ಕನ್ನಡ ದೇಶದಲ್ಲಿ ಹಾಡು ಹಬ್ಬ


Team Udayavani, Oct 12, 2018, 6:00 AM IST

z-28.jpg

“ಕನ್ನಡ ದೇಶದೊಳ್‌’ ಎಂಬ ಸಿನಿಮಾವೊಂದು ಬರುತ್ತಿರುವ ವಿಚಾರ ನಿಮಗೆ ತಿಳಿದಿರಬಹುದು. ಇತ್ತೀಚೆಗೆ ಆ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ನಡೆಯಿತು. ಮಾಜಿ ಲೋಕಾಯುಕ್ತರಾದ ಸಂತೋಷ್‌ ಹೆಗ್ಡೆ ಹಾಗೂ ಬಿಬಿಎಂಪಿ ಮೇಯರ್‌ ಚಿತ್ರದ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಕನ್ನಡ ಕೇವಲ ನವೆಂಬರ್‌ ತಿಂಗಳಿನಲ್ಲಿ ಮಾತನಾಡುವುದಕ್ಕೆ ಸೀಮಿತವಾಗದೇ, ವರ್ಷದ ಪ್ರತಿ ದಿನ, ಪ್ರತಿ ತಿಂಗಳು ಕನ್ನಡದ ಪ್ರೀತಿ ಬೆಳೆಸಿಕೊಳ್ಳಬೇಕೆನ್ನುತ್ತಾ ಚಿತ್ರತಂಡಕ್ಕೆ ನೂತನ ಮೇಯರ್‌ ಗಂಗಾಂಬಿಕೆ ಶುಭಕೋರಿದರು. ಈ ಚಿತ್ರವನ್ನು ಅಭಿರಾಮ್‌ ಕಂಠೀರವ ನಿರ್ದೇಶಿಸಿದ್ದಾರೆ. ಈ ಚಿತ್ರದ ಮೂಲಕ ಕನ್ನಡದ ಕಂಪನ್ನು ಸೂಸಲಿದ್ದಾರಂತೆ. “ಈ ಟೈಟಲ್‌ನಡಿ ಸಿನಿಮಾ ಮಾಡಿದ್ದರಿಂದ ನನ್ನ ಜವಾಬ್ದಾರಿ ಹೆಚ್ಚಿತ್ತು. ಈ ಚಿತ್ರದ ಮೂಲಕ ಕನ್ನಡ ಶಕ್ತಿಯನ್ನು ತೋರಿಸಲಿದ್ದೇನೆ. ಈ ಮೂಲಕ ಕನ್ನಡ ಮಾತನಾಡದವರು ಕೂಡಾ ನಮ್ಮ ಕನ್ನಡದ ಬಗ್ಗೆ ಹೆಮ್ಮೆ ಪಡುವಂತಾಗಬೇಕು’ ಎನ್ನುವುದು ನಿರ್ದೇಶಕ ಕಂಠೀರವ ಅವರ ಮಾತು. ಈ ಚಿತ್ರವನ್ನು 30 ಜಿಲ್ಲೆಗಳಲ್ಲಿ ಚಿತ್ರೀಕರಿಸಿದ್ದು, ಈ ಸಮಯದಲ್ಲಿ ಸಾಕಷ್ಟು ಕಷ್ಟಪಟ್ಟಿದ್ದಾಗಿ ಹೇಳಿಕೊಂಡರು. 

ಅದು ಆಡಿಯೋ ಬಿಡುಗಡೆ ಸಮಾರಂಭವಾದ್ದರಿಂದ ಅಲ್ಲಿ ಸಂಭ್ರಮ ಮನೆ ಮಾಡಿತ್ತು. ಹಾಡು, ಕುಣಿತದ ಸಂಭ್ರಮದಲ್ಲಿ ಚಿತ್ರತಂಡ ಮಾತು ಮರೆಯಿತು. ಇದೇ ವೇಳೆ ಕೊಡವ, ಕೊಂಕಣಿ, ಉತ್ತರ ಕರ್ನಾಟಕ, ತುಳು ಭಾಷೆಗಳಲ್ಲಿ ತಯಾರಾಗಿರುವ ಲಿರಿಕಲ್‌ ವಿಡಿಯೋವನ್ನು ಕೂಡಾ ಪ್ರದರ್ಶಿಸಲಾಯಿತು. ಚಿತ್ರಕ್ಕೆ ಸೊಲೋಮನ್‌ ಸಂಗೀತ ನೀಡಿದ್ದಾರೆ. ಚಿತ್ತೂರು ಮೂಲದ ಸೋಲೋಮನ್‌, ಕೇರಳದಲ್ಲಿ ಸಂಗೀತ ಕಲಿತು, ತಮಿಳುನಾಡಿನಲ್ಲಿ ಕೆಲಸ ಆರಂಭಿಸಿ, ಈಗ ಕನ್ನಡದಲ್ಲಿ ತಮ್ಮ ಚೊಚ್ಚಲ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡ ಕಲಿತು ಮಾತನಾಡುವ ಭರವಸೆಯೊಂದಿಗೆ ಅವರ ಮಾತು ಮುಗಿಯಿತು. ಚಿತ್ರವನ್ನು ಪ್ರಕಾಶ್‌, ವಿನೋದ್‌, ವೆಂಕಟೇಶ್‌, ಯೋಗಾನಂದ್‌ ಹಾಗೂ ವಿಶ್ವನಾಥ್‌ ಸೇರಿ ನಿರ್ಮಿಸಿದ್ದು, ನವೆಂಬರ್‌ 1 ರಂದು ಬಿಡುಗಡೆ ಮಾಡುವ ಯೋಚನೆ ಅವರಿಗಿದೆ. 

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.