ಕನ್ನಡಕ್ಕೆ ಮತ್ತೂಬ್ಬ ವಿ. ರವಿಚಂದ್ರನ್‌


Team Udayavani, Aug 24, 2018, 6:00 AM IST

good-bye-kannada-movie-ravichandran-v.jpg

ಕನ್ನಡದಲ್ಲಿ ಈಗಾಗಲೇ ಹಲವು ತಂತ್ರಜ್ಞರ ಮಕ್ಕಳು ಹೀರೋಗಳಾಗಿ ಎಂಟ್ರಿಯಾಗಿದ್ದಾರೆ. ಆ ಸಾಲಿಗೆ ಈಗ ಕೌರವ ವೆಂಕಟೇಶ್‌ ಪುತ್ರ ವಿ.ರವಿಚಂದ್ರನ್‌ ಹೊಸ ಸೇರ್ಪಡೆ. ಹೌದು, ಕನ್ನಡ, ಹಿಂದಿ, ತೆಲುಗು, ತಮಿಳು, ತುಳು ಭಾಷೆಯ ಸುಮಾರು 1125 ಚಿತ್ರಗಳಿಗೆ ಫೈಟರ್‌ ಆಗಿ, ಸಾಹಸ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಕೌರವ ವೆಂಕಟೇಶ್‌, ತಮ್ಮ ಪುತ್ರ ವಿ. ರವಿಚಂದ್ರನ್‌ ಅವರನ್ನು “ಗುಡ್‌ ಬೈ’ ಚಿತ್ರದ ಮೂಲಕ ಹೀರೋ ಕಮ್‌ ನಿರ್ದೇಶಕರನ್ನಾಗಿ ಪರಿಚಯಿಸುತ್ತಿದ್ದಾರೆ.

ಸದ್ದಿಲ್ಲದೆಯೇ ಶುರುವಾಗಿದ್ದ “ಗುಡ್‌ ಬೈ’ ಈ ವಾರ ತೆರೆಕಾಣುತ್ತಿದೆ. ಆ ಕುರಿತು ಹೇಳಲೆಂದೇ ಮಾಧ್ಯಮ ಮುಂದೆ ಕುಳಿತಿತ್ತು ಚಿತ್ರತಂಡ. ಅಂದು ಮಾತಿಗಿಳಿದ ಕೌರವ ವೆಂಕಟೇಶ್‌, “ಇಂದು ನನ್ನ ಸಾಧನೆಗೆ ಮಾಧ್ಯಮ ಕಾರಣ. ಮೊದಲ ಬಾರಿಗೆ ನನ್ನ ಮಗ ಹೀರೋ ಆಗಿ, ನಿರ್ದೇಶಕನಾಗಿ ಕಾಣಿಸಿಕೊಳ್ಳುತ್ತಿದ್ದಾನೆ. ಎಷ್ಟೋ ನಿರ್ದೇಶಕರ ಚಿತ್ರಗಳಿಗೆ ನಾನು ಸಾಹಸ ಸಂಯೋಜಿಸಿದ್ದೇನೆ.

ನನ್ನ ಮಗನ ನಿರ್ದೇಶನದ ಚಿತ್ರಕ್ಕೆ ಸಾಹಸ ಮಾಡುತ್ತಿರುವುದು ಖುಷಿ ಕೊಟ್ಟಿದೆ. ಈ ವಾರ ಚಿತ್ರ ತೆರೆಗೆ ಬರುತ್ತಿದೆ. ನನಗೆ ಕೊಟ್ಟ ಸಹಕಾರ ನನ್ನ ಮಗನಿಗೂ ಕೊಡಿ. ಸಿನಿಮಾ ರಂಗದಲ್ಲಿ ಎಲ್ಲವೂ ಸುಲಭವಲ್ಲ. ನಾನು ಸಾಕಷ್ಟು ಕಷ್ಟಪಟ್ಟಿದ್ದೇನೆ. ನನ್ನ ಕೆಲಸ ಗುರುತಿಸಿದ್ದು, ಮಾಧ್ಯಮ. ಮಗನ ಮೊದಲ ಚಿತ್ರ ತಪ್ಪಿದ್ದರೆ ತಿದ್ದಿ, ಚೆನ್ನಾಗಿದ್ದರೆ ಬೆನ್ನು ತಟ್ಟಿ ಪ್ರೋತ್ಸಾಹಿಸಿ’ ಅಂದರು ಕೌರವ ವೆಂಕಟೇಶ್‌.

ಮೊದಲ ಸಲ ನಾಯಕನಾಗಿ, ನಿರ್ದೇಶಕನಾಗಿಯೂ ಕಾಣಿಸಿಕೊಳ್ಳುತ್ತಿರುವ ವಿ.ರವಿಚಂದ್ರನ್‌, “ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌. ಸಾಮಾನ್ಯವಾಗಿ ಫ್ರೆಂಡ್‌ಶಿಪ್‌ ಬಿಟ್ಟುಹೋದಾಗ, ಲವ್‌ ಬ್ರೇಕಪ್‌ ಆದಾಗ, ಕೊನೆಯಲ್ಲಿ ಬಳಸುವ ಪದವೇ “ಗುಡ್‌ ಬೈ’. ಈ ಚಿತ್ರದ ಮೂಲಕ ಜನರಿಗೆ ಹೊಸ ಸಂದೇಶ ಕೊಡಲು ಹೊರಟಿದ್ದೇನೆ. ನಾನು ಅಪ್ಪನ ಜೊತೆ ಸೆಟ್‌ಗೆ ಹೋಗುತ್ತಿದ್ದೆ. ಆಗಲೇ ಸಿನಿಮಾ ಆಸಕ್ತಿ ಬೆಳೆದಿತ್ತು. 

ನಿರ್ದೇಶಕರು ಹೇಗೆಲ್ಲಾ ಕೆಲಸ ಮಾಡುತ್ತಾರೆ ಅನ್ನುವುದನ್ನು ನೋಡುತ್ತಿದ್ದೆ.ನಿರ್ದೇಶನ ಮಾಡಬೇಕು ಅಂತ ತಯಾರಿ ನಡೆಸಿದ್ದೆ.ಇನ್ಸ್‌ಟಿಟಿೂÂಟ್‌ಗೂ ಹೋಗಿ ತರಬೇತಿ ಪಡೆದೆ ಲವ್‌, ಸಸ್ಪೆನ್ಸ್‌ ಕಥೆ ಮಾಡಿಕೊಂಡು ಮರ್ಡರ್‌ ಮಿಸ್ಟ್ರಿ ಚಿತ್ರ ಮಾಡಿದ್ದೇನೆ. ನಾನಿಲ್ಲಿ ಕಾಲೇಜ್‌ ಸ್ಟುಡೆಂಟ್‌ ಆಗಿ ನಟಿಸಿದ್ದೇನೆ. ಮೊನಿಷಾ ಥಾಮಸ್‌ ನಾಯಕಿಯಾಗಿದ್ದಾರೆ. ಇನ್ನು ಚಿತ್ರದಲ್ಲಿ ನಾಲ್ಕು ಹಾಡುಗಳಿವೆ.

ಬೆಂಗಳೂರು, ಸಕಲೇಶಪುರ ಸುತ್ತಮುತ್ತ ಚಿತ್ರೀಕರಣವಾಗಿದೆ. ಚಿತ್ರದಲ್ಲಿ ಶೋಭರಾಜ್‌, ಬಿರಾದಾರ್‌, ಪದ್ಮಾವಾಸಂತಿ ಇತರರು ಇದ್ದಾರೆ’ ಅಂತ ವಿವರ ಕೊಟ್ಟರು ನಿರ್ದೇಶಕರು. “ಜಮಾನ’ ಚಿತ್ರದ ನಾಯಕ ಜಯಪ್ರಕಾಶ್‌, ಈ ಚಿತ್ರದಲ್ಲೊಂದು ವಿಶೇಷ ಪಾತ್ರ ಮಾಡಿದ್ದಾರಂತೆ. “ಕೌರವ ವೆಂಕಟೇಶ್‌ ಮಾಸ್ಟರ್‌ “ಜಮಾನ’ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್‌ ಮಾಡಿಸಿದ್ದರು. ಆಗ ಯಾವುದೇ ಡೂಪ್‌ ಇಲ್ಲದೆ ಸ್ಟಂಟ್‌ ಮಾಡಿದ್ದೆ. ಇಲ್ಲಿ ಆ್ಯಕ್ಷನ್‌ ಹೆಚ್ಚಾಗಿರುವುದರಿಂದ ನನಗೊಮ್ಮೆ ಫೋನ್‌ ಮಾಡಿ, ಕಥೆ ಹೇಳಿಸಿದರು. ಇಷ್ಟವಾಗಿ ಮಾಡಿದ್ದೇನೆ.ಯುವ ನಿರ್ದೇಶಕ, ಯುವ ನಾಯಕನೊಬ್ಬನ ಜೊತೆ ಕೆಲಸ ಮಾಡಿದ್ದು ಸಂತಸವಾಗಿದೆ’ ಅಂದರು ಜಯಪ್ರಕಾಶ್‌.

ವೆಸಿ ಬ್ರೌನ್‌ ಚಿತ್ರಕ್ಕೆ ಛಾಯಾಗ್ರಾಹಕರು. ಅವರಿಲ್ಲಿ ಎರಡು ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಿಸಿದ್ದಾರಂತೆ. ಮಗನ ಚಿತ್ರಕ್ಕೆ ತಂದೆ ಸಾಹಸ ಮಾಡಿದ್ದಾರೆ. ಸಾಮಾನ್ಯವಾಗಿ ತಂದೆ ಹೇಳಿದಂತೆ ಮಗ ಕೇಳ್ತಾನೆ. ಆದರೆ, ಈ ಚಿತ್ರದಲ್ಲಿ ಮಗ ಹೇಳಿದಂತೆ ತಂದೆ ಕೆಲಸ ಮಾಡಿದ್ದಾರೆ. ಒಂದೊಳ್ಳೆಯ ಚಿತ್ರ ಇದಾಗಲಿದೆ ಎಂಬುದು ವೆಸ್ಲಿಬ್ರೌನ್‌ ಮಾತು.

ಚಿತ್ರಕ್ಕೆ ರಮಾದೇವಿ ವೆಂಕಟೇಶ್‌ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಉತ್ತರ ಕರ್ನಾಟಕ ಕಲಾವಿದ ಸಿದ್ದು ಹಾಸ್ಯ ಪಾತ್ರ
ನಿರ್ವಹಿಸಿದ್ದಾರಂತೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.