ಥ್ರಿಲ್ಲರ್‌ ಚಿತ್ರಮಂಜರಿ


Team Udayavani, Aug 31, 2018, 6:00 AM IST

26.jpg

ವಿದೇಶಿ ಕನ್ನಡಿಗರಿಗೆ ಈಗ ಕನ್ನಡ ಚಿತ್ರಗಳ ಮೇಲೆ ಪ್ರೀತಿ ಮತ್ತು ಆಸಕ್ತಿ ಹೆಚ್ಚಾಗಿದೆ. ಆ ಕಾರಣಕ್ಕೆ ವಿದೇಶದಲ್ಲಿ ನೆಲೆಸಿರುವ ಕನ್ನಡಿಗರು ಚೆಂದದ ಕನ್ನಡ ಚಿತ್ರವೊಂದರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಅಷ್ಟೇ ಅಲ್ಲ, ಈಗಾಗಲೇ ಒಂದು ಹಂತದ ಚಿತ್ರೀಕರಣ ಮುಗಿಸಿ, ಎರಡನೇ ಹಂತದ ಚಿತ್ರೀಕರಣಕ್ಕೂ ಸಜ್ಜಾಗಿದ್ದಾರೆ. ಆ ಚಿತ್ರದ ಹೆಸರು “ರತ್ನಮಂಜರಿ’. ಅಮೇರಿಕಾ, ಯುರೋಪ್‌ ಹೀಗೆ ಒಂದೊಂದು ಭಾಗದಲ್ಲಿ ಕೆಲಸ ಮಾಡುತ್ತಿರುವ ಸಂದೀಪ್‌ ಕುಮಾರ್‌ ಹಾಗೂ ನಟರಾಜ್‌ ಹಳೇಬೀಡು ಅವರಿಗೆ ಹಾಲಿವುಡ್‌ ಶೈಲಿಯಲ್ಲಿ ಕನ್ನಡ ಚಿತ್ರ ಮಾಡುವ ಆಸೆ ಹುಟ್ಟಿಕೊಂಡಿದ್ದರಿಂದಲೇ ಈ ಚಿತ್ರ ಶುರುವಾಗಿದೆ. ಇತ್ತೀಚೆಗೆ ಚಿತ್ರದ ಮೋಷನ್‌ ಪೋಸ್ಟರ್‌ ಟೀಸರ್‌ ಬಿಡುಗಡೆ ಮಾಡುವ ಮೂಲಕ ಮಾತುಕತೆಗೆ ಕುಳಿತುಕೊಂಡಿತು ಚಿತ್ರತಂಡ.

ನಿರ್ದೇಶಕ ಪ್ರಸಿದ್ಧ್ ಅವರಿಗೆ ಮೊದಲು ಅಮೇರಿಕಾದಲ್ಲಿ ಚಿತ್ರೀಕರಿಸಬೇಕೆಂಬ ಯೋಚನೆ ಇತ್ತಂತೆ. ಆದರೆ, ಅದೇಕೋ ಮನಸ್ಸು ಬದಲಾಯಿಸಿ, ಅವರು ಮಡಿಕೇರಿ ಸುತ್ತಮುತ್ತ ಚಿತ್ರೀಕರಿಸಿದರಂತೆ. ಅವರು ಅದ್ಭುತ ತಾಣಗಳಲ್ಲಿ ಚಿತ್ರೀಕರಿಸಿದ್ದೇ ಕೊನೆ. ಇಂದು ಆ ತಾಣಗಳೆಲ್ಲವೂ ಪ್ರಕೃತಿ ವಿಕೋಪದಿಂದ ನಾಶವಾಗಿವೆಯಂತೆ. “ನಮ್ಮ ಚಿತ್ರದಲ್ಲಿ ಮಡಿಕೇರಿಯ ಸೊಬಗು ಸೆರೆಯಾಗಿದೆ. ಆದರೆ, ಈಗ ಅದೆಲ್ಲವೂ ಖಾಲಿ ಖಾಲಿ’ ಅಂತ ಬೇಸರಿಸಿಕೊಂಡ ಪ್ರಸಿದ್ಧ್, “ಕಳೆದ ಎಂಟು ವರ್ಷಗಳಿಂದಲೂ ಒಳ್ಳೆಯ ಚಿತ್ರ ಮಾಡಬೇಕು ಎಂಬ ಆಸೆ, “ರತ್ನಮಂಜರಿ’ ಮೂಲಕ ಈಡೇರಿದೆ. ಇದು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರ. ಹೊಸಬರೇಕೆ, ಸ್ವಲ್ಪ ಗೊತ್ತಿರುವ ಹೀರೋಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿ ಅಂತ ನಿರ್ಮಾಪಕರು ಹೇಳಿದ್ದು ನಿಜ. ಆದರೆ, ನನಗೆ ರಿಸ್ಕ್ ಆದರೂ ಪರವಾಗಿಲ್ಲ. ಚಾಲೆಂಜ್‌ ಮಾಡಿ ಈ ಚಿತ್ರ ಮಾಡಿದ್ದೇನೆ. ಈವರೆಗೆ ಅಂದುಕೊಂಡಿದ್ದಕ್ಕಿಂತ ಚೆನ್ನಾಗಿ ಬಂದಿದೆ. ಮೂರು ಸಾಂಗ್‌ ಅಂದುಕೊಂಡೆವು. ಈಗ ಏಳು ಸಾಂಗ್‌ ಆಗಿದೆ. ಪುನೀತ್‌ ಸರ್‌ ಹಾಡಿದ್ದಾರೆ. ಅವರು ಹಾಡಿದ ಹಾಡನ್ನು ಅಕ್ಕ ಸಮ್ಮೇಳನ (ಅಮೇರಿಕಾ)ದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ’ ಎಂದು ವಿವರ ಕೊಟ್ಟರು ಪ್ರಸಿದ್ಧ್.

ನಾಯಕ ರಾಜ್‌ ಚರಣ್‌ ಅವರಿಗೆ ಇದು ಮೊದಲ ಅನುಭವ. ಅವರಿಲ್ಲಿ ಸಿದ್ಧಾಂತ್‌ ಎಂಬ ಪಾತ್ರ ಮಾಡುತ್ತಿದ್ದಾರಂತೆ. ನಾಯಕಿ ಅಖೀಲಾ ಪ್ರಕಾಶ್‌ ಇಲ್ಲಿ ಗೌರಿ ಎಂಬ ಫ್ಯಾಷನ್‌ ಡಿಸೈನರ್‌ ಹುಡುಗಿಯಾಗಿ ನಟಿಸಿದ್ದಾರಂತೆ. ಪಲ್ಲವಿರಾಜ್‌ ಕೂಡ ಇಲ್ಲಿ ಕಮಲಿ ಎಂಬ ಪಾತ್ರ ಮಾಡಿದ್ದಾರಂತೆ. ಫೇಸ್‌ಬುಕ್‌ನಲ್ಲಿ ಫೋಟೋ ನೋಡಿ ಅವರನ್ನು ನಿರ್ದೇಶಕರು ಆಯ್ಕೆ ಮಾಡಿದರಂತೆ. ನಿರ್ಮಾಪಕ ಸಂದೀಪ್‌ ಅವರು ಕಥೆ ಕೇಳಿದ ಮೇಲೆ, ನಟರಾಜ್‌ ಜೊತೆ ನಿರ್ಮಾಣಕ್ಕೆ ಮುಂದಾದರಂತೆ. ಥ್ರಿಲ್ಲರ್‌ ಜಾನರ್‌ ಕಥೆ ಆಗಿದ್ದರಿಂದ ಈಗಿನ ಟ್ರೆಂಡ್‌ಗೆ ತಕ್ಕ ಕಥೆ ಇಲ್ಲಿದೆ. ಇದು ವಿದೇಶದಲ್ಲಿ ನಡೆದಂತಹ ಒಂದು ನೈಜ ಘಟನೆ ಇಟ್ಟುಕೊಂಡು ಚಿತ್ರ ಮಾಡುತ್ತಿರುವುದಾಗಿ ಹೇಳಿಕೊಂಡರು ಸಂದೀಪ್‌.

ಛಾಯಾಗ್ರಾಹಕ ಪ್ರೀತಂ ತೆಗ್ಗಿನಮನೆ, ಸಂಗೀತ ನಿರ್ದೇಶಕ ಹರ್ಷವರ್ಧನ್‌ ರಾಜ್‌ ಚಿತ್ರದ ಬಗ್ಗೆ ಮಾತನಾಡಿದರು. ಚಿತ್ರದಲ್ಲಿ ಬಾಲಿವುಡ್‌ ನಟಿ ಶ್ರದ್ಧಾ ಕೂಡ ನಟಿಸಿದ್ದಾರೆ. ಅಂದು ಐನಾಕ್ಸ್‌ ಮುಖ್ಯಸ್ಥ ಶಂಕರ್‌ ಮತ್ತು ಆನಂದ್‌ ಆಡಿಯೋ ಮಾಲೀಕ ಶ್ಯಾಮ್‌ ಛಾಬ್ರಿಯಾ ಮೋಷನ್‌ ಪೋಸ್ಟರ್‌ ಟೀಸರ್‌ ರಿಲೀಸ್‌ ಮಾಡಿ, ಶುಭಹಾರೈಸಿದರು. ಇದೇ ವೇಳೆ ಚಿತ್ರತಂಡ ಮಡಿಕೇರಿ ಸಂತ್ರಸ್ಥರಿಗೆ ಕೊಡಗು ಸಮಾಜ ಪದಾಧಿಕಾರಿಗಳ ಮೂಲಕ ಸಹಾಯಧನ ಮಾಡಿತು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.