ಸರ್ಕಾರಿ ಹಾಡುಗಳು


Team Udayavani, Aug 3, 2018, 6:00 AM IST

s-17.jpg

ಸಿಡಿ ಬಾಕ್ಸ್‌ ಬರಬಹುದು ಎಂದು ಕಾಯುತ್ತಿದ್ದರು ಸುದೀಪ್‌. ಅಷ್ಟರಲ್ಲಿ ಶಾಲೆಗಳಲ್ಲಿ ಹೊಡೆಯುವ ಗಂಟೆಯನ್ನು ತಂದು ವೇದಿಕೆಯ ಮೇಲಿಡಲಾಯಿತು. ಅದೇನು ಎಂದು ಸುದೀಪ್‌ ಆಶ್ಚರ್ಯದಿಂದ ನೋಡುತ್ತಿರುವಾಗಲೇ, “ಸಿಡಿ ಕಾಲ ಮುಗೀತು. ಈಗೇನಿದ್ದರೂ ಪೆನ್‌ ಡ್ರೈವ್‌ ಕಾಲ. ನೀವು ಬೆಲ್‌ ಮಾಡಿ ಸಾರ್‌. ಹಾಡುಗಳು ಬಿಡುಗಡೆಯಾದಂತೆ’ ಎಂದರು ರಿಷಭ್‌ ಶೆಟ್ಟಿ. ಸುದೀಪ್‌ ಕೋಲಿನಿಂದ “ಢಣ್‌ ಢಣ್‌ ಢಣ್‌’ ಅಂತ ಬಾರಿಸುತ್ತಿದ್ದಂತೆ, ಸಾಂಕೇತಿಕವಾಗಿ ಹಾಡುಗಳು ಬಿಡುಗಡೆಯಾದವು. ಆ ನಂತರ ಎಲ್ಲರೂ ಪೆನ್‌ ಡ್ರೈವ್‌ ಹಿಡಿದುಕೊಂಡು ಫೋಟೋ ಆಗುವುದರ ಮೂಲಕ ಸಮಾರಂಭ ಮುಗಿಯಿತು.

ಅಂದಹಾಗೆ, ಇದು “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು. ಕೊಡುಗೆ – ರಾಮಣ್ಣ ರೈ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ. ಹಾಡುಗಳನ್ನು ಬಿಡುಗಡೆ ಮಾಡುವುದಕ್ಕೆ ಸುದೀಪ್‌ ಬಂದಿದ್ದರು. ಚಿತ್ರದಲ್ಲಿ ನಟಿಸಿರುವ ಅನಂತ್‌ ನಾಗ್‌, ಹಾಡು ಬರೆದಿರುವ ಕೆ. ಕಲ್ಯಾಣ್‌ ಹಾಜರಿದ್ದರು. ಮಿಕ್ಕಂತೆ ನಿರ್ದೇಶಕರಾದ ಶಿವಮಣಿ, ಜಯತೀರ್ಥ ಮುಂತಾದವರು ಶುಭ ಕೋರುವುದಕ್ಕೆ ಬಂದಿದ್ದರು. ಹಾಡುಗಳು ಬಿಡುಗಡೆಯಾಗುವುದಕ್ಕಿಂತ ಮುನ್ನ, ಎಲ್ಲರೂ ಮಾತಾಡುವುದಕ್ಕಿಂತ ಮುಂಚೆ ಮೊದಲು ನಾಲ್ಕು ಹಾಡುಗಳನ್ನು ತೋರಿಸಲಾಯಿತು. ನಂತರ ಮಾತು.

ಅನಂತ್‌ ನಾಗ್‌ ಅವರು ರಿಷಭ್‌ ಶೆಟ್ಟಿಯನ್ನು ನೋಡಿದ್ದು ಹೇಮಂತ್‌ ರಾವ್‌ ಮದುವೆ ಸಂದರ್ಭದಲ್ಲಿ. ಆಗ ಅನಂತ್‌ ಅವರ ಹತ್ತಿರ ಬಂದ ರಿಷಭ್‌, ಮಾತಾಡೋಕಿದೆ ಎಂದರಂತೆ. ಅದೊಂದು ಗೊತ್ತು ಮಾಡಿದ ದಿನ ಅನಂತ್‌ ನಾಗ್‌ ಅವರ ಮನೆಗೆ ಹೋದ ರಿಷಭ್‌, “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು. ಕೊಡುಗೆ – ರಾಮಣ್ಣ ರೈ’ ಚಿತ್ರದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಜೊತೆಗೆ ಕಥೆ ಮತ್ತು ಪಾತ್ರದ ಬಗ್ಗೆಯೂ ಹೇಳಿದ್ದಾರೆ. “ರಿಷಭ್‌ ಕಥೆ ಹೇಳುವಾಗ ನಗುತ್ತಿದ್ದರು. ಅವರಿಗೆ ಚಿತ್ರದ ಬಗ್ಗೆ ತುಂಬಾ ಅಬೆÕಷನ್‌ ಇದೆ ಅಂತ ಆಗಲೇ ಅನಿಸಿತ್ತು. ಇನ್ನು ಚಿತ್ರದಲ್ಲಿ ಪಾರ್ಟು ಮಾಡಿದೆ. ಆ ಸಂದರ್ಭದಲ್ಲಿ ಅವರನ್ನು ನೋಡಿ ಅವಕ್ಕಾದೆ. ನಿರ್ಮಾಣ, ನಿರ್ದೇಶನ. ನಟನೆ ಎಲ್ಲಾ ಅವರೇ ಮಾಡ್ತಾರೆ. ಈ ಚಿತ್ರದಲ್ಲಿ ಕನ್ನಡದ ಮೇಲಿನ ಪ್ರೀತಿ, ಕಳಕಳಿ ಮತ್ತು ಅಭಿಮಾನ ಇದೆ. ಇಡೀ ಚಿತ್ರದ ಮರ್ಮ ಒಂದೇ ಒಂದು ಸಂಭಾಷಣೆಯಲ್ಲಿದೆ. ಒಂದು ಮಗು ಯಾವ ಭಾಷೇಲಿ ಕನಸು ಕಾಣುತ್ತೋ, ಅದೇ ಭಾಷೆಯಲ್ಲಿ ಅದಕ್ಕೆ ಶಿಕ್ಷಣ ಸಿಗಬೇಕು ಎಂಬ ಸಂಭಾಷಣೆ ಅದ್ಭುತವಾಗಿದೆ’ ಎಂದು ಖುಷಿಪಟ್ಟರು.

ಚಿತ್ರದ ಹಾಡುಗಳನ್ನು ನೋಡಿ ಖುಷಿಯಾಗಿದ್ದ ಸುದೀಪ್‌, “ಇಲ್ಲಿ ಮುಗ್ಧತೆ ಕಾಣುತ್ತದೆ. ಅದನ್ನು ಸೆರೆಹಿಡಿಯುವುದಕ್ಕೆ ನಿಜಕ್ಕೂ ತಾಳ್ಮೆ ಬೇಕು. ಮುಂಚೆ ರಿಷಭ್‌ಗೆ ಇಷ್ಟೊಂದು ತಾಳ್ಮೆ ಇರಲಿಲ್ಲ. ಮದುವೆಯಾದ ಮೇಲೆ ಬಂದಿದೆ. ಹಾಗಾಗಿ ಅದರ ಕ್ರೆಡಿಟ್‌ ಅವರ ಹೆಂಡತಿಗೆ ಹೋಗಬೇಕು. ನಾನು ರಿಷಭ್‌ ಅವರ ಜರ್ನಿಯನ್ನು ನೋಡಿಕೊಂಡು ಬಂದವನು. ನಂಬಿಕೆ, ಭಯ, ವಿಶ್ವಾಸ, ಅತಿಯಾದ ವಿಶ್ವಾಸ ಎಲ್ಲವನ್ನೂ ನೋಡಿದ್ದೇನೆ. ಈ ಚಿತ್ರಕ್ಕೆ ಮತ್ತು ಅವರಿಗೆ ಒಳ್ಳೆಯದಾಗಲಿ. ಇನ್ನು ಅನಂತ್‌ ನಾಗ್‌ ಅವರು ನಮ್ಮ ಗುರುಗಳ ತರಹ. ಅವರನ್ನ ನೋಡೋದು, ಮಾತಾಡೋದೇ ದೊಡ್ಡ ಸಂತೋಷ’ ಎಂದರು.

ಕೆ. ಕಲ್ಯಾಣ್‌ ಅವರು ಈ ಚಿತ್ರಕ್ಕೊಂದು ಪ್ರಾರ್ಥನೆ ಗೀತೆ ಬರೆದಿದ್ದಾರೆ. “ಯೋಚನೆ ಮಾಡೋಕೆ ಸಾವಿರ ಹಾಡುಗಳು. ಪ್ರಾರ್ಥಿಸೋಕೆ ಕೆಲವೇ ಹಾಡುಗಳು’ ಎಂದು ಅವರು ಹೇಳಿದರು. ಚಿತ್ರಕ್ಕೆ ಒಂಬತ್ತು ಹಾಡುಗಳನ್ನು ಸಂಯೋಜಿಸಿರುವ ವಾಸುಕಿ ವೈಭವ್‌, “ದಡ್ಡ ಪ್ರವೀಣ …’ ಹಾಡನ್ನು ತಾವೇ ಹಾಡಿದ್ದು ಎಂದು ಯಾರಿಗೆ ಹೇಳಿದರೂ ನಂಬುತ್ತಿಲ್ಲ ಎಂದು ಬೇಸರಿಸಿಕೊಂಡರು. ರಿಷಭ್‌ ಎಲ್ಲರಿಗೂ ಥ್ಯಾಂಕ್ಸ್‌ ಹೇಳಿದರು. 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.