ಕ್ಲೈಮ್ಯಾಕ್ಸ್‌ ಇಲ್ಲದ ಕಥೆ


Team Udayavani, Aug 24, 2018, 6:00 AM IST

nishkarsha.jpg

ಹಳೆಯ ಯಶಸ್ವಿ ಚಿತ್ರಗಳ ಟೈಟಲ್‌ಗ‌ಳು ಇತ್ತೀಚೆಗೆ ಸ್ವಲ್ಪ ಹೆಚ್ಚೇ ಮರುಬಳಕೆಯಾಗುತ್ತಿವೆ. ಹಾಗಂತ ಹಳೆಯ ಸಿನಿಮಾಳಲ್ಲಿದ್ದ ಗಟ್ಟಿತನ ಮರುಕಳಿಸುತ್ತಿದೆಯಾ ಎಂದರೆ ಅದಕ್ಕೆ ಉತ್ತರವಿಲ್ಲ.

ಈಗ ಮತ್ತೂಂದು ಯಶಸ್ವಿ ಕನ್ನಡ ಚಿತ್ರದ ಟೈಟಲ್‌ ಇಟ್ಟುಕೊಂಡು ಹೊಸಬರ ತಂಡ ಸಿನಿಮಾ ಮಾಡುತ್ತಿದೆ. ಅದು “ನಿಷ್ಕರ್ಷ’. ಸುನೀಲ್‌ ಕುಮಾರ್‌ ದೇಸಾಯಿ ನಿರ್ದೇಶನದ ವಿಷ್ಣುವರ್ಧನ್‌ ನಟನೆಯಲ್ಲಿ ಬಂದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಥ್ರಿಲ್ಲರ್‌ ಸಿನಿಮಾವಾಗಿ ಪ್ರೇಕ್ಷಕರ ಮನಸು ಗೆದ್ದಿತ್ತು. ಈಗ ಅದೇ ಟೈಟಲ್‌ನಡಿ ಹೊಸಬರು ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ಹೊಸಬರ “ನಿಷ್ಕರ್ಷ’ ಚಿತ್ರ ಮುಹೂರ್ತ ಕಂಡಿತು. ವಿಜಯ್‌ ಈ ಸಿನಿಮಾದ ನಿರ್ದೇಶಕರು. 

ವಿಜಯ್‌ ನಿರ್ದೇಶನದ ಮೊದಲ ಚಿತ್ರ “ಉಸಿರೇ ಉಸಿರೇ’ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಅಷ್ಟರಲ್ಲೇ ವಿಜಯ್‌  “ನಿಷ್ಕರ್ಷ’ ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರದ ಮೂಲಕ ಅನಿಕೇತ್‌ ನಾಯಕರಾಗಿ ಲಾಂಚ್‌ ಆಗುತ್ತಿದ್ದಾರೆ.ಚಿತ್ರವನ್ನು ಇವರ ತಂದೆ ಮಹೇಶ್‌ ನಿರ್ಮಿಸುತ್ತಿದ್ದಾರೆ.ಚಿತ್ರದ ಬಗ್ಗೆ ಮಾತನಾಡುವ ವಿಜಯ್‌, “ನಿರ್ಮಾಪಕರು ಅವರ ಮಗನ ಲಾಂಚ್‌ ಮಾಡೋಕೆ ಕಥೆ ಹುಡುಕುತ್ತಾ ಇದ್ದರು. ಆ ಸಮಯದಲ್ಲಿ ನಾನು ಈ ಕಥೆ ಹೇಳಿದೆ. ಅವರಿಗೆ ಇಷ್ಟವಾಗಿ ಸಿನಿಮಾ ಮಾಡಲು ಮುಂದಾಗಿದ್ದಾರೆ. ಕಥೆ ತುಂಬಾ ಭಿನ್ನವಾಗಿದೆ. ಈ ಚಿತ್ರದ ಪ್ರಮುಖ ಹೈಲೈಟ್‌ ಎಂದರೆ ಚಿತ್ರಕಥೆ ಎರಡು ಟ್ರ್ಯಾಕ್‌ನಲ್ಲಿ ಸಾಗುತ್ತದೆ ಹಾಗೂ ಈ ಚಿತ್ರಕ್ಕೆ ಕ್ಲೈಮ್ಯಾಕ್ಸ್‌ ಇಲ್ಲ. ಹಾಗಂತ ಚಿತ್ರ ಹೇಗೆ ಮುಗಿಯುತ್ತದೆ ಎಂಬ ಕುತೂಹಲ ಸಹಜ. ಅದಕ್ಕೆ ಸಿನಿಮಾದಲ್ಲಿ ಉತ್ತರವಿದೆ’ ಎಂದು ಚಿತ್ರದ ಬಗ್ಗೆ ಹೇಳಿಕೊಂಡರು ವಿಜಯ್‌. ಎಲ್ಲಾ ಓಕೆ. ಚಿತ್ರದ ಕಥೆಯೇನು, ಯಾವ ವಿಚಾರವಿಟ್ಟುಕೊಂಡು ಸಿನಿಮಾ ಮಾಡುತ್ತಿದ್ದಾರೆಂದು ನೀವು ಕೇಳಬಹುದು.

ಎರಡುವರ್ಷಗಳಹಿಂದೆ ನಡೆದ ನೈಜಘಟನೆಯೊಂದನ್ನಿಟ್ಟುಕೊಂಡ ನಿರ್ದೇಶಕರು ಸಿನಿಮಾಮಾಡುತ್ತಿದ್ದಾರಂತೆ. ಅಷ್ಟಕ್ಕೂಏನುಆ ನೈಜಘಟನೆಎಂದರೆಅದನ್ನು ಹೇಳಲು ನಿರ್ದೇಶಕರುತಯಾರಿಲ್ಲ. ಸಿನಿಮಾ ನೋಡಿಹೊರಬಂದ ನಂತರಹೆಣ್ಣು ಮಕ್ಕಳನ್ನು
ಕೆಟ್ಟ ದೃಷ್ಟಿಯಿಂದ ನೋಡುವ ಮುನ್ನ ತುಂಬಾ ಆಲೋಚಿಸಬೇಕಾಗುತ್ತದೆ ಎಂದಷ್ಟೇ ಹೇಳುತ್ತಾರೆ ನಿರ್ದೇಶಕರು. ಮುಂದಿನ ಕಥೆಯನ್ನು ನೀವು ಊಹಿಸಿಕೊಳ್ಳಬಹುದು. ನಿರ್ಮಾಪಕ ಮಹೇಶ್‌ ಅವರು ಕಥೆ ಇಷ್ಟವಾಗಿ ಸಿನಿಮಾ ಮಾಡುತ್ತಿರುವುದಾಗಿ ಹೇಳಿಕೊಂಡರು. ಚಿತ್ರದಲ್ಲಿ ನಟಿಸುತ್ತಿರುವಅನಿಕೇತ್‌ ಅವರ ಬಾಡಿಲಾಂಗ್ವೇಜ್‌ ಈ ಪಾತ್ರಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತದೆಯಂತೆ. ಅದು ಬಿಟ್ಟರೆ ಪಾತ್ರದ ಬಗ್ಗೆ ಹೆಚ್ಚೇನು ಹೇಳಿಕೊಳ್ಳಲಿಲ್ಲ. ದಿವ್ಯಾ ಉರುಡುಗ ಈ ಚಿತ್ರದ ನಾಯಕಿ.

“ಹುಲಿರಾಯ’ ಚಿತ್ರ ನೋಡಿ ಅವರಿಗೆ ಈ ಅವಕಾಶ ಸಿಕ್ಕಿತಂತೆ. ಇಲ್ಲಿ ಅವರು ಬಜಾರಿ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಚಿತ್ರಕ್ಕೆ ವಿವೇಕ್‌ ಸಂಗೀತ, ಸರವಣ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.