ನಿರ್ದೇಶಕರ ಸಹದೇವ ಅವರ ಮಾತು. ಪ್ರೌಢಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿ ನಡುವೆ ನಡೆಯೋ ಕಥೆಯಲ್ಲಿ ಕೋಕೋ ಆಟ ಪ್ರಧಾನವಾಗಿದೆಯಂತೆ. ಚಿತ್ರದ ನಾಯಕಿ ರಾಜ್ಯ ಕೋಕೋ ಆಟಗಾರ್ತಿ. ಅವಳ ಮೇಲೆ ಆ ಹುಡುಗನಿಗೆ ಮನಸ್ಸಾಗುತ್ತೆ. ಅವಳನ್ನು ಹೇಗಾದರೂ ಮಾಡಿ ಪಟಾಯಿಸಬೇಕು ಅಂತಾನೇ, ಕೋಕೋ ಆಟಕ್ಕೆ ಸೇರಿಕೊಳ್ಳುತ್ತಾನೆ. ಆದರೆ, ಅವನ ಕಳಪೆ ಆಟ ಪ್ರದರ್ಶನದಿಂದ ಆ ಕೋಕೋ ಆಟದಿಂದ ಹೊರಬರುತ್ತಾನೆ. ಆಮೇಲೆ ಏನಾಗುತ್ತೆ ಎಂಬುದು ಕಥೆ. ಇನ್ನೊಂದು ಕಡೆ, ನಾಯಕಿಯ ಅಜ್ಜಿ ಮತ್ತು ನಾಯಕನ ತಾತ ಇಬ್ಬರೂ ಆ ಹುಡುಗ, ಹುಡುಗಿಯ ಲವ್‌ ನಡುವೆ ಪ್ರವೇಶ ಮಾಡುತ್ತಾರೆ. ಅವರ ಮಧ್ಯೆ ಕ್ರಶ್‌ ಆಗಿಬಿಡುತ್ತೆ. ಆಮೇಲೆ ಏನು? ಅದೇ ಚಿತ್ರದ ಕಥೆ. ಇಲ್ಲಿ ಪ್ರೀತಿ ಮಾಡೋಕೆ ವಯಸ್ಸು ಮುಖ್ಯವಲ್ಲ, ಮನಸ್ಸು ಮುಖ್ಯ ಎಂಬ ಸಂದೇಶದ ಜೊತೆಗೆ ಒಂದಷ್ಟು ಅರಿವು ಮೂಡಿಸುವ ವಿಷಯಗಳಿವೆ ಎಂಬುದು ನಿರ್ದೇಶಕರ ಹೇಳಿಕೆ.

ಅಮಿತ್‌ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಹದಿ ಹರೆಯದ  ವಯಸ್ಸಲ್ಲಿ ಏನೆನೆಲ್ಲಾ ಅನುಭವಿಸಬಹುದು ಎಂಬ ಪಾತ್ರದಲ್ಲಿ ಅಮಿತ್‌ ಕಾಣಿಸಿಕೊಂಡರೆ, ಸುಶ್ಮಿತಾ ಸಿದ್ದಪ್ಪ ನಾಯಕಿಯಾಗಿ ನಟಿಸಿದ್ದಾರೆ. ಇವರೊಂದಿಗೆ “ಮಾರಿ ಮುತ್ತು’ ಖ್ಯಾತಿಯ ಸರೋಜಮ್ಮನ ಮೊಮ್ಮಗಳು ಜಯಶ್ರೀ ಆರಾಧ್ಯ ಕೂಡ ಇಲ್ಲಿ ಮತ್ತೂಬ್ಬ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಚಿತ್ರದಲ್ಲಿ ವಿಕ್ರಾಂತ್‌, ಕಾವ್ಯ, ರಂಗಭೂಮಿ ಕಲಾವಿದ ಮಹದೇವಮೂರ್ತಿ, ಡಾ.ರಮಾಮಣಿ ನಟಿಸಿದ್ದಾರೆ. ನಿರ್ದೇಶಕ ಸಹದೇವ್‌ ರಚಿಸಿರುವ ಮೂರು ಗೀತೆಗಳಿಗೆ ಶ್ರೀಮಾನ್‌ ಗಂಧರ್ವ ಸಂಗೀತವಿದೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.