ಒಡೆಯನ ಸ್ಪಷ್ಟನೆ ಹೆಸರಿಡದಿದ್ದರೂ ವಿವಾದ


Team Udayavani, Aug 24, 2018, 6:00 AM IST

odeya-kannada-movie.jpg

ನಿರ್ಮಾಪಕ ಸಂದೇಶ್‌ ನಾಗರಾಜ್‌ ಅವರ ಹುಟ್ಟುಹಬ್ಬದಂದು ದರ್ಶನ್‌ ಹೊಸ ಚಿತ್ರ ಪ್ರಾರಂಭ ಎಂಬ ಸುದ್ದಿ ಎರಡು ತಿಂಗಳಿಂದಲೇ ಇತ್ತು. ಅದಕ್ಕೆ ಸರಿಯಾಗಿ, ಆಗಸ್ಟ್‌ 16ರಂದು ಅಂತೂ ದರ್ಶನ್‌ ಅಭಿನಯದ “ಒಡೆಯ’ ಮೈಸೂರಿನಲ್ಲಿ ಸೆಟ್ಟೇರಿದೆ. ಸಂದೇಶ್‌ ನಾಗರಾಜ್‌ ಅವರ ಮನೆಯಲ್ಲೇ ಚಿತ್ರದ ಮುಹೂರ್ತ ನಡೆಯಿತು. ಹಿರಿಯ ನಟ ಅಂಬರೀಶ್‌, ಬಿಜೆಪಿ ಮುಖಂಡ ರಾಮಚಂದ್ರಗೌಡ ಮೊದಲಾದವರು ಆಗಮಿಸಿ ಶುಭ ಹಾರೈಸಿದರು.

ನಂತರವೇ ಪತ್ರಿಕಾಗೋಷ್ಠಿ ಚಿತ್ರದ ಬಗ್ಗೆ ಮಾತನಾಡಿದ ದರ್ಶನ್‌, ಇದೊಂದು ಫ್ಯಾಮಿಲಿ ಸೆಂಟಿಮೆಂಟ್‌ ಚಿತ್ರ. ಜೊತೆಗೆ ಆಕ್ಷನ್‌ ಸಿನಿಮಾ. ನಾನು ಫ್ಯಾಮಿಲಿ ಸೆಂಟಿಮೆಂಟ್‌ ಚಿತ್ರ ಮಾಡಿ ತುಂಬಾ ದಿನಗಳಾಗಿತ್ತು. ಸಂದೇಶ್‌ ಪ್ರೊಡಕ್ಷನ್‌ನಲ್ಲಿ ಕೆಲಸ ಮಾಡುವುದು ತುಂಬಾ ಖುಷಿ ಕೊಡುತ್ತದೆ. ಸಂದೇಶ್‌ ಪ್ರೊಡಕ್ಷನ್‌ ಬೇರೆಯಲ್ಲ, ತೂಗುದೀಪ ಪ್ರೊಡಕ್ಷನ್‌ ಬೇರೆಯಲ್ಲ. ಸೆಪ್ಟೆಂಬರ್‌ 10ರಂದು ಚಿತ್ರೀಕರಣ ಆರಂಭವಾಗಲಿದೆ. ಮೊದಲ ಹಂತದ ಚಿತ್ರೀಕರಣ ಮೈಸೂರಿನಲ್ಲೇ 35 ರಿಂದ 40 ದಿನಗಳ ಕಾಲ ನಡೆಯಲಿದೆ. ಬಳಿಕ ಬೆಂಗಳೂರು, ಹೈದ್ರಾಬಾದ್‌ನಲ್ಲಿ ಚಿತ್ರೀಕರಣ ನಡೆಯಲಿದೆ’ ಎಂದು ತಿಳಿಸಿದರು.

ಇನ್ನು ಚಿತ್ರದ ಟೈಟಲ್‌ ವಿವಾದದ ಬಗ್ಗೆ ಅವರ ಗಮನ ಸೆಳೆದಾಗ, “ಚಿತ್ರಕ್ಕೆ “ಒಡೆಯರ್‌’ ಅಂತ ನಾವು ಟೈಟಲ್‌ ಇಟ್ಟಿರಲಿಲ್ಲ. ಫಿಲ್ಮ್ ಚೇಂಬರ್‌ನಲ್ಲೂ ಆ ಹೆಸರನ್ನು ರಿಜಿಸ್ಟರ್‌ ಮಾಡಿಸಿರಲಿಲ್ಲ. ಆದರೂ ವಿವಾದ ಯಾಕೆ ಹುಟ್ಟಿಕೊಳೊ ಗೊತ್ತಿಲ್ಲ’ ಎಂದು ದರ್ಶನ್‌ ಹೇಳಿದರು.

ಚಿತ್ರದ ನಿರ್ದೇಶಕ ಎಂ.ಡಿ.ಶ್ರೀಧರ್‌ ಮಾತನಾಡಿ, “ಸಂದೇಶ್‌ ನಾಗರಾಜ್‌ ಅವರ ಬ್ಯಾನರ್‌ನಲ್ಲಿ ಅನೇಕ ಚಿತ್ರಗಳಿಗೆ ಸಹಾಯಕ
ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ನಿರ್ದೇಶಕನಾಗಿ ಇದು ನನ್ನ ಮೊದಲ ಸಿನಿಮಾ. ದರ್ಶನ್‌ ಅವರ ಮೂರನೇ ಚಿತ್ರ ಇದು. ಬ್ಯಾನರ್‌ ಯಾವುದೇ ಆಗಲೀ, ದರ್ಶನ್‌ ಸಿನಿಮಾ ಮಾಡುವುದು ನನ್ನ ಭಾಗ್ಯ. ರವಿಶಂಕರ್‌, ದೇವರಾಜ್‌, ಚಿಕ್ಕಣ್ಣ, ಸಾಧು ಕೋಕಿಲ ಮೊದಲಾದ ಕಲಾವಿದರನ್ನು ಚಿತ್ರಕ್ಕೆ ಆಯ್ಕೆ ಮಾಡಲಾಗಿದೆ. ನಾಯಕ ನಟಿಯ ಹುಡುಕಾಟ ನಡೆಯುತ್ತಿದ್ದು, ಈ ತಿಂಗಳಾಂತ್ಯಕ್ಕೆ ಆಯ್ಕೆ ಅಂತಿಮಗೊಳಿಸಲಾಗುವುದು’ ಎಂದರು.

ಛಾಯಾಗ್ರಾಹಕ ಕೃಷ್ಣಕುಮಾರ್‌ಗೂ ಸಂದೇಶ್‌ ಪ್ರೊಡಕ್ಷನ್ಸ್‌ ಜೊತೆಗೆ ಹಳೆಯ ನಂಟು. “ದರ್ಶನ್‌ ಜತೆ ಇದು ನನ್ನ 11ನೇ ಸಿನಿಮಾ. ಸಂದೇಶ್‌ ನಾಗರಾಜ್‌ ಅವರ ಬ್ಯಾನರ್‌ನಲ್ಲಿ ಏಳೆಂಟು ಸಿನಿಮಾ ಮಾಡಿದ್ದೇನೆ. ಇದೊಂದು ರೀತಿ ಹೋಂ ಬ್ಯಾನರ್‌ ಇದ್ದಂತೆ.  ತಮಿಳಿನ ಹಿಟ್‌ ಸಿನಿಮಾ ತಂದಿದ್ದೇವೆ. ನಿರ್ಮಾಪಕ ಸಂದೇಶ್‌ ನಾಗರಾಜ್‌ ಅವರ ಸಹಕಾರದೊಂದಿಗೆ ಅದಕ್ಕಿಂತ ಅದ್ದೂರಿ ಸಿನಿಮಾ ಮಾಡುತ್ತೇವೆ’ ಎಂದರು.

– ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.