ಚೌಕುರ್‌ ಗೇಟ್‌ನಲ್ಲಿ ನಿಂತ ಹೊಸಬರು


Team Udayavani, Aug 31, 2018, 6:00 AM IST

23.jpg

“ಚೌಕುರ್‌ ಗೇಟ್‌…
– ಈ ಶೀರ್ಷಿಕೆ ನೋಡಿದರೆ, ಇದೊಂದು ಹಾರರ್‌ ಚಿತ್ರ ಇರಬೇಕು ಅಂತ ಅನಿಸುವುದು ನಿಜ. ಹಾಗಂದುಕೊಂಡರೆ ಇದು ಹಾರರ್‌ ಚಿತ್ರವಲ್ಲ. ಒಂದು ಸಸ್ಪೆನ್ಸ್‌ -ಥ್ರಿಲ್ಲರ್‌ ಚಿತ್ರ ಎಂಬುದು ನಿರ್ದೇಶಕ ದಿನೇಶ್‌ ಮಾತು. ಈ ವಾರ ಚಿತ್ರ ತೆರೆಗೆ ಬರುತ್ತಿದೆ. ಬಹುತೇಕ ಹೊಸಬರೇ ಸೇರಿ ಮಾಡಿರುವ ಇದು ಪ್ಯಾಕೇಜ್‌ ಸಿನಿಮಾ ಎನ್ನುತ್ತಾರೆ ದಿನೇಶ್‌. ಏನದು ಪ್ಯಾಕೇಜ್‌ ಸಿನಿಮಾ ಎಂಬ ಪ್ರಶ್ನೆಗೆ, “ಇಲ್ಲಿ ಸಸ್ಪೆನ್ಸ್‌ ಇದೆ, ಥ್ರಿಲ್ಲರ್‌ ಇದೆ, ಬೆಚ್ಚಿಬೀಳಿಸುವ ಘಟನೆಗಳೂ ಇವೆ. ಜೊತೆಗೊಂದಷ್ಟು ಹಾಸ್ಯವೂ ಇದೆ. ಹಾಗಾಗಿ ಇದೊಂದು ಎಲ್ಲಾ ಪ್ಯಾಕೇಜ್‌ ಇರುವಂತಹ ಚಿತ್ರ’ ಎಂದು ಉತ್ತರ ಕೊಡುತ್ತಾರೆ ನಿರ್ದೇಶಕರು. 

ಎಲ್ಲಾ ಸರಿ, “ಚೌಕುರ್‌ ಗೇಟ್‌’ ಅನ್ನುವುದು ಏನು? “ಒಂದು ಕಾಡಿನ ಮಧ್ಯೆ ಸಿಗುವಂತಹ ಸ್ಥಳವೇ ಚೌಕುರ್‌ ಗೇಟ್‌. ಅಲ್ಲೊಂದು ತಂಡ ಯಾವುದೋ ವಿಷಯಕ್ಕೆ ಹೋಗುತ್ತೆ. ಇನ್ನೂ ಮೂರು ಕಿಲೋಮೀಟರ್‌ ದೂರದಲ್ಲಿ ಚೌಕುರ್‌ ಗೇಟ್‌ ಇರುತ್ತೆ. ಅಲ್ಲಿಗೆ ತಲುಪುವ ಮಧ್ಯೆ ಸಾಕಷ್ಟು ಘಟನೆಗಳು ಸಂಭವಿಸುತ್ತವೆ. ಆ ಘಟನೆ ಬೆನ್ನತ್ತಿ ಒಬ್ಬ ಪೊಲೀಸ್‌ ಅಧಿಕಾರಿ ತನಿಖೆ ಶುರುಮಾಡುತ್ತಾರೆ. ಆಮೇಲೆ ಏನಾಗಲಿದೆ ಎಂಬುದು ಕಥೆ. ಹಾಗಂತ, ಇದು ಎಲ್ಲೂ ನಡೆದ ನೈಜ ಘಟನೆಯಂತೂ ಅಲ್ಲ. ಇದೊಂದು ಕಾಲ್ಪನಿಕ ಕಥೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕ ದಿನೇಶ್‌.

ಈ ಚಿತ್ರಕ್ಕೆ ಶರಣು ಕಾಳೆ ನಿರ್ಮಾಪಕರು. ಅವರಿಗೆ ಇದು ಮೊದಲ ಸಿನಿಮಾ. ಅವರಿಲ್ಲಿ ಒಂದು ಪಾತ್ರವನ್ನೂ ನಿರ್ವಹಿಸಿದ್ದಾರೆ. ನಿರ್ದೇಶಕರ ಕಥೆಯಲ್ಲಿ ಡಾಬಾ ಹೋಟೆಲ್‌ ಇದೆ. ಆ ಡಾಬಾ ಹೋಟೆಲ್‌ ಮಾಲೀಕರಾಗಿ ನಟಿಸಿದ್ದಾರಂತೆ ನಿರ್ಮಾಪಕರು. ಅಷ್ಟೇ ಅಲ್ಲ, ಅವರು ಒಂದು ಫೈಟನ್ನೂ ಮಾಡಿದ್ದಾರೆ. ಅದು ಯಾಕೆ ಅನ್ನುವುದನ್ನು ಸಿನಿಮಾದಲ್ಲೇ ನೋಡಬೇಕು ಎಂಬುದು ಶರಣು ಕಾಳೆ ಮಾತು. ಅಂದಹಾಗೆ, ಸುಮಾರು 80 ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆ ನಿರ್ಮಾಪಕರಿಗಿದೆ.

ಚಿತ್ರಕ್ಕೆ ರಕ್ಷಿತ್‌ ಅರಸ್‌ ಗೋಪಾಲ್‌ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಮೈಸೂರಿನ ರಂಗಾಯಣದಲ್ಲಿ ತರಬೇತಿ ಪಡೆದಿರುವ ರಕ್ಷಿತ್‌, ಹಂಪಿ ಯುನಿರ್ವಸಿಟಿಯಲ್ಲಿ ಡಿಪ್ಲೊಮೋ ಇನ್‌ ಥಿಯೇಟರ್‌ ಕೋರ್ಸ್‌ ಮಾಡಿದ್ದಾರೆ. ಧಾರಾವಾಹಿಯೊಂದರಲ್ಲಿ ನೆಗೆಟಿವ್‌ ಶೇಡ್‌ನ‌ಲ್ಲಿ ಕಾಣಿಸಿಕೊಂಡಿರುವ ಅವರಿಗೆ “ಚೌಕುರ್‌ ಗೇಟ್‌’ ಮೊದಲ ಚಿತ್ರ. ಇಲ್ಲಿ ಹೆಣ್ಣಿನ ಮೇಲೆ ದೌರ್ಜನ್ಯ ನಡೆಸಿದವರು ಕೊನೆಗೆ ಏನೆಲ್ಲಾ ಸಮಸ್ಯೆ ಎದುರಿಸುತ್ತಾರೆ ಎಂಬ ಕಥೆ ಇದೆ. ನಾನಿಲ್ಲಿ ಫೋಟೋಗ್ರಾಫ‌ರ್‌ ಆಗಿ ನಟಿಸುತ್ತಿದ್ದೇನೆ ಎನ್ನುತ್ತಾರೆ ಅವರು.

ಸಂಗೀತ ನಿರ್ದೇಶಕ ನಿತಿನ್‌ ಬಕಾಲೆ ಚಿತ್ರಕ್ಕೆ ಮೂರು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಹಂಸಲೇಖ ಅವರ ಬಳಿ ಕೆಲಸ ಮಾಡಿದ್ದ ನಿತಿನ್‌ ಬಕಾಲೆಗೆ ಇದು ಒಳ್ಳೆಯ ಅವಕಾಶವಂತೆ. ಇನ್ನು, ಬಸವರಾಜ್‌ ಎಂಬ ಹೊಸ ಪ್ರತಿಭೆಗೂ ಇದು ಮೊದಲ ಚಿತ್ರ. ನಾಲ್ವರ ಜೊತೆಗೆ ಕಾಣಿಸಿಕೊಳ್ಳುವ ಪಾತ್ರ ಅದಾಗಿದ್ದು, ನೋಡುಗರಿಗೆ ಹೊಸ ಅನುಭವ ಕಟ್ಟಿಕೊಡುವ ಚಿತ್ರವಿದು ಎನ್ನುತ್ತಾರೆ ಬಸವರಾಜ್‌.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.