ಭರಣಿಯ ಅಮ್ಮನ ಸೆಂಟಿಮೆಂಟ್‌


Team Udayavani, Sep 21, 2018, 6:00 AM IST

z-29.jpg

“ಡಿಸೆಂಬರ್‌ 6ಕ್ಕೆ ಹಾಡು ಕೇಳ್ತೀರಾ …’
ಹಾಗಂತ ಘೋಷಿಸಿಯೇಬಿಟ್ಟರು ನಿರ್ದೇಶಕ ಚನಾನಿರಾಜ. ಅವರ ಹೆಸರೇನೋ ವಿಚಿತ್ರವಾಗಿದೆಯಲ್ಲಾ ಅಂತನಿಸಬಹುದು. ಅವರ ನಿಜವಾದ ಹೆಸರು ಚನ್ನಬಸವ. ಅವರು ಐವರು ಸ್ನೇಹಿತರಂತೆ. ಹಾಗಾಗಿ ಐವರ ಹೆಸರಿನ ಮೊದಲಕ್ಷರವನ್ನು ಜೋಡಿಸಿ ಚನಾನಿರಾಜ ಆಗಿದ್ದಾರೆ. ಈಗ ವಿಷಯಕ್ಕೆ ಬರೋದಾದರೆ, ಅವರು ಚಿತ್ರದ ಹಾಡುಗಳ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು ಚಿತ್ರದ ಮುಹೂರ್ತದ ದಿನದಂದು. ಕಳೆದ ವಾರ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅವರ ಮೊದಲ ಚಿತ್ರ “ಭರಣಿ – ಪಾರ್ವತಮ್ಮನ ಮಗ’ ಚಿತ್ರದ ಮುಹೂರ್ತವಿತ್ತು. “ದುನಿಯಾ’ ಯೋಗಿ ಬಂದು ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿ ಹೋದ ಕೆಲ ಹೊತ್ತಲ್ಲೇ ಪತ್ರಿಕಾಗೋಷ್ಠಿ ನಡೆಯಿತು. 

ಅಂದಹಾಗೆ, ಈ ಚಿತ್ರದಲ್ಲಿ ಯೋಗಿ ಅವರ ಸಂಬಂಧಿ ಮಾಧವ್‌ ಮತ್ತು ಸ್ವಾತಿ ಕೊಂಡೆ ನಾಯಕ-ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೊಂದು ಅಪ್ಪಟ ಗ್ರಾಮೀಣ ಚಿತ್ರ ಎನ್ನುತ್ತಾರೆ ಚನಾನಿರಾಜ. “ಗ್ರಾಮೀಣ ಕಥೆಯಾದರೂ ಇದು ಬೇರೆ ತರಹ ಇರುತ್ತದೆ. ಇದು ತಾಯಿ-ಮಗನ ಸೆಂಟಿಮೆಂಟ್‌ ಚಿತ್ರ. ಇದುವರೆಗೂ ತಾಯಿ-ಮಗನ ಸೆಂಟಿಮೆಂಟ್‌ ಕುರಿತಾದ ಹಲವು ಚಿತ್ರಗಳು ಬಂದಿರಬಹುದು. ಇದು ವಿಭಿನ್ನವಾಗಿರುತ್ತದೆ. ಇಲ್ಲಿ ತಾರಾ ಅವರು ತಾಯಿಯ ಪಾತ್ರ ಮಾಡುತ್ತಿದ್ದಾರೆ. ಒಂದು ಆನೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದೆ. “ಬಾಹುಬಲಿ’ ಚಿತ್ರದಲ್ಲಿ ಆ ಆನೆ ಕಾಣಿಸಿಕೊಂಡಿತ್ತು’ ಅಂತೆಲ್ಲಾ ಹೇಳುತ್ತಾ ಹೋದರು ಚನಾನಿರಾಜ.

ನಿರ್ಮಾಪಕ ಸಿದ್ಧರಾಜು ಅವರ ತಂಗಿ ಮಗನಾಗಿರುವ ನಾಯಕ ಮಾಧವ ಮಾತನಾಡಿ, “12 ವರ್ಷಗಳಿಂದ ನಟನಾಗಬೇಕು ಎಂಬ ಆಸೆ ಇತ್ತು. ಈ ಚಿತ್ರದಿಂದ ಸಾಧ್ಯವಾಗುತ್ತದೆ. ನಿರ್ದೇಶಕರು ಹೇಳಿಕೊಟ್ಟು ಅಭಿನಯ ತೆಗೆಸುತ್ತಿದ್ದಾರೆ. 15 ದಿನಗಳ ಕಾಲ ಕೊಳ್ಳೇಗಾಲದಲ್ಲಿದ್ದು ಅಲ್ಲಿಯ ಪರಿಸರ ಅರ್ಥ ಮಾಡಿಕೊಂಡು ಬಂದೆ’ ಎಂದರು. ನಾಯಕಿ ಸ್ವಾತಿ ಕೊಂಡೆ ಆಡಿಷನ್‌ನಲ್ಲಿ ಭಾಗವಹಿಸಿದ ನಂತರ, ಚಿತ್ರತಂಡದಿಂದ ಯಾವುದೇ ಕರೆ ಬರಲಿಲ್ಲವಂತೆ. ಇನ್ನು ಬರಲ್ಲ ಎಂದುಕೊಳ್ಳುವಷ್ಟರಲ್ಲೇ ಕರೆ ಬಂದು ಅವರು ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಕಳೆದ ತಿಂಗಳು ಕೇರಳದಲ್ಲಿ ಟೆಸ್ಟ್‌ ಶೂಟ್‌ ನಡೆಯಿತು. ಆರಂಭದಲ್ಲಿ ಆನೆ ನೋಡಿ ಭಯವಾಯ್ತು. ಬಿಟ್ಟು ಬರುವಾಗ ಅಳು ಬಂತು’ ಎಂದು ಹೇಳಿಕೊಂಡರು.

ಚಿತ್ರಕ್ಕೆ ಮಂಜು ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ಶಿವಕುಮಾರ್‌ ಅವರ ಛಾಯಾಗ್ರಹಣ ಮತ್ತು ವಿವೇಕ್‌ ಚಕ್ರವರ್ತಿ ಅವರ ಸಂಗೀತ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Kannada Actress; ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.