ಗೋವಿಯ ಹಾಡುಂಟು


Team Udayavani, Aug 24, 2018, 6:00 AM IST

yarige-yaruntu-film.jpg

“ಪಾರು ವೈಫ್ ಆಫ್ ದೇವದಾಸ್‌’ ನಂತರ ಕಿರಣ್‌ ಗೋವಿಯಾವೊಂದು ಚಿತ್ರವನ್ನೂ ಮಾಡಿರಲಿಲ್ಲ. ಕಾರಣ ತಂದೆಯ
ಅನಾರೋಗ್ಯ. ತಂದೆಯವರು ಆಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಅವರಿಗೆ ದಾಸರ “ಯಾರಿಗೆ ಯಾರುಂಟು’ ನೆನಪಾಯಿತಂತೆ. ಈಗ ಅದೇ ಹೆಸರಿನಲ್ಲಿ ಅವರು ಸದ್ದಿಲ್ಲದೆ ಒಂದು ಸಿನಿಮಾ ಮಾಡಿದ್ದಾರೆ. “ಒರಟ’ ಪ್ರಶಾಂತ್‌, ಕೃತಿಕಾ, ಲೇಖಾ ಚಂದ್ರ, ಅದಿತಿ ರಾವ್‌ ಮುಂತಾದವರು ನಟಿಸಿರುವ ಈ ಚಿತ್ರದ ಚಿತ್ರೀಕರಣ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಅದಕ್ಕೂ ಮುನ್ನ ಇತ್ತೀಚೆಗೆ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಶೈಕ್ಷಣಿಕ ಮತ್ತು ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಂಕೇಗೌಡ ಮತ್ತು ಆಟೋ ರಾಜ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಿರಣ್‌ ಗೋವಿ,”ಇದೊಂದು ರೊಮ್ಯಾಂಟಿಕ್‌ ಕಾಮಿಡಿ ಚಿತ್ರ. ಎಚ್‌.ಸಿ.ರಘುನಾಥ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅವರು ನಮ್ಮ ಚಿಕ್ಕಪ್ಪ.ನನ್ನ ಕಷ್ಟದಲ್ಲಿ ನಿಂತು ತಮ್ಮ ಸ್ನೇಹಿತರೊಟ್ಟಿಗೆ ಚಿತ್ರ ನಿರ್ಮಿಸಿದ್ದಾರೆ. ಇನ್ನು ಪ್ರಶಾಂತ್‌ ಸಹ ಕೈಜೋಡಿಸಿದ್ದಾರೆ. ಬಿ.ಜೆ. ಭರತ್‌ ಸಂಗೀತ ಸಂಯೋಜಿಸಿದರೆ, ರಾಕೇಶ್‌ ಛಾಯಾಗ್ರಹಣ ಮಾಡಿದ್ದಾರೆ’ ಎಂದು ಮಾಹಿತಿ ಕೊಟ್ಟರು. ನಿರ್ಮಾಪಕರಿಗೆ ಕಥೆ ಬಹಳ ಇಷ್ಟವಾಯಿತಂತೆ. ಅದೇ ಕಾರಣಕ್ಕೆ ಅವರು ಚಿತ್ರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆದರೆ, ಸಿನಿಮಾ ಮಾಡುತ್ತಾ ಮಾಡುತ್ತಾ ಅವರಿಗೆ ಚಿತ್ರರಂಗ ಏನು ಅಂತ ಗೊತ್ತಾಗಿದೆ. ಆದರೂ ಒಂದೊಳ್ಳೆಯ ಚಿತ್ರ ನಿರ್ಮಾಣ ಮಾಡಿದ ಖುಷಿ ಇದೆ ಎಂದು ರಘುನಾಥ್‌ ಹೇಳಿಕೊಂಡರು.

ಅಂದು ಹಾಡುಗಳನ್ನು ಬಿಡುಗಡೆ ಮಾಡುವುದಕ್ಕೆ ಕೆ. ಕಲ್ಯಾಣ್‌ ಬಂದಿದ್ದರು. “ಇಲ್ಲಿ “ಯಾರಿಗೆ ಯಾರುಂಟು’ ಎಂಬ ಕ್ವೆಶ್ಚನ್‌ ಮಾರ್ಕ್‌ ಬೇಡ. ಯಾರಿಗೇ ಆದರೂ ಒಬ್ಬರಲ್ಲ ಒಬ್ಬರು ಇದ್ದೇ ಇರುತ್ತಾರೆ. ಹಾಗಾಗಿ ಪ್ರಶ್ನಾರ್ಥಕ ಚಿಹ್ನೆಯಾಗಲೀ, ದುಃಖದ ಛಾಯೆಯಾಗಲೀ ಬೇಡ. ಇದೊಂದು ಕಲರ್‌ಫ‌ುಲ್‌ ಚಿತ್ರವಾಗುತ್ತದೆ ಎಂಬ ನಂಬಿಕೆ ನನಗಿದೆ. ಜೊತೆಗೆ ಈ ವೇದಿಕೆಯ ಮೇಲೆ ಶೈಕ್ಷಣಿಕ,ಮಾನವೀಯ ಮತ್ತು ವೈದ್ಯಕೀಯ ವಲಯದಲ್ಲಿ ಗುರುತಿಸಿಕೊಂಡ ಮೂವರು ಮಹನೀಯರನ್ನು ಸ್ಮರಿಸಿಕೊಳ್ಳಲಾಯಿತು. ಅದೊಂದು ಸಾರ್ಥಕ ಪ್ರಯತ್ನ. ಕಿರಣ್‌ ಗೋವಿ ಅವರ ಹಿಂದಿನ ಚಿತ್ರಗಳು ಮ್ಯೂಸಿಕಲ್‌ ಹಿಟ್‌ ಆಗಿದ್ದವು. ಈ ಚಿತ್ರ ಸಹ ಮ್ಯೂಸಿಕಲ್‌ ಹಿಟ್‌ ಆಗಲಿ’ಎಂದು ಹಾರೈಸಿದರು.

ಇನ್ನು ಚಿತ್ರದಲ್ಲಿ ನಟಿಸಿದ ಪ್ರಶಾಂತ್‌, ಕೃತಿಕಾ, ಲೇಖ ಚಂದ್ರ, ಅದಿತಿ ರಾವ್‌ ಮುಂತಾದವರು ಹಾಜರಿದ್ದರು. “ಚಿತ್ರದ ಟೈಟಲ್‌
ಎಷ್ಟು ಅರ್ಥಗರ್ಭಿತವಾಗಿದೆಯೋ, ಈ ಆಡಿಯೋ ಬಿಡುಗಡೆ ಸಹ ಅಷ್ಟೇ ಅರ್ಥಗರ್ಭಿತವಾಗಿದೆ. ಇದು ನನ್ನ ಕಂಬ್ಯಾಕ್‌ ಚಿತ್ರ. ಕಿರಣ್‌ ಗೋವಿ ಒಳ್ಳೆಯ ಕಥೆ ಮಾಡಿದ್ದಾರೆ. ಮೂವರು ನಾಯಕಿಯರಿದ್ದಾರೆ.

ಒಂದೊಳ್ಳೆಯ ತಂಡ ಸೇರಿಕೊಂಡು ಈ ಚಿತ್ರದ ಮಾಡಿದೆ’ ಎಂದು ಖುಷಿಪಟ್ಟರು. ನಂತರ ಚಿತ್ರದ ಮೂರೂ ನಾಯಕಿಯರು ಚಿತ್ರದ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.