ಹವಾಲ ಸುತ್ತ: ಮಸ್ಕಲ್‌ ಭಾಯ್‌ vs ನಾಮ


Team Udayavani, Aug 10, 2018, 6:00 AM IST

x-33.jpg

ಹೀರೋ ಆಗೋಕೆ ಬಂದವರು ಅಮಿತ್‌ ರಾಜ್‌. ಯಾಕೋ ಹೀರೋ ಆಗಲಿಲ್ಲ. ಕ್ರಮೇಣ ನೆಗೆಟಿವ್‌ ಪಾತ್ರಗಳಲ್ಲಿ ಕಾಣಿಸಿಕೊಂಡರು. ಇದೀಗ ಅವರು ನಿರ್ದೇಶಕರಾಗಿ ಭಡ್ತಿ ಪಡೆದಿದ್ದಾರೆ. ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ “ಹವಾಲ’ ಎಂಬ ಚಿತ್ರವನ್ನು ನಿರ್ದೇಶಿಸಿರುವ ಅವರು, ಸದ್ದಿಲ್ಲದೆ ಚಿತ್ರೀಕರಣ ಮುಗಿಸಿದ್ದಾರೆ. ಇತ್ತೀಚೆಗೆ ಚಿತ್ರದ ಟೀಸರ್‌ ಬಿಡುಗಡೆ ಮಾಡಲಾಯಿತು. ಟೀಸರ್‌ ತೋರಿಸುವ ನೆಪದಲ್ಲಿ ಪತ್ರಿಕಾಗೋಷ್ಠಿಯೂ ನಡೆಯಿತು.

“ಹವಾಲ’ ಪ್ರಮುಖವಾಗಿ ಎರಡು ಪಾತ್ರಗಳ ಸುತ್ತ ಸುತ್ತುವ ಚಿತ್ರವಂತೆ. “ಇಲ್ಲಿ ಎರಡು ಪಾತ್ರಗಳ ಸುತ್ತ ಚಿತ್ರ ಸುತ್ತುತ್ತದೆ. ಒಬ್ಟಾತ ಮಸ್ಕಲ್‌ ಭಾಯ್‌ ಅಂತ. ಇನ್ನೊಬ್ಬನ ಹೆಸರು ನಾಮ. ಒಬ್ಬ ಕಾಂಟ್ರ್ಯಾಕ್ಟ್ ಕಿಲ್ಲರ್‌. ಇನ್ನೊಬ್ಬ ಅಂಡರ್‌ವರ್ಲ್ಡ್ನಲ್ಲಿ ದೊಡ್ಡ ಹೆಸರು ಮಾಡಬೇಕು ಅಂತ ಆಸೆ ಇಟ್ಟುಕೊಂಡಿರುತ್ತಾರೆ. ಇಬ್ಬರೂ ಹವಾಲ ದಂಧೆಗೆ ಕೈಹಾಕುತ್ತಾರೆ. ಆ ನಂತರ ಅವರ ಜೀವನದಲ್ಲಿ ಏನೆಲ್ಲಾ ಆಗುತ್ತದೆ ಎಂಬುದು ಚಿತ್ರದ ಸಾರಾಂಶ. ಇಡೀ ಚಿತ್ರದಲ್ಲಿ ಯಾರೂ ಒಳ್ಳೆಯವರಲ್ಲ. ಎಲ್ಲರೂ ಕೆಟ್ಟವರೇ. ಭೂಗತಲೋಕದ ಕಥೆ ಇರುವ ಚಿತ್ರ ಇದು. ಆದಷ್ಟು ರಿಯಲಾಸ್ಟಿಕ್‌ ಆಗಿ ಚಿತ್ರೀಕರಣ ಮಾಡಿದ್ದೇವೆ. ಚಿತ್ರವನ್ನು ಬೆಂಗಳೂರು ಮತ್ತು ಮಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ’ ಎಂದು ಚಿತ್ರದ ಸಾರಾಂಶ ಬಿಚ್ಚಿಟ್ಟರು ಅಮಿತ್‌ ರಾಜ್‌.

ಎಲ್ಲಾ ಸರಿ, ಅಮಿತ್‌ ರಾಜ್‌ ನಿರ್ದೇಶನಕ್ಕೆ ಕೈಹಾಕಿದ್ದೇಕೆ ಎಂಬ ಪ್ರಶ್ನೆ ಸಹಜವಾಗಿಯೇ ಬಂತು. “ಕಳೆದ 15 ವರ್ಷಗಳಿಂದ ಚಿತ್ರರಂಗದಲ್ಲಿದ್ದೀನಿ. ಹೀರೋ ಆಗಬೇಕು ಅಂತ ಬಂದವನು. ಆದರೆ, ಇಲ್ಲಿ ನೆಲೆ ಕಂಡುಕೊಳ್ಳೋದು ಕಷ್ಟ. ಆ ನಂತರ ಒಂಬತ್ತು ಧಾರಾವಾಹಿಗಳಲ್ಲಿ ಕಾಣಿಸಿಕೊಂಡೆ. ಇಲ್ಲೇ ಬೇರೆ ಏನಾದರೂ ಮಾಡಬೇಕು ಅಂತಿತ್ತು. ಹಾಗಾಗಿ ಇದು ಸೆಕೆಂಡ್‌ ಇನ್ನಿಂಗ್ಸ್‌ ಎಂದರೆ ತಪ್ಪಿಲ್ಲ. ರಾಮ್‌ ಗೋಪಾಲ್‌ ವರ್ಮ ಅವರು ನನ್ನ ಗುರು ತರಹ. ಅವರನ್ನು ನಾನು ವೈಯಕ್ತಿಕವಾಗಿ ಭೇಟಿ ಮಾಡದಿದ್ದರೂ, ಅವರ ಸಿನಿಮಾಗಳೆಂದರೆ ನನಗೆ ಬಹಳ ಇಷ್ಟ. ಅದೇ ಮಾದರಿಯಲ್ಲಿ ಒಂದು ಸಿನಿಮಾ ಮಾಡಬೇಕು ಎಂಬ ಆಸೆ ಬಹಳ ದಿನಗಳಿಂದಲೂ ಇತ್ತು. ಆ ಆಸೆ ಈ ಚಿತ್ರದ ಮೂಲಕ ಈಡೇರಿದೆ’ ಎನ್ನುತ್ತಾರೆ ಅಮಿತ್‌ ರಾಜ್‌.

ಈ ಚಿತ್ರವನ್ನು ಪ್ರವೀಣ್‌ ಕುಮಾರ್‌ ಶೆಟ್ಟಿ ಎನ್ನುವವರು ನಿರ್ಮಿಸಿದ್ದಾರೆ. ಅವರು ಚಿತ್ರರಂಗದವರಲ್ಲ. ಅಮಿತ್‌ ರಾಜ್‌ಗೆ ಸಪೋರ್ಟ್‌ ಮಾಡುವ ಎಂದು ಚಿತ್ರರಂಗಕ್ಕೆ ಬಂದು ಚಿತ್ರ ನಿರ್ಮಾಣ ಮಾಡಿದ್ದಾರೆ. ಇನ್ನು ಚಿತ್ರದಲ್ಲಿ ಶ್ರೀನಿವಾಸ್‌, ಸಹನ, ಸೂರ್ಯೋದಯ್‌ ಮುಂತಾದವರು ನಟಿಸಿದ್ದಾರೆ. “ಉಪ್ಪು ಹುಳಿ ಖಾರ’ ಚಿತ್ರದ ಹಾಡೊಂದಕ್ಕೆ ಸಂಗೀತ ಸಂಯೋಜಿಸಿದ್ದ ಕಿಶೋರ್‌ ಅಕ್ಸ ಸಂಗೀತ ಸಂಯೋಜಿಸಿದ್ದಾರೆ. ಸದ್ಯಕ್ಕೆ ಚಿತ್ರವು ಡಿಟಿಎಸ್‌ ಮತ್ತು ಡಿಐ ಹಂತದಲ್ಲಿದ್ದು, ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆ ಇದೆ.   

ಟಾಪ್ ನ್ಯೂಸ್

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.