ಗೆಳೆಯರ ಭವಿಷ್ಯ ಮತ್ತು ಬದುಕು


Team Udayavani, Aug 10, 2018, 6:00 AM IST

x-34.jpg

“ಇದು ಎಲ್ಲರಿಗೂ ಮೊದಲ ಸಿನಿಮಾ. ಇದರಿಂದ ಎಲ್ಲರಿಗೂ ಭವಿಷ್ಯವಿದೆ …’
– ಹೀಗೆ ಹೇಳಿ ಹಾಗೊಂದು ನಗೆ ಬೀರಿದರು ನಿರ್ದೇಶಕ ಅರುಣ್‌. ಅವರು ಹೇಳಿಕೊಂಡಿದ್ದು “ದಿವಂಗತ ಮಂಜುನಾಥನ ಗೆಳೆಯರು’ ಚಿತ್ರದ ಬಗ್ಗೆ. ಚಿತ್ರ ಮುಂದಿನವಾರ ಬಿಡುಗಡೆಯಾಗುತ್ತಿದೆ. ಈ ಹಿಂದೆ ಅರುಣ್‌  “ಎಣ್ಣೆ  ಪಾರ್ಟಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದರು. ದಿವಂಗತ ಮಂಜುನಾಥನ ಗೆಳೆಯರು. ಲವ್‌, ಸಸ್ಪೆನ್ಸ್‌ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಅರುಣ್‌.

“ಸಿನಿಮಾ ನೋಡುವಾಗ, ನೈಜತೆ ಕಾಣಬೇಕು ಎಂಬ ಉದ್ದೇಶದಿಂದ ಎಲ್ಲವನ್ನೂ ನೈಜವಾಗಿರುವಂತೆ ಚಿತ್ರೀಕರಿಸಿದ್ದೇವೆ. ಇಲ್ಲಿ ಕಥೆಯೇ ಹೀರೋ. ಎಲ್ಲೂ ಹೊಂದಾಣಿಕೆ ಮಾಡಿಕೊಳ್ಳದೆ ಒಂದೊಳ್ಳೆಯ ಸದಭಿರುಚಿಯ ಚಿತ್ರ ಕೊಡುವ ಪ್ರಯತ್ನ ಮಾಡಿದ್ದೇವೆ. ಇಲ್ಲಿ ನೈಜತೆ ಇರಬೇಕು ಎಂಬ ಕಾರಣಕ್ಕೆ ಒರಿಜಿನಲ್‌ ಮಳೆಯಲ್ಲೇ ಚಿತ್ರೀಕರಿಸಿದ್ದೇವೆ. ಪ್ರತಿ ಡೈಲಾಗ್‌ ಕೂಡ ಫ್ರೆಂಡ್ಸ್‌ ಜೊತೆ ಮಾತಾಡಿದಂತಿರಲಿದೆ. ಒಂದು ಹೊಸ ಪ್ರಯತ್ನಕ್ಕೆ ನನ್ನ ತಂಡ ಬೆಂಬಲ ಚೆನ್ನಾಗಿತ್ತು. ಆ ಕಾರಣದಿಂದಲೆ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಎಲ್ಲರ ಎಫ‌ರ್ಟ್‌ನಿಂದ ಇದು ಮೂಡಿಬಂದಿದೆ. ದೊಡ್ಡ ಬಜೆಟ್‌ ಇಲ್ಲಿಲ್ಲ. ಆದರೆ, ಒಳ್ಳೇ ಕಥೆ ಇದೆ. ಮನಸ್ಸಿಗೆ ಹತ್ತಿರವಾಗುವಂತಹ ಅಂಶಗಳಿವೆ. ನಮ್ಮ ಕಾಲೇಜು ದಿನಗಳು ನೆನಪಾಗುತ್ತವೆ. ನಮ್ಮ ಹಳೆಯ ಗೆಳೆತನ ನೆನಪಾಗುತ್ತೆ’ ಎಂದು ವಿವರ ಕೊಟ್ಟ ಅರುಣ್‌, ಐವರು ಇಂಜಿನಿಯರ್‌ ಗೆಳೆಯರು ಬಹಳ ವರ್ಷಗಳ ನಂತರ ಪೋಲಿಸ್‌ ಸ್ಟೇಷನ್‌ನಲ್ಲಿ ಭೇಟಿಯಾದಾಗ ಒಂದು ಘಟನೆ ಬಿಚ್ಚಿಕೊಳ್ಳುತ್ತೆ. ಅದೇ ಚಿತ್ರದ ಹೈಲೆಟ್‌ ಎಂದರು ಅರುಣ್‌.

ರುದ್ರ ಪ್ರಯೋಗ್‌ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಅವರಿಗೆ ಇದು ಗುರುತಿಸಿಕೊಳ್ಳುವಂತೆ ಮಾಡುತ್ತೆ ಎಂಬ ವಿಶ್ವಾಸ. ಇದು ಕೇವಲ ಗೆಳೆಯರಿಗೆ ಮಾತ್ರವಲ್ಲ, ಇಡೀ ಫ್ಯಾಮಿಲಿಗೆ ಇಷ್ಟವಾಗುವಂತಹ ಚಿತ್ರವಾಗಲಿದೆ ಎಂಬ ಗ್ಯಾರಂಟಿ ಕೊಟ್ಟರು ಪ್ರಯೋಗ್‌.

ಸಚಿನ್‌ ಅವರಿಲ್ಲಿ ಮಂಜುನಾಥನ ಪಾತ್ರ ನಿರ್ವಹಿಸಿದ್ದಾರೆ. ಅವರದು ಜನರನ್ನು ಯಾಮಾರಿಸಿ, ಬದುಕು ನಡೆಸೋ ಪಾತ್ರವಂತೆ. ಒಂದು ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಅದೇ ಚಿತ್ರದ ತಿರುವು’ ಅಂದರು ಅವರು. ಶಂಕರಮೂರ್ತಿ, ಶೀತಲ್‌ ಪಾಂಡ್ಯ, ಅವಿನಾಶ್‌ ಮುದ್ದಪ್ಪ, ರವಿಪೂಜಾರ್‌, ನವೀನ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.  
 

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.