ಹಾರರ್‌ ಅಮವಾಸೆ


Team Udayavani, Jul 27, 2018, 6:00 AM IST

30.jpg

“ನಾನಿಲ್ಲಿ ಎರಡು ಶೇಡ್‌ನ‌ಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಒಂದು ಭರತನಾಟ್ಯ ಡ್ಯಾನ್ಸರ್‌ ಆಗಿ, ಇನ್ನೊಂದು ಸತ್ತ ನಂತರ ಕಾಡುವ ದೆವ್ವವಾಗಿ …’

– “ಅಮವಾಸೆ’ ಚಿತ್ರದ ನಾಯಕಿ ಧರಣಿ ತುಂಬಾ ಜೋಶ್‌ನಿಂದ ಹೀಗೆ ಒಂದೇ ಉಸಿರಿನಲ್ಲಿ ಹೇಳಿಬಿಟ್ಟರು. ಪಕ್ಕದಲ್ಲಿ ಕುಳಿತಿದ್ದ ನಿರ್ದೇಶಕ ಪ್ರಶಾಂತ್‌ಗೆ ಸಿಟ್ಟು ಸರ್ರನೆ ಏರಿದಂತಾಯಿತು. ಮುಖ ಕೆಂಪಗಾಯ್ತು. ಒಳಗೊಳಗೆ ಏನೋ ಗೊಣಗಿಕೊಂಡರು. ಇಡೀ ಸಿನಿಮಾದ ಸಾರವನ್ನ ಬಿಟ್ಟುಕೊಟ್ಟರೇ ಹೇಗೆ ಎಂಬ ಟೆನ್ಸ್ ನ್‌ನೊಂದಿಗೆ ಬೆವರು ಕಿತ್ತುಕೊಂಡು ಬಂತು. 

ಬಹುತೇಕ ಎಲ್ಲಾ ನಿರ್ದೇಶಕರು ತಮ್ಮ ಪತ್ರಿಕಾಗೋಷ್ಠಿಗಳಲ್ಲಿ ತಮ್ಮ ಸಿನಿಮಾದ ಗುಟ್ಟು ಬಿಟ್ಟು ಕೊಡುವುದಿಲ್ಲ. “ತೆರೆಮೇಲೆ ನೋಡಿ’, “ಆ ಅಂಶವನ್ನು ಬಿಟ್ಟುಕೊಡುವಂತಿಲ್ಲ’ ಹೀಗೆ ಹೇಳಿ ಸಸ್ಪೆನ್ಸ್‌ ಕಾಯ್ದಿರಿಸುತ್ತಾರೆ. ಇದೇ ರೀತಿ ತಮ್ಮ “ಅಮವಾಸೆ’ ಚಿತ್ರದ ಬಗ್ಗೆಯೂ ನಿರ್ದೇಶಕ ಪ್ರಶಾಂತ್‌ ಏನನ್ನು ಬಿಟ್ಟುಕೊಡದೇ “ಇದು ಫ್ರೆಂಡ್‌ಶಿಪ್‌ ಹಾಗೂ ಲವ್‌ ಸುತ್ತ ನಡೆಯುವ ಸಿನಿಮಾ. ಒಂದಷ್ಟು ಹಾರರ್‌ ಅಂಶವೂ ಚಿತ್ರದಲ್ಲಿ ಬಂದು ಹೋಗುತ್ತದೆ. ಅದು ಹೇಗೆ ಎಂಬುದನ್ನು ನೀವು ತೆರೆಮೇಲೆ ನೋಡಿ’ ಎಂದಿದ್ದರು. ಆದರೆ, ನಟಿ ಧರಣಿ ಇಡೀ ಸಿನಿಮಾ ಹೇಗೆ ಹಾರರ್‌ ಆಗುತ್ತದೆ, ಆ ಅಂಶ ಏನು ಎಂಬು ದನ್ನು ಬಿಟ್ಟು ಕೊಡುವ ಮೂಲಕ ನಿರ್ದೇ ಶಕರ ಟೆನÒನ್‌ಗೆ ಕಾರಣ ವಾಗಿದ್ದು ಸುಳ್ಳಲ್ಲ. 

ಅದು ಬಿಟ್ಟರೆ “ಅಮ ವಾಸೆ’ ಒಂದು ಫ್ರೆಂಡ್‌ಶಿಪ್‌, ಲವ್‌ ಕುರಿತಾದ ಸಿನಿಮಾವಂತೆ. ಇಲ್ಲಿ “ಅಮವಾಸೆ’ ಎಂದು ಟೈಟಲ್‌ ಇಡಲು ಕಾರಣವೂ ಇದೆ. ಅದು ಚಿತ್ರದ ನಾಲ್ವರ ಹೆಸರು. ಅಮರ್‌, ಮಹೇಶ್‌, ವಾಸು ಹಾಗೂ ಸೇಂದಿ ಎನ್ನುವ ಹೆಸರಿನ ಮೊದಲ ಅಕ್ಷರಗಳನ್ನು ಸೇರಿಸಿ ಚಿತ್ರಕ್ಕೆ ಟೈಟಲ್‌ ಇಡಲಾಗಿದೆ. ಈ ಚಿತ್ರವನ್ನು ಜಗದೀಶ ಹಾಗೂ ಡಾ.ಚಂದ್ರಶೇಖರ್‌ ನಿರ್ಮಿಸಿದ್ದಾರೆ.

ಡಾ.ಚಂದ್ರಶೇಖರ್‌ ಮೈಸೂರಿನ ಆಸ್ಪತ್ರೆಯೊಂದರಲ್ಲಿ ಮಕ್ಕಳ ಸ್ಪೆಷಲಿಸ್ಟ್‌. ಹೊಸಬರ ತಂಡ ಬಂದು ಕಥೆ ಹೇಳಿ, ಸಹಾಯ ಮಾಡಿ ಎಂದು ಕೇಳಿ ಕೊಂಡರಂತೆ. ಹಾಗಾಗಿ, ಈ ಸಿನಿಮಾ ನಿರ್ಮಿಸಿದರಂತೆ. “ಕತೆ ಇಷ್ಟವಾಗಿ ಈ ಸಿನಿಮಾ ಮಾಡಿದೆ. ಇತ್ತೀಚೆಗೆ ಈ ಸಿನಿಮಾ ನೋಡಿದೆ. ಇನ್ನಷ್ಟು ಚೆನ್ನಾಗಿ ಮಾಡಬಹುದಿತ್ತು ಎನಿಸಿತು. ಮುಂದೆ ಸಿನಿಮಾ ಮಾಡುವುದಾದರೆ ಆ ಬಗ್ಗೆ ಯೋಚಿಸುತ್ತೇನೆ’ ಎಂದರು. ಚಿತ್ರದಲ್ಲಿ ಅವರು ಕೂಡಾ ನಟಿಸಿದ್ದು, ವೈದ್ಯರಾಗಿಯೇ ಕಾಣಿಸಿಕೊಂಡಿದ್ದಾರೆ. ಇನ್ನೊಬ್ಬ ನಿರ್ಮಾಪಕ ಜಗದೀಶ್‌, “ಈ ಚಿತ್ರ ಪ್ರೀತಿ, ಸ್ನೇಹ ಹಾಗೂ ಸಂಘರ್ಷದ ಸುತ್ತ ಸುತ್ತುತ್ತದೆ’ ಎಂದರು. ಅವರು ಕೂಡಾ ಚಿತ್ರದಲ್ಲಿ ನಟಿಸಿದ್ದಾರಂತೆ. 

ಚಿತ್ರಕ್ಕೆ ಹರಿಬಾಬು ಅವರ ಸಂಗೀತವಿದೆ. ಚಿತ್ರದ ರೀ-ರೆಕಾರ್ಡಿಂಗ್‌ ಭಿನ್ನವಾಗಿದ್ದು, ಪ್ರೇಕ್ಷಕರಿಗೆ ಹೊಸ ಫೀಲ್‌ ನೀಡಲಿದೆಯಂತೆ. ಅಂದಹಾಗೆ, ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದೆ. ಚಿತ್ರದಲ್ಲಿ ರಾಜೀವ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಇತ್ತೀಚೆಗೆ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ನಿರ್ಮಾಪಕರಾದ ಕನಕಪುರ ಶ್ರೀನಿವಾಸ್‌ ಹಾಗೂ ಕರಿಸುಬ್ಬು ಬಿಡುಗಡೆ ಮಾಡಿ ಶುಭಕೋರಿದರು. ನವರತ್ನ ಪ್ರಸಾದ್‌ ಈ ಸಿನಿಮಾದ ವಿತರಕರು. 

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.