ಸ್ಲಮ್‌ ಹುಡುಗನ ಸೆಳೆತ


Team Udayavani, Aug 31, 2018, 6:00 AM IST

27.jpg

ಕೆಲವು ವರ್ಷಗಳ ಹಿಂದೆ ಧನಂಜಯ್‌ ಅಲಿಯಾಸ್‌ ಡಿಜೆ ಒಂದು ಚಿತ್ರ ನಿರ್ಮಾಣ ಮಾಡುತ್ತೀನಿ ಅಂತ ಹಿರಿಯ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಹತ್ತಿರ ಬಂದರಂತೆ. ಸ್ವಂತ ಬಿಝಿನೆಸ್‌ ಇದೆ, ನಂಬಿದವರು ಇದ್ದಾರೆ … ಹೀಗಿರುವಾಗ ಯಾವುದಕ್ಕೂ, ಯಾರಿಗೂ ಸಮಸ್ಯೆ ಆಗಲಿಲ್ಲ ಎಂದರೆ ಮಾತ್ರ ಸಿನಿಮಾ ಮಾಡಿ, ಸುಮ್ಮನೆ ರಿಸ್ಕ್ ತೆಗೆದುಕೊಳ್ಳಬೇಡಿ ಅಂತ ಹೇಳಿ ಕಳುಹಿಸಿದರಂತೆ ರಾಕ್‌ಲೈನ್‌. ವಾಪಸ್ಸು ಹೋದ ಡಿಜೆ, ಕೆಲವು ವರ್ಷಗಳ ನಂತರ ಬಂದು, “ಚಿತ್ರ ನಿರ್ಮಾಣ ಮಾಡೋಕೆ ರೆಡಿ, ಈಗ ಯಾವ ಸಮಸ್ಯೆಯೂ ಇಲ್ಲ’ ಅಂದರಂತೆ. ಹಾಗೆ ಶುರುವಾದ ಚಿತ್ರವೇ “ಕರ್ಷಣಂ’.

“ಕರ್ಷಣಂ’ ಇದೀಗ ಮುಗಿದಿದೆ. ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಯೂ ಆಗಲಿದೆ. ಈ ಚಿತ್ರವನ್ನು ನಿರ್ಮಿಸಿರುವುದಷ್ಟೇ ಅಲ್ಲ, ಚಿತ್ರದಲ್ಲಿ ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ ಡಿಜೆ. ಈ ಚಿತ್ರವನ್ನು ಶರವಣ ಎನ್ನುವವರು ನಿರ್ದೇಶಿಸಿದ್ದಾರೆ. ಇತ್ತೀಚೆಗೆ ಚಿತ್ರದ ಹಾಡುಗಳು ಬಿಡುಗಡೆಯಾದವು. ಅಶ್ವಿ‌ನಿ ಆಡಿಯೋ ಹೊರತಂದಿರುವ ಹಾಡುಗಳನ್ನು ಬಿಡುಗಡೆ ಮಾಡುವುದಕ್ಕೆ ರಾಕ್‌ಲೈನ್‌ ವೆಂಕಟೇಶ್‌ ಮತ್ತು ಹಿರಿಯ ನಟ ಜಿ.ಕೆ. ಶ್ರೀನಿವಾಸಮೂರ್ತಿ ಬಂದಿದ್ದರು.

ಧನಂಜಯ್‌ ಸುಮಾರು 11 ವರ್ಷಗಳ ಹಿಂದೆ ಚಿತ್ರರಂಗಕ್ಕೆ ಬಂದವರು. ಆ ಸಂದರ್ಭದಲ್ಲಿ ಉಪೇಂದ್ರ ಅಭಿನಯದ “ಬುದ್ಧಿವಂತ’, ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಮೂರು ಚಿತ್ರಗಳು, “ಮುಂಜಾವು’, “ಪರಿಣಿತ’ ಮತ್ತು “ಚಿತ್ರಲೇಖ’ ಎಂಬ ಧಾರಾವಾಹಿಗಳಲ್ಲಿ ನಟಿಸಿದ್ದರಂತೆ. ಆ ನಂತರ ಬಿಝಿನೆಸ್‌ ವಿಸ್ತರಿಸುವುದಕ್ಕೆ ಮುಂದಾದ ಅವರು, ಇದೀಗ “ಕರ್ಷಣಂ’ ಚಿತ್ರದ ಮೂಲಕ ಬಂದಿದ್ದಾರೆ. “ಕರ್ಷಣಂ’ ಎನ್ನುವುದು ಸಂಸ್ಕೃತ ಮೂಲದ ಹಳೆಗನ್ನಡ ಪದ ಎನ್ನುವ ಅವರು, “ಹಾಗೆಂದರೆ ಸೆಳೆತ ಎಂದರ್ಥ. ಆಕರ್ಷಣೆ, ವಿಕರ್ಷಣೆ ಗೊತ್ತು. ಆದರೆ, ಇದೊಂದು ನ್ಯೂಟ್ರಲ್‌ ಆದಂತಹ ಪದ.  ಹಾಗೂ ಆಗಬಹುದು, ಹೀಗೂ ಆಗಬಹುದು. ಸ್ಲಮ್‌ನಲ್ಲಿರುವ ಹುಡುಗನ ಸುತ್ತ ಈ ಕಥೆ ಸುತ್ತುತ್ತದೆ. ಮೂಲತಃ ಅವನು ಸ್ಲಮ್‌ನವನಲ್ಲ. ಆದರೆ, ಏಕೆ ಅಲ್ಲಿರುತ್ತಾನೆ ಎನ್ನುವುದೇ ಚಿತ್ರದ ಕಥೆ’ ಎಂದು ಒನ್‌ಲೈನ್‌ ಹೇಳಿದರು ಡಿಜೆ.

ನಿರ್ದೇಶಕ ಶರವಣ ಅವರಿಗೆ ಇದು ಮೊದಲ ಚಿತ್ರ. ಇದಕ್ಕೂ ಮುನ್ನ ಹಲವು ವರ್ಷಗಳ ಕಾಲ ಕಿರುತೆರೆಯಲ್ಲಿದ್ದ ಅವರು, ಶ್ರೀನಿವಾಸಮೂರ್ತಿ ಅವರ ಗರಡಿಯಿಂದ ಬಂದವರು. “ಇವತ್ತು ನಾನು ಏನಾದರೂ ಕಲಿತಿದ್ದೀನಿ ಎಂದರೆ, ಅದು ಮೂರ್ತಿಗಳಿಂದ. “ಅಣ್ಣ ಬಸವಣ್ಣ’ ಧಾರಾವಾಹಿಯಿಂದ ನನ್ನ ಕೆರಿಯರ್‌ ಶುರುವಾಯಿತು. ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರ. ಗುರಿ ಸಾಧನೆಗೆ ಬೇರೆಯವರನ್ನ ತುಳಿಯಬಾರದು ಎಂಬ ಸಂದೇಶವಿರುವ ಚಿತ್ರ ಇದು’ ಎಂದು ಶರವಣ ಹೇಳಿಕೊಂಡರು.

ಹಿರಿಯ ನಟ ಶ್ರೀನಿವಾಸಮೂರ್ತಿ ಅವರು ಶರವಣ ಅವರೊಂದಿಗಿನ ತಮ್ಮ ಒಡನಾಟದ ಬಗ್ಗೆ ಹೇಳಿದರೆ, ರಾಕ್‌ಲೈನ್‌ ವೆಂಕಟೇಶ್‌ ಅವರು ಧನಂಜಯ್‌ ಜೊತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡರು. ಇಬ್ಬರೂ ಚಿತ್ರತಂಡಕ್ಕೆ ಶುಭ ಹಾರೈಸಿ ತಮ್ಮ ಮಾತುಗಳನ್ನು ಮುಗಿಸಿದರು. ವೇದಿಕೆಯ ಮೇಲೆ ನಟ ವಿಜಯ್‌ ಚೆಂಡೂರ್‌, ಸಂಗೀತ ನಿರ್ದೇಶಕ ಹೇಮಂತ್‌ ಕುಮಾರ್‌, ಛಾಯಾಗ್ರಾಹಕ ಮೋಹನ್‌ ಮುಗುದೇಶ್ವರನ್‌ ಮುಂತಾದವರು ಇದ್ದರು.

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.