ಹ್ಯಾಟ್ರಿಕ್‌ ರಾಜು


Team Udayavani, Aug 31, 2018, 6:00 AM IST

30.jpg

ಕೆಲವು ಸಿನಿಮಾಗಳು ಹಿಟ್‌ ಆದರೆ ಅಥವಾ ಪಾತ್ರಗಳು ಕ್ಲಿಕ್‌ ಆದರೆ, ನಂತರ ಆ ಚಿತ್ರದಲ್ಲಿ ನಟಿಸಿದ ಕಲಾವಿದರ ಹೆಸರಿನ ಮುಂದೆ ಚಿತ್ರದ ಅಥವಾ ಪಾತ್ರದ ಹೆಸರು ಅಂಟಿಕೊಂಡ ಬಿಡುತ್ತದೆ. ಜನ ಅದೇ ಹೆಸರಿನಲ್ಲಿ ಗುರುತಿಸುತ್ತಾರೆ ಕೂಡಾ. ಸಿನಿಮಾ, ಪಾತ್ರದ ಹೆಸರಿನಿಂದ ಗುರುತಿಸಿಕೊಳ್ಳುವ ಅನೇಕ ನಟ-ನಟಿಯರು ಕನ್ನಡ ಚಿತ್ರರಂಗದಲ್ಲಿ ಸಿಗುತ್ತಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ ಗುರುನಂದನ್‌. “ಫ‌ಸ್ಟ್‌ ರ್‍ಯಾಂಕ್‌ ರಾಜು’ ಚಿತ್ರ ಹಿಟ್‌ ಆಗುತ್ತಿದ್ದಂತೆ ಗುರುನಂದನ್‌ ಆ ಪಾತ್ರದ ಹೆಸರಿಗೆ ಬ್ರಾಂಡ್‌ ಆಗಿಬಿಟ್ಟಂತಿದೆ. ಈಗಾಗಲೇ ಅವರು ನಾಯಕರಾಗಿರುವ “ರಾಜು ಕನ್ನಡ ಮೀಡಿಯಂ’ ಬಂದಿರುವ ವಿಚಾರ ನಿಮಗೆ ಗೊತ್ತಿದೆ. ಈಗ “ರಾಜು’ ಸೀರೀಸ್‌ಗೆ ಹೊಸ ಸೇರ್ಪಡೆ “ರಾಜು ಜೇಮ್ಸ್‌ ಬಾಂಡ್‌’. ಇದು ಗುರುನಂದನ್‌ ನಾಯಕರಾಗಿರುವ ಹೊಸ ಸಿನಿಮಾ. ಇತ್ತೀಚೆಗೆ ಈ ಚಿತ್ರಕ್ಕೆ ಮುಹೂರ್ತ ನಡೆಯಿತು. ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ ಕ್ಲಾéಪ್‌ ಮಾಡಿ ಶುಭಕೋರಿದರು. ಸಚಿವ ಜಿ.ಟಿ.ದೇವೇಗೌಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ  ಚಿನ್ನೇಗೌಡ ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಹೊಸ ತಂಡವನ್ನು ಹರಸಿದರು. 

“ರಾಜು ಜೇಮ್ಸ್‌ ಬಾಂಡ್‌’ ಚಿತ್ರವನ್ನು ದೀಪಕ್‌ ಮಧುವನಹಳ್ಳಿ ನಿರ್ದೇಶಿಸುತ್ತಿದ್ದಾರೆ. “ಭಾಗ್ಯರಾಜ್‌’, “ಕಳ್ಬೆಟ್ಟದ ದರೋಡೆಕೋರರು’ ಚಿತ್ರ ಮಾಡಿರುವ ದೀಪಕ್‌ಗೆ ಇದು ಮೂರನೇ ಸಿನಿಮಾ. “ರಾಜು ಜೇಮ್ಸ್‌ ಬಾಂಡ್‌’ ಒಂದು ಕಾಮಿಡಿ ಡ್ರಾಮಾ ಚಿತ್ರವಂತೆ. ಈ ಚಿತ್ರದಲ್ಲಿ ನಾಯಕ ರಾಜ್‌ಕುಮಾರ್‌ ಅವರ ಅಪ್ಪಟ ಅಭಿಮಾನಿ. “ಇದೊಂದು ಕಾಮಿಡಿ ಡ್ರಾಮಾ ಸಿನಿಮಾ. ಜೊತೆಗೆ ಥ್ರಿಲ್ಲರ್‌ ಅಂಶಗಳು ಕೂಡಾ ಇರಲಿವೆ. ಚಿತ್ರದ ನಾಯಕ ರಾಜಕುಮಾರ್‌ ಅವರ ಅಭಿಮಾನಿ. ಅವರ ಬಾಂಡ್‌ ಸಿನಿಮಾಗಳನ್ನು ನೋಡಿಕೊಂಡು ಬೆಳೆಯುವ ಜೊತೆಗೆ ಅದರಿಂದ ಸ್ಫೂರ್ತಿಗೊಳ್ಳುತ್ತಾನೆ. ಈ ನಡುವೆ ತನ್ನ ಸುತ್ತಲ ಸಮಸ್ಯೆಯನ್ನು ಬಾಂಡ್‌ ಶೈಲಿಯ ಜೊತೆಗೆ ರಾಜು ಶೈಲಿಯಲ್ಲಿ ಹೇಗೆ ಬಗೆಹರಿಸಿಕೊಳ್ಳುತ್ತಾನೆಂಬ ಅಂಶದೊಂದಿಗೆ ನಡೆಯುತ್ತದೆ’ ಎಂದು ವಿವರ ಕೊಟ್ಟರು ದೀಪಕ್‌. ಇದು ನೈಜ ಘಟನೆಯಾಧಾರಿತ ಚಿತ್ರ ಎಂಬ ಸುದ್ದಿಯೂ ಓಡಾಡುತ್ತಿತ್ತಂತೆ. ಈ ಬಗ್ಗೆ ಮಾತನಾಡುವ ದೀಪಕ್‌, ಇದು ಯಾವುದೋ ಬೇರೆ ರಾಜ್ಯದಲ್ಲಿ ನಡೆಯುವ ಅಥವಾ ನೈಜ ಘಟನೆಯಾಧರಿತ ಚಿತ್ರವಲ್ಲ. ಒಂದು ಸಣ್ಣ ಪಟ್ಟಣದಲ್ಲಿ ನಡೆಯುವ ಕಥೆ ಎಂದರು. 

ಚಿತ್ರವನ್ನು ಮಂಜುನಾಥ್‌ ವಿಶ್ವಕರ್ಮ ಹಾಗೂ ಕಿರಣ್‌ ವರ್ತೂರು ನಿರ್ಮಿಸುತ್ತಿದ್ದಾರೆ. ಕಿರಣ್‌ ಅವರಿಗೆ, ಗುರುನಂದನ್‌ ಫೋನ್‌ ಮಾಡಿ ಈ ತರಹ ಒಂದು ಕಥೆ ಇದೆ, ನೋಡಿ ಎಂದರಂತೆ. ತಕ್ಷಣ ಕಿರಣ್‌, ಸ್ನೇಹಿತ ಮಂಜುನಾಥ್‌ಗೆ ಹೇಳಿ ಜೊತೆಯಾಗಿ ಸಿನಿಮಾ ಮಾಡಲು ನಿರ್ಧರಿಸಿದರಂತೆ. 

ನಾಯಕ ಗುರುನಂದನ್‌ ಅವರಿಗೆ ತುಂಬಾ ಇಷ್ಟವಾದ ಕಥೆಯಂತೆ. “ನಾನಿಲ್ಲಿ ಅಣ್ಣಾವ್ರ ಚಿತ್ರ ನೋಡಿ ಬೆಳೆದುಕೊಂಡು ಬರುವ ಪಾತ್ರ. ಅವರ ಪಾತ್ರದ ಪ್ರೇರಣೆಯೊಂದಿಗೆ ಮುಂದೆ ಹಲವು ಸಾಹಸಗಳನ್ನು ಮಾಡುತ್ತೇನೆ. ಒಳ್ಳೆಯ ತಂಡ ಸಿಕ್ಕಿದೆ. ಸಂಡೂರು ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣವಾಗಲಿದೆ’ ಎಂದಷ್ಟೇ ಮಾತನಾಡಿದರು. ಚಿತ್ರದಲ್ಲಿ ಮೃದುಲಾ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ಮನೋಹರ್‌ ಜೋಷಿ ಛಾಯಾಗ್ರಹಣ, ಅನೂಪ್‌ ಸೀಳೀನ್‌ ಸಂಗೀತವಿದೆ. ನಿರ್ಮಾಪಕರಿಗೆ ಒಳ್ಳೆಯ ಸಿನಿಮಾ ಮಾಡಿ ಕೊಡುತ್ತೇವೆ ಎಂದು ಭರವಸೆ ನೀಡಿದರು ಅನೂಪ್‌.

ರವಿ ರೈ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.