ಟೆರರಿಸ್ಟ್‌ಗೆ ರಕ್ಷಿತ್‌-ಪುಷ್ಕರ್‌ ಬೆಂಬಲ


Team Udayavani, Sep 7, 2018, 6:00 AM IST

21.jpg

ರಾಗಿಣಿ ಅಭಿನಯದ “ದಿ ಟೆರರಿಸ್ಟ್‌’ ಚಿತ್ರ ಈಗ ಮತ್ತೆ ಸುದ್ದಿಯಾಗಿದೆ. ಅಂಬರೀಶ್‌ ಅವರು ಫ‌ಸ್ಟ್‌ ಲುಕ್‌ ಬಿಡುಗಡೆ ಮಾಡಿದ್ದರು. ಆ ಮೂಲಕ ಒಂದಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಈ ಚಿತ್ರ, ಈಗ ರಕ್ಷಿತ್‌ ಶೆಟ್ಟಿ ಮೂಲಕ ಟ್ರೇಲರ್‌ ಬಿಡುಗಡೆಯಾಗಿ ಇನ್ನೊಂದು ಸುದ್ದಿಯಾಗಿದೆ. ಸದಾ ಹೊಸತನದ ಚಿತ್ರಗಳಿಗೆ ಪ್ರೋತ್ಸಾಹ ನೀಡುತ್ತ ಬಂದಿರುವ ರಕ್ಷಿತ್‌ ಶೆಟ್ಟಿ ಮತ್ತು ಪುಷ್ಕರ್‌ ಮಲ್ಲಿಕಾರ್ಜುನ್‌ ಅಂದು “ದಿ ಟೆರರಿಸ್ಟ್‌’ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಶುಭಕೋರಿದರು. 

ನಿರ್ದೇಶಕ ಪಿ.ಸಿ. ಶೇಖರ್‌ ಹೇಳುವಂತೆ, “ನನ್ನ ಸಿನಿಮಾ ಕೆರಿಯರ್‌ನಲ್ಲೇ “ದಿ ಟೆರರಿಸ್ಟ್‌’ ತುಂಬ ಕಷ್ಟದ ಚಿತ್ರವಾಗಿದೆ. ಭಯೋತ್ಪಾದನೆಗೆ ಸಂಬಂಧಿಸಿದ ಚಿತ್ರ ಮಾಡುವುದು ಸುಲಭವಲ್ಲ. ಅದಕ್ಕೆ ತಕ್ಕ ಕಥೆ, ಚಿತ್ರಕಥೆ, ಪಾತ್ರಗಳು, ಆಯಾ ಜಾಗಗಳು ಮುಖ್ಯ. ಇಲ್ಲಿ ಮುಖ್ಯವಾಗಿ, ಲೊಕೇಷನ್‌ ಹೈಲೆಟ್‌. ಬೆಂಗಳೂರಿನ ಗಲ್ಲಿಗಲ್ಲಿಯಲ್ಲೂ ಕ್ಯಾಮೆರಾಗಳನ್ನು ಇಟ್ಟು ಚಿತ್ರಿಸಲಾಗಿದೆ. ಇದೊಂದು ಅಂತಾರಾಷ್ಟ್ರೀಯ ಮಟ್ಟದ ವಿಷಯ ಹೊಂದಿರುವುದರಿಂದ ಚಿತ್ರರಂಗದಲ್ಲೊಂದು ಹೊಸತನದ ಚಿತ್ರ ಎಂದು ಹೇಳಬಹುದು. ಅತೀ ಸೂಕ್ಷ್ಮ ವಿಚಾರಗಳು ಇಲ್ಲಿವೆ. ಯಾವುದೇ ಒಂದು ಧರ್ಮ, ಜಾತಿ ಕುರಿತ ಚಿತ್ರವಲ್ಲ. ಇಡೀ ಸಿನಿಮಾ ಸಮಾಜದ ಕಳಕಳಿ ಹೊಂದಿದೆ’ ಎಂಬುದು ನಿರ್ದೇಶಕರ ಹೇಳಿಕೆ. ಟ್ರೇಲರ್‌ ಬಿಡುಗಡೆ ಮಾಡಿದ ರಕ್ಷಿತ್‌ ಶೆಟ್ಟಿ ಅವರಿಗೆ ಪಿ.ಸಿ.ಶೇಖರ್‌ ನಿರ್ದೇಶಿಸಿದ್ದ “ರಾಗ’ ತುಂಬಾನೇ ಇಷ್ಟವಾದ ಚಿತ್ರವಂತೆ. “ಅವರ ಪ್ರತಿ ಚಿತ್ರವೂ ಹೊಸ ಜಾನರ್‌ನಲ್ಲಿವೆ. ಈ ಚಿತ್ರ ಕೂಡ ಹೊಸ ವಿಷಯ ಹೊಂದಿದೆ. ಹೊಸದೇನನ್ನೋ ಕೊಡಲು ಅವರು ಪ್ರಯತ್ನಿಸಿದ್ದಾರೆ. ಇಂತಹ ಪ್ರತಿಭಾವಂತ ತಂಡಕ್ಕೆ ಎಲ್ಲರ
ಪ್ರೋತ್ಸಾಹ ಅಗತ್ಯ. ನಿರ್ದೇಶಕರು ಗ್ಯಾಪ್‌ ಕೊಡದೆ, ಒಂದೊಂದೇ ಚಿತ್ರ ಮಾಡುವ ಮೂಲಕ ಕನ್ನಡಕ್ಕೆ ಹೊಸ ಬಗೆಯ ಚಿತ್ರ ಕೊಡಲಿ’ ಎಂದರು ರಕ್ಷಿತ್‌ ಶೆಟ್ಟಿ. 

ಪುಷ್ಕರ್‌ ಮಲ್ಲಿಕಾರ್ಜುನ್‌ ಚಿತ್ರದ ಟ್ರೇಲರ್‌ ನೋಡಿ, ಬಾಲಿವುಡ್‌ ಸಿನಿಮಾದ ಛಾಯೆ ಕಾಣುತ್ತೆ ಅಂದರು. ನಾಯಕಿ ರಾಗಿಣಿಗೆ ಇದೊಂದು ಹೊಸ ಬಗೆಯ ಚಿತ್ರವಂತೆ. ಒನ್‌ಲೈನ್‌ ಸ್ಟೋರಿ ಕೇಳಿಯೇ ರಾಗಿಣಿ ಚಿತ್ರ ಒಪ್ಪಿದರಂತೆ. “ನನ್ನ ಕೆರಿಯರ್‌ನಲ್ಲೂ “ದಿ ಟೆರರಿಸ್ಟ್‌’ ಹೊಸ ಅನುಭವದ ಚಿತ್ರವಾಗಲಿದೆ. ಟೆರರಿಸ್ಟ್‌ ಎಂಬ ಹೆಸರಿದ್ದರೂ ಇದೊಂದು ಪವರ್‌ ಚಿತ್ರ’ ಎಂಬುದು ರಾಗಿಣಿ ಮಾತು. ಅನಿವಾಸಿ ಭಾರತೀಯರಾದ
ನಿರ್ಮಾಪಕ ಅಲಂಕಾರ್‌ ಸಂತಾನಂ ಈ ಚಿತ್ರವನ್ನು ನಿರ್ಮಿಸಿದ್ದು, ವಿದೇಶದಲ್ಲೂ ಚಿತ್ರ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿರುವುದಾಗಿ ಹೇಳಿಕೊಂಡರು. ಸಂಗೀತ ನಿರ್ದೇಶಕ ಪ್ರದೀಪ್‌ ವರ್ಮ, ಚಿತ್ರಕ್ಕೆ ಸಂಗೀತ ನೀಡಲು ದೊರೆತ ಅವಕಾಶ ಕುರಿತು ಹೇಳಿಕೊಂಡರು. ಚಿತ್ರಕ್ಕೆ
ಮುರಳಿ ಕೃಷ್ಣ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.