ಕುಟುಂಬ ಕಲ್ಯಾಣ


Team Udayavani, Aug 17, 2018, 6:00 AM IST

c-36.jpg

ಅರಮನೆ ಮೈದಾನದಲ್ಲೊಂದು ಪಾಳು ಬಿದ್ದ ದೇವಸ್ಥಾನ. ಆ ದೇವಸ್ಥಾನದ ಆವರಣಕ್ಕೆ ಮದುವೆ ಹೆಣ್ಣು ಆತಂಕದಿಂದ, ತನ್ನ ಸಕುಟುಂಬ ಸಪರಿವಾರ ಸಮೇತ ಅಲ್ಲಿಗೆ ಬಂದಿದ್ದಾಳೆ. ಎಲ್ಲರ ಮುಖದಲ್ಲೂ ಅದೇನೋ ಆತಂಕ, ಭಯ ಮಡುಗಟ್ಟಿದೆ. ಹೀಗೆ ಲುಕ್‌ ಕೊಡಬೇಕಾದರೆ, ಕಟ್‌ ಇಟ್‌ ಎಂದು ಕೂಗಿದರು ಹರ್ಷ. ಕಲಾವಿದರೆಲ್ಲಾ ನಾರ್ಮಲ್‌ ಸ್ಥಿತಿಗೆ ಬಂದರು. ಕೆಲವರು ಕ್ಯಾರಾವಾನ್‌ಗೆ ಹೋಗಿ ಕುಳಿತರೆ, ಇನ್ನೂ ಕೆಲವರು ಅಲ್ಲೇ ಮಾತನಾಡುತ್ತಾ ಕುಳಿತರು. ಹೀಗಿರುವಾಗಲೇ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಡೆದು ಬಂದರು …

ಮುಖ್ಯಮಂತ್ರಿಗಳು ಸಿನಿಮಾ ಮುಹೂರ್ತಕ್ಕೆ, ಆಡಿಯೋ ಬಿಡುಗಡೆ ಸಮಾರಂಭಗಳಿಗೆ ಹೋಗುವುದು ವಾಡಿಕೆ. ಆದರೆ, ಕುಮಾರಸ್ವಾಮಿ ಅವರು ಬಂದಿದ್ದು, ತಮ್ಮದೇ ಚಿತ್ರ ಎಂಬ ಕಾರಣಕ್ಕೆ. ಮುಖ್ಯಮಂತ್ರಿಗಳು ತಮ್ಮ ಮಗ ನಿಖೀಲ್‌ಗಾಗಿ “ಸೀತಾರಾಮ ಕಲ್ಯಾಣ’ ಚಿತ್ರ ನಿರ್ಮಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಅಂದು ಆ ಚಿತ್ರದ 99ನೇ ದಿನದ ಚಿತ್ರೀಕರಣ. ಅದೇ ದಿನ ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನಿರ್ಮಾಪಕರಾಗಿ ಎಂಟ್ರಿ ಕೊಟ್ಟರು. ಆ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರ ಮೂಡಿ ಬರುತ್ತಿರುವ ರೀತಿಯ ಬಗ್ಗೆ ಮಾತನಾಡಿದರು.

“ನಾನು ಮುಖ್ಯಮಂತ್ರಿಯಾಗಿ ಅದೆಷ್ಟೇ ಬಿಝಿಯಾಗಿದ್ದರೂ, ಚಿತ್ರದ ತುಣುಕುಗಳನ್ನು ಪ್ರತಿ ದಿನ ನೋಡುವ ಹವ್ಯಾಸ ಮಾಡಿಕೊಂಡಿದ್ದೇನೆ. ಚಿತ್ರ ಚೆನ್ನಾಗಿ ಮೂಡಿಬರುತ್ತಿದೆ ಮತ್ತು ಇದೊಂದು ಉತ್ತಮ ಮತ್ತು ಯಶಸ್ವಿ ಚಿತ್ರವಾಗಲಿದೆ ಎಂಬ ವಿಶ್ವಾಸ ನನಗಿದೆ. ಚಿತ್ರದಲ್ಲಿ ನಿಖೀಲ್‌ ತಂದೆಯಾಗಿ ಶರತ್‌ ಕುಮಾರ್‌ ಕಾಣಿಸಿಕೊಂಡಿದ್ದಾರೆ. ಅವರಿಬ್ಬರಲ್ಲಿ ನನ್ನ ಮತ್ತು ಮಗನ ಬಾಂಧವ್ಯ ಕಂಡಿದ್ದೇನೆ. ನನ್ನ ಜೀವನದ ಕೆಲವು ಭಾಗಗಳನ್ನೇ ಈ ಚಿತ್ರದಲ್ಲಿ ಅಳವಡಿಸಿಕೊಂಡಿದ್ದಾರೆ ಅನಿಸುತ್ತದೆ. ಚಿತ್ರ ಮುಗಿಯುತ್ತಾ ಬಂದಿದೆ. ಈ ಚಿತ್ರದಿಂದ ದೊಡ್ಡ ಯಶಸ್ಸು ನಿರೀಕ್ಷೆ ಮಾಡುತ್ತಿದ್ದೇನೆ’ ಎಂದರು.

ಹರ್ಷ ಪಾಲಿಗೆ ಇದೊಂದು ದೊಡ್ಡ ಅವಕಾಶವಂತೆ. “ನಿರ್ಮಾಪಕರು ನನ್ನ ಮೇಲೆ ಬಹಳ ನಿರೀಕ್ಷೆ ಇಟ್ಟಿದ್ದಾರೆ. ಅವರ ನಿರೀಕ್ಷೆಗಳನ್ನು ನಾನು ಹುಸಿಗೊಳಿಸುವುದಿಲ್ಲ. ನಿಖೀಲ್‌ ಬಹಳ ಚೆನ್ನಾಗಿ ಡ್ಯಾನ್ಸ್‌ ಮತ್ತು ಫೈಟ್‌ ಮಾಡುತ್ತಾರೆ. ಇದು ಚಿತ್ರೀಕರಣದ 99ನೇ ದಿನ. ಆದರೂ ಅವರ ಉತ್ಸಾಹ ಕಡಿಮೆಯಾಗಿಲ್ಲ. ಅವರು ಇನ್ನೂ ಸಾಕಷ್ಟು ಬೆಳೆಯುತ್ತಾರೆ, ಎಲ್ಲಾ ಭಾಷೆಗಳಿಗೂ ಹೋಗುತ್ತಾರೆ’ ಎಂದು ಭವಿಷ್ಯ ನುಡಿದರು. ನಿಖೀಲ್‌ ಸಹ ಹರ್ಷ ಅವರನ್ನು ಹೊಗಳುತ್ತಾ ಮಾತು ಶುರು ಮಾಡಿದರು. “ಕಲಾವಿದರಿಗೆ ಹರ್ಷ ತುಂಬಾ ಉತ್ಸಾಹ ತುಂಬುತ್ತಾರೆ. ಅವರ ಜೊತೆಗೆ ಮತ್ತೆಮತ್ತೆ ಕೆಲಸ ಮಾಡುವ ಆಸೆ ಇದೆ. ಇನ್ನು ಟೀಸರ್‌ ದೊಡ್ಡ ಹಿಟ್‌ ಆಗಿದೆ. ಆ ಟೀಸರ್‌ನ ಸಾಹಸ ನಿರ್ದೇಶಕರಾದ ರಾಮ್‌-ಲಕ್ಷ್ಮಣ್‌ ಅವರಿಗೆ ಅರ್ಪಿಸುವುದಕ್ಕೆ ಇಷ್ಟಪಡುತ್ತೇನೆ. ಈ ಚಿತ್ರ ರೀಮೇಕ್‌ ಎನ್ನುವ ವಿಚಾರ ಕೇಳಿದ್ದೇನೆ. ಇದು ಯಾವುದೇ ಚಿತ್ರದ ರೀಮೇಕ್‌ ಅಲ್ಲ, ಹಲವು ಚಿತ್ರಗಳಿಂದ ಸ್ಫೂರ್ತಿ ಪಡೆದಂತಹ ಚಿತ್ರ’ ಎಂದರು. ಅದಕ್ಕೆ ಸರಿಯಾಗಿ ಪಕ್ಕದಲ್ಲಿದ್ದ ಹಿರಿಯ ನಟ ಶರತ್‌ ಕುಮಾರ್‌, “ನಾನೂ ಇದುವರೆಗೂ 140 ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ನಾನು ನೋಡಿರುವಂತೆ ಇದು ಯಾವ ಚಿತ್ರದ ರೀಮೇಕ್‌ ಸಹ ಅಲ್ಲ. ಹಾಡುಗಳು, ಆ್ಯಕ್ಷನ್‌ ನೋಡುತ್ತಿದ್ದರೆ ಹೋಲಿಕೆ ಸಹಜ’ ಎಂದರು.

ಅಂದು ವೇದಿಕೆಯ ಮೇಲೆ ರಚಿತಾ ರಾಮ್‌, ಗಿರಿಜಾ ಲೋಕೇಶ್‌, ರವಿಶಂಕರ್‌, ಮಧು, ಜ್ಯೋತಿ ರೈ ಸೇರಿದಂತೆ ಹಲವು ಕಲಾವಿದರ ದಂಡೇ ಇತ್ತು. ಅವರೆಲ್ಲರೂ ಚಿತ್ರದಲ್ಲಿ ನಿಖೀಲ್‌ ಮತ್ತು ರಚಿತಾ ರಾಮ್‌ ಅವರ ಕುಟುಂಬದ ಸದಸ್ಯರಾಗಿ ಕಾಣಿಸಿಕೊಂಡಿದ್ದಾರೆ. ಎಲ್ಲರೂ ಚಿತ್ರದಲ್ಲಿನ ತಮ್ಮ ಅನುಭವ ಹಂಚಿಕೊಳ್ಳುವುದರ ಜೊತೆಗೆ, ಚಿತ್ರ ಮೂಡಿಬರುತ್ತಿರುವ ಬಗ್ಗೆ ಖುಷಿ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.