ಕುಟುಂಬ ಕಲ್ಯಾಣ


Team Udayavani, Aug 17, 2018, 6:00 AM IST

c-36.jpg

ಅರಮನೆ ಮೈದಾನದಲ್ಲೊಂದು ಪಾಳು ಬಿದ್ದ ದೇವಸ್ಥಾನ. ಆ ದೇವಸ್ಥಾನದ ಆವರಣಕ್ಕೆ ಮದುವೆ ಹೆಣ್ಣು ಆತಂಕದಿಂದ, ತನ್ನ ಸಕುಟುಂಬ ಸಪರಿವಾರ ಸಮೇತ ಅಲ್ಲಿಗೆ ಬಂದಿದ್ದಾಳೆ. ಎಲ್ಲರ ಮುಖದಲ್ಲೂ ಅದೇನೋ ಆತಂಕ, ಭಯ ಮಡುಗಟ್ಟಿದೆ. ಹೀಗೆ ಲುಕ್‌ ಕೊಡಬೇಕಾದರೆ, ಕಟ್‌ ಇಟ್‌ ಎಂದು ಕೂಗಿದರು ಹರ್ಷ. ಕಲಾವಿದರೆಲ್ಲಾ ನಾರ್ಮಲ್‌ ಸ್ಥಿತಿಗೆ ಬಂದರು. ಕೆಲವರು ಕ್ಯಾರಾವಾನ್‌ಗೆ ಹೋಗಿ ಕುಳಿತರೆ, ಇನ್ನೂ ಕೆಲವರು ಅಲ್ಲೇ ಮಾತನಾಡುತ್ತಾ ಕುಳಿತರು. ಹೀಗಿರುವಾಗಲೇ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಡೆದು ಬಂದರು …

ಮುಖ್ಯಮಂತ್ರಿಗಳು ಸಿನಿಮಾ ಮುಹೂರ್ತಕ್ಕೆ, ಆಡಿಯೋ ಬಿಡುಗಡೆ ಸಮಾರಂಭಗಳಿಗೆ ಹೋಗುವುದು ವಾಡಿಕೆ. ಆದರೆ, ಕುಮಾರಸ್ವಾಮಿ ಅವರು ಬಂದಿದ್ದು, ತಮ್ಮದೇ ಚಿತ್ರ ಎಂಬ ಕಾರಣಕ್ಕೆ. ಮುಖ್ಯಮಂತ್ರಿಗಳು ತಮ್ಮ ಮಗ ನಿಖೀಲ್‌ಗಾಗಿ “ಸೀತಾರಾಮ ಕಲ್ಯಾಣ’ ಚಿತ್ರ ನಿರ್ಮಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಅಂದು ಆ ಚಿತ್ರದ 99ನೇ ದಿನದ ಚಿತ್ರೀಕರಣ. ಅದೇ ದಿನ ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನಿರ್ಮಾಪಕರಾಗಿ ಎಂಟ್ರಿ ಕೊಟ್ಟರು. ಆ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರ ಮೂಡಿ ಬರುತ್ತಿರುವ ರೀತಿಯ ಬಗ್ಗೆ ಮಾತನಾಡಿದರು.

“ನಾನು ಮುಖ್ಯಮಂತ್ರಿಯಾಗಿ ಅದೆಷ್ಟೇ ಬಿಝಿಯಾಗಿದ್ದರೂ, ಚಿತ್ರದ ತುಣುಕುಗಳನ್ನು ಪ್ರತಿ ದಿನ ನೋಡುವ ಹವ್ಯಾಸ ಮಾಡಿಕೊಂಡಿದ್ದೇನೆ. ಚಿತ್ರ ಚೆನ್ನಾಗಿ ಮೂಡಿಬರುತ್ತಿದೆ ಮತ್ತು ಇದೊಂದು ಉತ್ತಮ ಮತ್ತು ಯಶಸ್ವಿ ಚಿತ್ರವಾಗಲಿದೆ ಎಂಬ ವಿಶ್ವಾಸ ನನಗಿದೆ. ಚಿತ್ರದಲ್ಲಿ ನಿಖೀಲ್‌ ತಂದೆಯಾಗಿ ಶರತ್‌ ಕುಮಾರ್‌ ಕಾಣಿಸಿಕೊಂಡಿದ್ದಾರೆ. ಅವರಿಬ್ಬರಲ್ಲಿ ನನ್ನ ಮತ್ತು ಮಗನ ಬಾಂಧವ್ಯ ಕಂಡಿದ್ದೇನೆ. ನನ್ನ ಜೀವನದ ಕೆಲವು ಭಾಗಗಳನ್ನೇ ಈ ಚಿತ್ರದಲ್ಲಿ ಅಳವಡಿಸಿಕೊಂಡಿದ್ದಾರೆ ಅನಿಸುತ್ತದೆ. ಚಿತ್ರ ಮುಗಿಯುತ್ತಾ ಬಂದಿದೆ. ಈ ಚಿತ್ರದಿಂದ ದೊಡ್ಡ ಯಶಸ್ಸು ನಿರೀಕ್ಷೆ ಮಾಡುತ್ತಿದ್ದೇನೆ’ ಎಂದರು.

ಹರ್ಷ ಪಾಲಿಗೆ ಇದೊಂದು ದೊಡ್ಡ ಅವಕಾಶವಂತೆ. “ನಿರ್ಮಾಪಕರು ನನ್ನ ಮೇಲೆ ಬಹಳ ನಿರೀಕ್ಷೆ ಇಟ್ಟಿದ್ದಾರೆ. ಅವರ ನಿರೀಕ್ಷೆಗಳನ್ನು ನಾನು ಹುಸಿಗೊಳಿಸುವುದಿಲ್ಲ. ನಿಖೀಲ್‌ ಬಹಳ ಚೆನ್ನಾಗಿ ಡ್ಯಾನ್ಸ್‌ ಮತ್ತು ಫೈಟ್‌ ಮಾಡುತ್ತಾರೆ. ಇದು ಚಿತ್ರೀಕರಣದ 99ನೇ ದಿನ. ಆದರೂ ಅವರ ಉತ್ಸಾಹ ಕಡಿಮೆಯಾಗಿಲ್ಲ. ಅವರು ಇನ್ನೂ ಸಾಕಷ್ಟು ಬೆಳೆಯುತ್ತಾರೆ, ಎಲ್ಲಾ ಭಾಷೆಗಳಿಗೂ ಹೋಗುತ್ತಾರೆ’ ಎಂದು ಭವಿಷ್ಯ ನುಡಿದರು. ನಿಖೀಲ್‌ ಸಹ ಹರ್ಷ ಅವರನ್ನು ಹೊಗಳುತ್ತಾ ಮಾತು ಶುರು ಮಾಡಿದರು. “ಕಲಾವಿದರಿಗೆ ಹರ್ಷ ತುಂಬಾ ಉತ್ಸಾಹ ತುಂಬುತ್ತಾರೆ. ಅವರ ಜೊತೆಗೆ ಮತ್ತೆಮತ್ತೆ ಕೆಲಸ ಮಾಡುವ ಆಸೆ ಇದೆ. ಇನ್ನು ಟೀಸರ್‌ ದೊಡ್ಡ ಹಿಟ್‌ ಆಗಿದೆ. ಆ ಟೀಸರ್‌ನ ಸಾಹಸ ನಿರ್ದೇಶಕರಾದ ರಾಮ್‌-ಲಕ್ಷ್ಮಣ್‌ ಅವರಿಗೆ ಅರ್ಪಿಸುವುದಕ್ಕೆ ಇಷ್ಟಪಡುತ್ತೇನೆ. ಈ ಚಿತ್ರ ರೀಮೇಕ್‌ ಎನ್ನುವ ವಿಚಾರ ಕೇಳಿದ್ದೇನೆ. ಇದು ಯಾವುದೇ ಚಿತ್ರದ ರೀಮೇಕ್‌ ಅಲ್ಲ, ಹಲವು ಚಿತ್ರಗಳಿಂದ ಸ್ಫೂರ್ತಿ ಪಡೆದಂತಹ ಚಿತ್ರ’ ಎಂದರು. ಅದಕ್ಕೆ ಸರಿಯಾಗಿ ಪಕ್ಕದಲ್ಲಿದ್ದ ಹಿರಿಯ ನಟ ಶರತ್‌ ಕುಮಾರ್‌, “ನಾನೂ ಇದುವರೆಗೂ 140 ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ನಾನು ನೋಡಿರುವಂತೆ ಇದು ಯಾವ ಚಿತ್ರದ ರೀಮೇಕ್‌ ಸಹ ಅಲ್ಲ. ಹಾಡುಗಳು, ಆ್ಯಕ್ಷನ್‌ ನೋಡುತ್ತಿದ್ದರೆ ಹೋಲಿಕೆ ಸಹಜ’ ಎಂದರು.

ಅಂದು ವೇದಿಕೆಯ ಮೇಲೆ ರಚಿತಾ ರಾಮ್‌, ಗಿರಿಜಾ ಲೋಕೇಶ್‌, ರವಿಶಂಕರ್‌, ಮಧು, ಜ್ಯೋತಿ ರೈ ಸೇರಿದಂತೆ ಹಲವು ಕಲಾವಿದರ ದಂಡೇ ಇತ್ತು. ಅವರೆಲ್ಲರೂ ಚಿತ್ರದಲ್ಲಿ ನಿಖೀಲ್‌ ಮತ್ತು ರಚಿತಾ ರಾಮ್‌ ಅವರ ಕುಟುಂಬದ ಸದಸ್ಯರಾಗಿ ಕಾಣಿಸಿಕೊಂಡಿದ್ದಾರೆ. ಎಲ್ಲರೂ ಚಿತ್ರದಲ್ಲಿನ ತಮ್ಮ ಅನುಭವ ಹಂಚಿಕೊಳ್ಳುವುದರ ಜೊತೆಗೆ, ಚಿತ್ರ ಮೂಡಿಬರುತ್ತಿರುವ ಬಗ್ಗೆ ಖುಷಿ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.