ಹಳ್ಳಿ ವಾಪ್ಸಿ ಸಿಕ್ಸ್ತ್ ಸೆನ್ಸ್‌ ಸೀನನ ಗ್ರಾಮಾಯಣ


Team Udayavani, Sep 14, 2018, 6:00 AM IST

gramayana-kannada-movie.jpg

ವಿನಯ್‌ ರಾಜಕುಮಾರ್‌ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದೆ. ಅದಾಗಬಹುದು, ಇದಾಗಬಹುದು ಎಂಬ ಗೊಂದಲದ ನಂತರ, ವಿನಯ್‌ ಈಗ “ಗ್ರಾಮಾಯಣ’ ಎಂಬ ಚಿತ್ರವನ್ನು ಒಪ್ಪಿಕೊಂಡಿದ್ದು, ಸದ್ಯದಲ್ಲೇ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ. ಅದಕ್ಕೂ ಮುನ್ನ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಶಿವರಾಜಕುಮಾರ್‌, ರಾಘವೇಂದ್ರ ರಾಜಕುಮಾರ್‌, ಪುನೀತ್‌ ರಾಜಕುಮಾರ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ. ಚಿನ್ನೇಗೌಡ ಸೇರಿದಂತೆ ಹಲವರು ಈ ಟೀಸರ್‌ ಬಿಡುಗಡೆಗೆ ಸಾಕ್ಷಿಯಾದರು.

“ಗ್ರಾಮಾಯಣ’ ಎಂಬ ಹೆಸರೇ ಹೇಳುವಂತೆ, ಇದೊಂದು ಗ್ರಾಮೀಣ ಚಿತ್ರ. ಎಸ್‌.ಎಲ್‌.ಎನ್‌. ಮೂರ್ತಿ ಎನ್ನುವವರು ಈ ಚಿತ್ರವನ್ನು ನಿರ್ಮಿಸಿದರೆ, ದೇವನೂರು ಚಂದ್ರು ಎನ್ನುವವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರ ಪ್ರಾರಂಭವಾಗಿದ್ದರ ಕುರಿತು ಮಾತನಾಡಿದ ಅವರು, “ನಿರ್ಮಾಪಕ ಮೂರ್ತಿ ಅವರಿಗೆ ನಾಲ್ಕು ಬಾರಿ ಕಥೆ ಹೇಳಿದೆ. ಕಥೆ ಹೇಳಿ ಸುಸ್ತಾಯಿತು. ಬೇಸರವಾಗಿ ಊರಿಗೆ ಹೋಗಿದ್ದೆ. ಒಂದು ದಿನ ರಾಘಣ್ಣ ಫೋನ್‌ ಮಾಡಿದ್ದರು. ಊಟಕ್ಕೆ ಬನ್ನಿ ಅಂತ ಕರೆದರು. ಅವರ ಮನೆಗೆ ಹೋದೆ. ಅವರಿಗೆ ಕಥೆ ಇಷ್ಟವಾಗಿ, ಚಿತ್ರ ಮಾಡಿ ಅಂತ ಹೇಳಿದರು. ನಿರ್ಮಾಪಕರು ಒಪ್ಪಿ ಚಿತ್ರ ಪ್ರಾರಂಭವಾಗಿ, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದು ಹೇಳಿದರು.

ವಿನಯ್‌ ರಾಜಕುಮಾರ್‌ ಈ ಚಿತ್ರದಲ್ಲಿ ಸಿಕ್ಸ್ತ್ ಸೆನ್ಸ್‌ ಸೀನ ಎಂಬ ಪಾತ್ರ ಮಾಡುತ್ತಿದ್ದಾರಂತೆ. “ಇತ್ತೀಚೆಗೆ ಟೀಸರ್‌ ಚಿತ್ರೀಕರಣವಾಯ್ತು. ಗಾಜನೂರಿನ ತಾತ ಹುಟ್ಟಿದ ಮನೆಯಲ್ಲಿ ಚಿತ್ರೀಕರಣ ನಡೆಯಿತು. ತುಂಬಾ ಭಯ ಇತ್ತು. ಶೂಟಿಂಗ್‌ ಬಹಳ ಚೆನ್ನಾಗಿ ನಡೀತು. ಟೀಸರ್‌ ನೋಡಿದರೆ, ಕಥೆ ಏನಿರಬಹುದು ಎಂದು ಗೊತ್ತಾಗುತ್ತದೆ. ಸುಮಾರು ಎಂಟು ತಿಂಗಳ ಹಿಂದೆ ಚಂದ್ರು ಕಥೆ ಹೇಳಿದ್ದರು. ಕಥೆ ಸಾಕಷ್ಟು ಕಾಡಿತು. ಈ ಚಿತ್ರವು ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದು ವಿನಯ್‌ ಹೇಳಿದರು.

ನಂತರ ಮಾತನಾಡಿದ ರಾಘ ವೇಂದ್ರ ರಾಜಕುಮಾರ್‌, “ನಿರ್ದೇಶಕ ಚಂದ್ರು ಕಥೆ ಹೇಳುತ್ತಿದ್ದಂತೆ, ಅಪ್ಪಾಜಿ ಹೇಳಿದ ಮಾತೊಂದು ನೆನಪಾಯಿತು. ಒಮ್ಮೆ ಅವರು ಊರಿಗೆ ಕರೆದುಕೊಂಡು ಹೋಗೋದಕ್ಕೆ ಹೇಳಿದರು.
ಕಾರಣಾಂತರಗಳಿಂದ ಆಗಲಿಲ್ಲ. ಆಗ ನೀವು ಊರನ್ನು ಮಿಸ್‌ ಮಾಡ್ಕೊàತಿದ್ದೀರಾ ಅಂತ ಕೇಳಿದೆ. ಅದಕ್ಕವರು, “ನಾನು ಊರನ್ನು ಮಿಸ್‌ ಮಾಡಿಕೊಳ್ಳುತ್ತಿಲ್ಲ, ಊರು ನನ್ನನ್ನ ಮಿಸ್‌ ಮಾಡಿಕೊಳ್ಳುತ್ತಿದೆ’ ಎಂದರು. ನಿರ್ದೇಶಕರು ಕಥೆ ಹೇಳಿದಾಗ, ಈ ನೆನಪು ಕಾಡಿತು. ಈ ಸಿನಿಮಾ ಒಪ್ಪಿಕೊಂಡ ನಂತರ ನನ್ನ ಮಗ ಊರಿಗೆ ಹೋಗಿ ಬರಿ¤àನಿ ಅಂತ ಹೋದ. ಈ ಕಥೆ ಚೆನ್ನಾಗಿದೆ. ಆ ಕಥೆಯೇ ಸಿನಿಮಾ ಮಾಡಿಸಿಕೊಳ್ಳುತ್ತೆ’ ಎಂದು ಹೇಳಿದರು.

ವಿನಯ್‌ಗೆ ನಾಯಕಿಯಾಗಿ ಅಮೃತಾ ಅಯ್ಯರ್‌ ಇದ್ದಾರೆ. ಇನ್ನು ಅಪರ್ಣ, ಸೀತಾ ಕೋಟೆ, ಸಂಪತ್‌ ಕುಮಾರ್‌ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಎಲ್ಲರೂ ಚಿತ್ರದಲ್ಲಿ ನಟಿಸುತ್ತಿರುವ ಬಗ್ಗೆ ಖುಷಿ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.