ಕನ್ನಡದಲ್ಲಿ  ಧೂಮ್‌ ಮಚಾಲೆ


Team Udayavani, Sep 7, 2018, 6:00 AM IST

26.jpg

ಸಂಪೂರ್ಣ ಹೊಸಬರ ಚಿತ್ರ. ಆದರೆ, ಬಜೆಟ್‌ 17 ರಿಂದ 20 ಕೋಟಿ!
-ಹಾಗಂತ ನಾವು ಹೇಳುತ್ತಿಲ್ಲ. ಚಿತ್ರತಂಡವೊಂದು ಹೇಳಿಕೊಂಡಿದೆ. ಸಾಮಾನ್ಯವಾಗಿ ಹೊಸಬರ ಚಿತ್ರವೆಂದರೆ ಎರಡರಿಂದ 3 ಕೋಟಿಯೊಳಗಿನ ಬಜಟ್‌ನಲ್ಲಿ ಸಿನಿಮಾ ಮಾಡಿರುತ್ತಾರೆ. ಆದರೆ, ಇಲ್ಲೊಂದು ಚಿತ್ರತಂಡ ಬರೋಬ್ಬರಿ 20 ಕೋಟಿ ಹಾಕಿ, ಹೊಸಬರ ಸಿನಿಮಾ ಮಾಡಲು ಮುಂದಾಗಿದೆ. ಅದು “ಧೂಮ್‌’. ಹಿಂದಿಯಲ್ಲಿ “ಧೂಮ್‌’ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿರೋದು ನಿಮಗೆ ಗೊತ್ತೇ ಇದೆ. ಈಗ ಅದೇ ಟೈಟಲ್‌ನಡಿ ಕನ್ನಡದಲ್ಲಿ ಸಿನಿಮಾ ಮಾಡಲು ಹೊಸಬರ ತಂಡ ಮುಂದಾಗಿದೆ. ರಾಜೇಶ್‌ ವರ್ಮಾ ಈ ಸಿನಿಮಾದ ನಿರ್ದೇಶಕರು. ಈ ಹಿಂದೆ ಓಂಪ್ರಕಾಶ್‌ ರಾವ್‌ ಸೇರಿದಂತೆ ಅನೇಕರು ಜೊತೆ ಕೆಲಸ ಮಾಡಿರುವ ರಾಜೇಶ್‌ ವರ್ಮಾ “ಧೂಮ್‌’ ಮಾಡಲು ಮುಂದಾಗಿದ್ದಾರೆ. ಚಿತ್ರದಲ್ಲಿ ನಾಲ್ವರು ಹೊಸ ಹುಡುಗರು ನಟಿಸುತ್ತಿದ್ದಾರೆ. ಆ ನಾಲ್ವರು ಯಾರೆಂಬುದನ್ನು ನಿರ್ದೇಶಕರು ಸಸ್ಪೆನ್ಸ್‌ ಆಗಿಟ್ಟಿದ್ದು, ಸದ್ಯ ಅವರು ತರಬೇತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಅದ್ಧೂರಿಯಾಗಿ ಲಾಂಚ್‌ ಮಾಡಲಾಗುವುದು ಎಂಬುದು ಅವರ ಮಾತು. ಇತ್ತೀಚೆಗೆ ಸ್ಟಾಕ್‌ಶಾಟ್‌ಗಳನ್ನೊಳಗೊಂಡ ಟೀಸರ್‌ ತೋರಿಸಿ, ಸಿನಿಮಾ ಇದೇ ರೀತಿ ಮೂಡಿಬರುತ್ತದೆ ಎಂದರು ರಾಜೇಶ್‌. ಎಲ್ಲಾ ಓಕೆ, ಹೊಸಬರಿಗೆ ಅಷ್ಟೊಂದು ಬಜೆಟ್‌ ಯಾಕೆ ಎಂದರೆ, ಚಿತ್ರದಲ್ಲಿ ಟರ್ಕಿ ಸೇರಿದಂತೆ ಅನೇಕ ದೇಶಗಳಿಗೆ ಕಥೆ ಸಾಗುತ್ತದೆಯಂತೆ. ಜೊತೆಗೆ ಬೈಕ್‌ ರೇಸ್‌ ಕೂಡಾ ಇರುವುದರಿಂದ ಬಜೆಟ್‌ ಬೇಕಾಗುತ್ತದೆ ಎಂಬುದು ಅವರ ಮಾತು. ಬೈಕ್‌ ರೇಸ್‌ ಜೊತೆಗೆ ಅಂಧ ಹಾಗೂ ಕ್ಯಾನ್ಸರ್‌ಗೆ ತುತ್ತಾದ ಮಕ್ಕಳಿಗೆ ಸಹಾಯ ಮಾಡಿ ಎಂಬ ಸಂದೇಶ ಕೂಡಾ ಚಿತ್ರದಲ್ಲಿದೆಯಂತೆ.

ಚಿತ್ರವನ್ನು ದೆಹಲಿ ಮೂಲದ ಮುನ್ನ ಎನ್ನುವವರು ನಿರ್ಮಿಸುತ್ತಿದ್ದಾರೆ. ಕಥೆ ಇಷ್ಟವಾಗುವ ಜೊತೆಗೆ ಯುವ ತಂಡದ ಮೇಲೆ ಭರವಸೆ ಇಟ್ಟು ದೊಡ್ಡ ಬಜೆಟ್‌ನಲ್ಲಿ ನಿರ್ಮಿ­ಸಲು ಮುಂದಾಗಿದ್ದಾಗಿ ಹೇಳಿಕೊಂಡರು. ಉಳಿದಂತೆ ಚಿತ್ರದಲ್ಲಿ ಪಾಟಲಿ ಎಂಬ ನವನಟಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಚಿತ್ರಕ್ಕೆ ಗುರುಕಿರಣ್‌ ಸಂಗೀತ ನೀಡುತ್ತಿದ್ದಾರೆ. ಹೊಸಬರ ಜೊತೆ ಕೆಲಸ ಮಾಡುವುದರಿಂದ ಹೊಸತನ ನೀಡಲು ಸಾಧ್ಯವಾಗುತ್ತದೆ ಎನ್ನುವುದು ಗುರುಕಿರಣ್‌ ಮಾತು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.