ತ್ರಾಟಕ ಎಂದರೆ ಮೂರನೆಯ ಕಣ್ಣು


Team Udayavani, Aug 31, 2018, 6:00 AM IST

24.jpg

“ನಾನೊಬ್ಬ ರೀಮೇಕ್‌ ನಿರ್ದೇಶಕ ಅಲ್ಲ ಅಂತ ಪ್ರೂವ್‌ ಮಾಡಬೇಕಿತ್ತು. ಆಗ ಸಿಕ್ಕಿದ್ದೇ ಈ ಕಥೆ …’
“ಜಿಗರ್‌ ಥಂಡಾ’ ಚಿತ್ರದ ನಂತರ ಶಿವಗಣೇಶ್‌ಗೆ ರೀಮೇಕ್‌ ನಿರ್ದೇಶಕ ಎಂಬ ಹಣೆಪಟ್ಟಿ ಅಂಟಿಕೊಂಡು ಬಿಟ್ಟಿತಂತೆ. ಅದರಿಂದ ಹೊರಬರಬೇಕು ಎನ್ನುತ್ತಿದ್ದಾಗಲೇ ಸಿಕ್ಕಿದ್ದು ಒಂದು ಸ್ವಮೇಕ್‌ ಕಥೆ. ಆ ಕಥೆ ಇದೀಗ ಚಿತ್ರವಾಗಿ, ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದು, ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದೇ “ತ್ರಾಟಕ’.

ತಮ್ಮ ಹೊಸ  ಚಿತ್ರ “ತ್ರಾಟಕ’ ಬಿಡುಗಡೆಯಾಗುತ್ತಿರುವ ವಿಷಯವನ್ನು ಹೇಳಿಕೊಳ್ಳುವುದಕ್ಕೆ ಶಿವಗಣೇಶ್‌ ಇತ್ತೀಚೆಗೆ ತಮ್ಮ ತಂಡದೊಂದಿಗೆ ಜಮಾಯಿಸಿದ್ದರು. ಅವರ ಜೊತೆ ನಿರ್ಮಾಪಕ ಕಂ ನಾಯಕ ರಾಹುಲ್‌ ಐನಾಪುರ, ಕಲಾವಿದರಾದ ಭವಾನಿ ಪ್ರಕಾಶ್‌, ಅಜಿತ್‌ ಜಯರಾಜ್‌, ಹೃದಯ ಮುಂತಾದವರು ಮಾಧ್ಯಮದವರೆದುರು ಮಾತನಾಡಲು ಕುಳಿತಿದ್ದರು.

ಮೊದಲು ಮಾತನಾಡಿದ್ದು ರಾಹುಲ್‌. ಅವರಿಗೆ ಇದು ನಾಯಕನಾಗಿ, ನಿರ್ಮಾಪಕನಾಗಿ ಮೊದಲ ಚಿತ್ರ. ಅವರು ಮತ್ತು ಶಿವಗಣೇಶ್‌ 10 ವರ್ಷಗಳ ಸ್ನೇಹಿತರಂತೆ. ಸ್ನೇಹದಲ್ಲಿ ಚಿತ್ರ ಮಾಡುವ ಮಾತುಕತೆಯಾಗಿ, ಅದು ಬಿಡುಗಡೆಯ ಹಂತಕ್ಕೆ ಬಂದಿದೆ. “ಶಿವಗಣೇಶ್‌ ಬಹಳ ಚೆನ್ನಾಗಿ ಮಾಡಿದ್ದಾರೆ. ಇದೊಂದು ಬಹಳ ಸಹಜ ಚಿತ್ರ. ಶೋಆಫ್ಗಳೆಲ್ಲಾ ಇರುವುದಿಲ್ಲ. ನಮ್ಮಲ್ಲಿರುವ ಪ್ರತಿಭೆಯನ್ನು ಶಿವಗಣೇಶ್‌ ಬಹಳ ಚೆನ್ನಾಗಿ ತೆಗೆದಿದ್ದಾರೆ’ ಎಂದು ರಾಹುಲ್‌ ಹೇಳಿದರು.

ನಂತರ ಮೈಕು ಕೈಗೆತ್ತಿಕೊಂಡಿದ್ದೇ ಶಿವಗಣೇಶ್‌. “ಜಿಗರ್‌ ಥಂಡಾ’ ನಂತರ ರೀಮೇಕ್‌ ನಿರ್ದೇಶಕ ಎಂಬ ಹಣೆಪಟ್ಟಿ ಬಿದ್ದಾಗ, ತಾನೊಬ್ಬ ಸ್ವಮೇಕ್‌ ನಿರ್ದೇಶಕ ಅಂತ ಪ್ರೂವ್‌ ಮಾಡೋದಕ್ಕೆ ಈ ಚಿತ್ರ ಮಾಡಿದರಂತೆ. “ಒಬ್ಬ ನಿರ್ದೇಶಕ ಎಲ್ಲಾ ಚಿತ್ರಗಳೂ ಒಂದೇ. ಅವನಿಗೆ ಸ್ವಮೇಕ್‌, ರೀಮೇಕ್‌ ಅಂತ ಇರುವುದಿಲ್ಲ. ಎಲ್ಲಾ ಚಿತ್ರಗಳಿಗೂ ಅದೇ ಶ್ರಮ ಇರುತ್ತದೆ. 

ರಾಹುಲ್‌ಗೆ 10 ವರ್ಷಗಳ ಹಿಂದೆಯೇ ಚಿತ್ರ ಮಾಡಬೇಕಿತ್ತು. ಕಾರಣಾಂತರ ಗಳಿಂದ ಆಗಿರಲಿಲ್ಲ. ಈಗ ಅವರ ವಯಸ್ಸಿಗೆ ತಕ್ಕ ಹಾಗೆ ಕಥೆ ಮಾಡಿ ಚಿತ್ರ ಮಾಡುತ್ತಿದ್ದೇವೆ. “ತ್ರಾಟಕ’ ಎಂದರೆ ಮೂರನೆಯ ಕಣ್ಣು ಜಾಗ್ರತವಾಗುವುದು. ಕತ್ತಲೆ ಕೋಣೆಯಲ್ಲಿ ಕ್ಯಾಂಡಲ್‌ ಇಟ್ಟು, ತದೇಕಚಿತ್ತದಿಂದ ನೋಡಿದರೆ, ಅದರಿಂದ ಮೈಂಡ್‌ ಸ್ಕಿಲ್‌ ಜಾಸ್ತಿಯಾಗುತ್ತದೆ. ಹೀರೋ ಇಲ್ಲಿ ಒಬ್ಬ ಪೊಲೀಸ್‌ ಅಧಿಕಾರಿ. ಅವನಿಗೆ ಸಿ.ಪಿ.ಎಸ್‌ ಎಂಬ ಖಾಯಿಲೆ ಇರುತ್ತದೆ. ತ್ರಾಟಕ ಬಳಸಿ ಅದರಿಂದ ಹೇಗೆ ಆಚೆ ಬರುತ್ತಾನೆ ಮತ್ತು ಕೊಲೆ ರಹಸ್ಯವನ್ನು ಹೇಗೆ ಬೇಧಿಸುತ್ತಾನೆ ಎಂಬುದು ಚಿತ್ರದ ಕಥೆ’ ಎಂದು ವಿವರ ಕೊಟ್ಟರು ಶಿವಗಣೇಶ್‌. ನ್ಯೂಯಾರ್ಕ್‌ ನಡೆದ ಕೆಲವು ನೈಜ ಘಟನೆಗಳನ್ನಿಟ್ಟುಕೊಂಡು ರೆಫ‌ರ್‌ ಮಾಡಿ ಚಿತ್ರ ಮಾಡಿದ್ದಾರಂತೆ.

ಹ್ರದಯ ಮತ್ತು ಅಜಿತ್‌ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಇನ್ನು ಭವಾನಿ ಪ್ರಕಾಶ್‌ ಅವರಿಗೆ ಇಲ್ಲಿ ಬರೀ ನಟನೆಯ ಜವಾಬ್ದಾರಿಯಷ್ಟೇ ಅಲ್ಲ, ಕಲಾವಿದರನ್ನು ತಿದ್ದಿತೀಡುವ ಜವಾಬ್ದಾರಿಯನ್ನೂ ನಿರ್ವಹಿಸಿದ್ದಾರೆ. “ನಾನು ಇಲ್ಲಿ ಯಾರಿಗೂ ನಟನೆ ಕಲಿಸಿಲ್ಲ. ನಟನೆ ಎನ್ನುವುದು ಸಹಜವಾಗಿ ಬಂದಿರುತ್ತದೆ. ರಂಗಭೂಮಿಯಲ್ಲಿ 20 ವರ್ಷಗಳ ಅನುಭವ ಇರುವುದರಿಂದ, ನಾನು ತಿದ್ದಿತೀಡಿದ್ದೀನಿ ಅಷ್ಟೇ. ಚೆನ್ನಾಗಿ ರಿಹರ್ಸಲ್‌ ಮಾಡಿಯೇ, ಚಿತ್ರೀಕರಣ ಮಾಡಿದ್ದೇವೆ. ಎಲ್ಲರೂ ಒಳ್ಳೆಯ ಕೆಲಸ ಮಾಡಿದ್ದಾರೆ’ ಎಂದರು ಭವಾನಿ ಪ್ರಕಾಶ್‌.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.