ಏಕ್‌ ಖ್ವಾಬ್‌ ನನಸಾಯಿತು


Team Udayavani, Sep 14, 2018, 6:00 AM IST

face-face-kannada-movie.jpg

ನಾನು ಮಾತು ಕಡಿಮೆ. ಕೆಲಸ ಜಾಸ್ತಿ ಮಾಡ್ತೀನಿ …ಮೈಕು ಕೈಗೆ ಸಿಗುತ್ತಿದ್ದಂತೆಯೇ, ಏನು ಮಾತನಾಡಬೇಕೆಂದು ಯೋಚಿಸಿದ ಸಂದೀಪ್‌, ಕೊನೆಗೆ ಮೇಲೆ ಹೇಳಿದ ಸಾಲು ಹೇಳಿದರು. ಸಭಾಂಗಣದಲ್ಲಿದವರೆಲ್ಲಾ ಚಪ್ಪಾಳೆ ಹೊಡೆದರು. ಆ ನಂತರ ಮತ್ತೆ ಮೌನ. ಮಾತುಗಳಿಗೆ ಮತ್ತೆ ತಡಕಾಡಿದ ಸಂದೀಪ್‌, “ನಾನು ಉಪ್ಪಿ ಸಾರ್‌ ಜೊತೆಗೆ ಐದು ವರ್ಷ ಕೆಲಸ ಮಾಡಿದ್ದೆ. ಕಥೆ ಮಾಡಿಕೊಂಡು ನಿರ್ಮಾ­ಪಕರನ್ನು ಹುಡುಕುತ್ತಿದ್ದೆ. ಆದರೆ, ನಾನು ಚಿತ್ರ ಮಾಡಬಹುದು ಎಂದು ಯಾರೂ ನಂಬಲಿಲ್ಲ. ಕೊನೆಗೆ ನಾವೇ ಮಾಡೋಣ ಅಂತ ಒಂದು ಲೋ ಬಜೆಟ್‌ ಚಿತ್ರ ಪ್ಲಾನ್‌ ಮಾಡಿದೆವು. ಕೊನೆಗೆ ಅದು ಡಬ್ಬಲ್‌ ಆಯಿತು’ ಎಂದರು.

ಕಳೆದ ವರ್ಷ “ಫೇಸ್‌ 2 ಫೇಸ್‌’ ಎಂಬ ಚಿತ್ರ ಶುರು ಮಾಡಿದ್ದ ಸಂದೀಪ್‌ ಜನಾರ್ಧನ್‌, ಇದೀಗ ಆ ಚಿತ್ರವನ್ನು ಮುಗಿಸಿದ್ದಾರೆ. ಮುಂದಿನ ತಿಂಗಳು ಚಿತ್ರವನ್ನು ಬಿಡುಗಡೆ ಮಾಡಬೇಕೆಂದು ಅವರು ತೀರ್ಮಾನಿಸಿದ್ದು, ಅದಕ್ಕೂ ಮುನ್ನ ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. “ಏಕ್‌ ಖ್ವಾಬ್‌’ ಎಂಬ ಮುಂಬೈನ ತಂಡವೊಂದು ಹಾಡುಗಳನ್ನು ಸಂಯೋಜಿಸಿದ್ದು, ಕಳೆದ ವಾರ ಕನ್ನಡ ಚಲನಚಿತ್ರ ಕಲಾವಿದರ ಸಂಘದ ಕಟ್ಟಡದಲ್ಲಿ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಹಾಡುಗಳನ್ನು ಬಿಡುಗಡೆ ಮಾಡಿದ್ದು ಹಿರಿಯ ನಟ ಶಿವರಾಮಣ್ಣ.

“ಫೇಸ್‌ 2 ಫೇಸ್‌’ ಚಿತ್ರದಲ್ಲಿ ರೋಹಿತ್‌ ಭಾನುಪ್ರಕಾಶ್‌ ನಾಯಕನಾಗಿ ಕಾಣಿಸಿಕೊಂಡರೆ, ಪೂರ್ವಿ ಜೋಷಿ ಮತ್ತು ದಿವ್ಯ ಉರುಡುಗ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ರವಿ ಭಟ್‌, ವೀಣಾ ಸುಂದರ್‌, ಸುಚೀಂದ್ರ ಪ್ರಸಾದ್‌, ಯಮುನಾ ಶ್ರೀನಿಧಿ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇಷ್ಟಕ್ಕೂ ಈ ಚಿತ್ರದ ಕಥೆ ಏನು ಅಥವಾ ಎಳೆ ಏನು ಎಂದು ನಿರ್ದೇಶಕರು ಹೇಳಲಿಲ್ಲ. ತುಂಬಾ ನರ್ವಸ್‌ ಆಗಿರುವುದಾಗಿಯೂ, ಸಿನಿಮಾದಲ್ಲೇ ನೋಡಬೇಕೆಂದು ಅವರು ಹೇಳಿದರು.

ಕೊನೆಗೆ ಚಿತ್ರದ ತಿರುಳೇನಿರಬಹುದು ಎಂದು ಹೇಳಿದ್ದು ಸಂಕಲನಕಾರ ಶ್ರೀ. “ಚಿತ್ರದ ಟೈಟಲ್‌ ನೋಡಿದರೆ ಇದೇನು ಮುಖಾ­ಮುಖೀನಾ? ಮುಖ­ವಾಡನಾ? ಅಥವಾ ಸ್ಪ್ಲಿಟ್‌ ಪರ್ಸ­ನಾಲಿಟಿಯಾ? ಎಂದನಿಸ­ಬಹುದು. ಅದೇ ಚಿತ್ರದ ಸಸ್ಪೆನ್ಸ್‌. ಸಂದೀಪ್‌ ಮಾತು ಕಡಿಮೆ­ಯಾದರೂ, ಅವರಿಗೆ ಕ್ಲಾರಿಟಿ ಇದೆ. ತಮಗೇನು ಬೇಕು ಎನ್ನುವುದು ಗೊತ್ತಿದೆ. ಅವರೊಬ್ಬ ಹಠವಾದಿ. ತಮಗೆ ಬೇಕಾಗಿದ್ದು ಬರುವವರೆಗೂ ಬಿಡುವುದಿಲ್ಲ’ ಎಂದು ಹೇಳಿದರು.

ನಾಯಕ ರೋಹಿತ್‌, ಈ ಚಿತ್ರದಲ್ಲಿ ಉದಯೋನ್ಮುಖ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ನಿಜಜೀವನದ ಪಾತ್ರವನ್ನೇ ಈ ಚಿತ್ರದಲ್ಲೂ ನಿರ್ವಹಿಸುತ್ತಿರುವುದಾಗಿ ಅವರು ಹೇಳಿದರು. ಇನ್ನು ದಿವ್ಯ ಉರುಡುಗ ಮತ್ತು ಪೂರ್ವಿ ಜೋಷಿಗೆ ನಿರ್ದೇಶಕರು ಕಥೆ ಹೇಳಿದಾಗ, ಏನೂ ಅರ್ಥವಾಗಲಿಲ್ಲವಂತೆ. ಮತ್ತೆ ಮತ್ತೆ ಕೇಳಿದಾಗ ಇಷ್ಟವಾಗಿ, ನಟಿಸಲು ಒಪ್ಪಿಕೊಂಡರಂತೆ. ಛಾಯಾಗ್ರಾಹಕ ವಿಶ್ವಜಿತ್‌ ರಾವ್‌, ನಿರ್ಮಾಪಕಿ ಸುಮಿತ್ರ, ಯಮುನಾ ಶ್ರೀನಿಧಿ, ರವಿ ಭಟ್‌ ಮುಂತಾದವರು ಈ ಸಮಾರಂಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.