ಮೌಲ್ಯಯುತ ಸಿನಿಮಾ


Team Udayavani, Oct 12, 2018, 6:00 AM IST

z-31.jpg

“ಬರಲಿದೆ ಒಳ್ಳೆಯ ಧೂಮ…’
– ಇದು “ಜೀವನ ಯಜ್ಞ’ ಚಿತ್ರದ ಅಡಿಬರಹ. ಇಲ್ಲಿ ಧೂಮ ಅಂದರೆ, ಕಂಪು ಎಂದರ್ಥ. ಕಂಪು ಅಂದರೆ ಮನಸ್ಸಿಗೆ ಹಿತವೆನಿಸುವ ಚಿತ್ರವೆಂದರ್ಥ. ಅಂಥದ್ದೊಂದು ಚಿತ್ರ ಕಟ್ಟಿಕೊಟ್ಟ ಖುಷಿ ನಿರ್ದೇಶಕ ಶಿವು ಸರಳೇಬೆಟ್ಟು ಅವರದು. ಇದು ಮಂಗಳೂರು ಮಂದಿ ಸೇರಿ ಮಾಡಿರುವ ಅಪ್ಪಟ ಶುದ್ಧ ಕನ್ನಡ ಚಿತ್ರ. ಈ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಚಿತ್ರ ಪೂರ್ಣಗೊಂಡಿದ್ದು, ನವೆಂಬರ್‌ 2 ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಚಿತ್ರದ ಬಗ್ಗೆ ಮಾಹಿತಿ ಕೊಡಲೆಂದೇ ತಂಡದೊಂದಿಗೆ ಬಂದಿದ್ದರು ನಿರ್ದೇಶಕ ಶಿವು ಸರಳೇಬೆಟ್ಟು. ಅಂದು ಮಾತಿಗಿಳಿದ ಅವರು “ಜೀವನ ಯಜ್ಞ’ ಕುರಿತು ಹೇಳುತ್ತಾ ಹೋದರು. “ಇಲ್ಲಿ ಪ್ರತಿಯೊಬ್ಬರ ಲೈಫ‌ಲ್ಲೂ ನಡೆಯುವ ಕಥೆಯನ್ನೇ ಇಟ್ಟುಕೊಂಡು ಚಿತ್ರ ಮಾಡಲಾಗಿದೆ’ ನಾಲ್ವರು ಅನಾಥ ಮಕ್ಕಳ ಸುತ್ತ ನಡೆಯುವ ಕಥೆ. ತಮ್ಮ ಬಾಲ್ಯದಲ್ಲಿ ಎಲ್ಲವನ್ನೂ ಕಳೆದುಕೊಂಡು ಅನಾಥಾಶ್ರಮದಲ್ಲಿರುವ ನಾಲ್ವರು ಮಕ್ಕಳನ್ನು ಉಳ್ಳವರು ಕರೆದುಕೊಂಡು ಹೋಗಿ ಅವರನ್ನು ಸಾಕಿ ಸಲಹುತ್ತಾರೆ. ಅವರ ಹಸಿವು ನೀಗಿಸುತ್ತಾರೆ. ಕಾಣದ ಪ್ರೀತಿ ತುಂಬುತ್ತಾರೆ. ಹಾಗೆ, ಆ ಅನಾಥರ ಬದುಕಿನ ಚಿತ್ರಣ ಚಿತ್ರದುದ್ದಕ್ಕೂ ಸಾಗುತ್ತದೆ. ಇಲ್ಲಿ ಮುಖ್ಯವಾಗಿ ನಾಲ್ಕು ಅಂಶಗಳು ಸಿನಿಮಾವನ್ನು ಆವರಿಸಿಕೊಂಡಿವೆ. ಅದೇನೆಂಬುದನ್ನು ಚಿತ್ರದಲ್ಲೇ ನೋಡಬೇಕು. ಕನ್ನಡದ ಮಟ್ಟಿಗೆ ಇದು ಹೊಸ ಪ್ರಯತ್ನ. ಆಧ್ಯಾತ್ಮ, ಮನರಂಜನೆ ಜೊತೆಗೆ ಎಮೋಷನಲ್‌ ಕೂಡ ಚಿತ್ರದಲ್ಲಿದೆ. ಚಿತ್ರವನ್ನು 30 ದಿನಗಳ ಕಾಲ ಮಂಗಳೂರಲ್ಲಿ ಚಿತ್ರೀಕರಿಸಲಾಗಿದ್ದು, ಒಂದೇ ಏರಿಯಾದಲ್ಲಿ ಚಿತ್ರೀಕರಿಸಿರುವುದು ಇನ್ನೊಂದು ವಿಶೇಷ. ಒಂದೇ ಮಾತಲ್ಲಿ ಹೇಳುವುದಾದರೆ, ಪಾಲೇìಜಿಯಿಂದ ಗೂಗಲ್‌ಜಿವರೆಗೆ ಹೇಳಲಾಗಿದೆ. ಪಂಚಭೂತಗಳಿಂದ ಹಿಡಿದು ಹಿಂದಿನ ಕಾಲದ ಮೌಲ್ಯ, ಆದರ್ಶ, ಬದಲಾಗುತ್ತಿರುವ ಪ್ರವೃತ್ತಿ ಸೇರಿದಂತೆ ಅನೇಕ ವಿಚಾರಗಳು ಚಿತ್ರದ ಪ್ರಮುಖ ಅಂಶಗಳು’ ಎಂದು ವಿವರ ಕೊಟ್ಟರು ನಿರ್ದೇಶಕರು.

ನಿರ್ಮಾಪಕ ಕಿರಣ್‌ ರೈ ಅವರಿಗೆ ಒಳ್ಳೆಯ ಚಿತ್ರ ನಿರ್ಮಿಸಿರುವ ಖುಷಿ ಇದೆಯಂತೆ. “ಈಗಾಗಲೇ ಟ್ರೇಲರ್‌, ಟೀಸರ್‌ಗೆ ಸಾಕಷ್ಟು ಮೆಚ್ಚುಗೆ ಸಿಕ್ಕಿದೆ. ಎಲ್ಲೂ ಹೊಂದಾಣಿಕೆ ಮಾಡಿಕೊಳ್ಳದೆ ಸಿನಿಮಾ ಮಾಡಿದ್ದೇವೆ. ಇಲ್ಲಿ ಎಲ್ಲರಿಗೂ ಇದು ಮೊದಲ ಅನುಭವ. ಹಿರಿಯ ನಟರಾದ ರಮೇಶ್‌ ಭಟ್‌ ಅವರೊಬ್ಬರೇ ಅನುಭವಿಗಳು. ಅವರ ಸಲಹೆ, ಸೂಚನೆಗಳಿಂದ ಚಿತ್ರ ಕೂಡ ಚೆನ್ನಾಗಿ ಮೂಡಿಬಂದಿದೆ’ ಎಂದರು ಕಿರಣ್‌ ರೈ.

ಮತ್ತೂಬ್ಬ ನಿರ್ಮಾಪಕ ರಂಜನ್‌ ಶೆಟ್ಟಿ ಅವರಿಗೆ ಕಥೆ ಇಷ್ಟವಾಗಿದ್ದರಿಂದ ಗೆಳೆಯ ಕಿರಣ್‌ ರೈ ಜೊತೆ ಸೇರಿ ಚಿತ್ರ ಮಾಡಲು ಸಾಧ್ಯವಾಗಿದೆಯಂತೆ. ಇಲ್ಲಿ ಎಲ್ಲಾ ಧರ್ಮಗಳ ಸಾರವನ್ನು ಸಾರುವ ಕೆಲಸ ಮಾಡಲಾಗಿದೆ. ಚಿತ್ರದಲ್ಲಿ ಆಪ್ತತೆ ಇದೆ. ಎಲ್ಲಕ್ಕಿಂತಲೂ ಹೆಚ್ಚಾಗಿ ಜೀವನದ ಮೌಲ್ಯಗಳ ಬಗ್ಗೆ ಹೇಳಲಾಗಿದೆ. ಕನ್ನಡಕ್ಕೊಂದು ಹೊಸ ಬಗೆಯ ಚಿತ್ರ ಕೊಡುತ್ತಿರುವ ಖುಷಿ ಇದೆ. ನಿಮ್ಮೆಲ್ಲರ ಸಹಕಾರ ಇರಲಿ’ ಎಂಬ ಮನವಿ ಇಟ್ಟರು ರಂಜನ್‌ ಶೆಟ್ಟಿ.  

ರಮೇಶ್‌ ಭಟ್‌ ಅವರಿಗೆ ಹೊಸಬರ ತಂಡ ಅಂತ ಅನಿಸಲೇ ಇಲ್ಲವಂತೆ. ಎಲ್ಲರೂ ತುಂಬಾ ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ. ನಿರ್ದೇಶಕರು ಬುದ್ಧಿವಂತರು. ಏನು ಹೇಳಬೇಕು, ಎಷ್ಟು ಹೇಳಬೇಕೆಂಬ ಬಗ್ಗೆ ಸ್ಪಷ್ಟತೆ ಇದೆ. ಅವರ ಮನದಲ್ಲಿರುವ ಯೋಚನೆಗಳು ಸಿನಿಮಾ ರೂಪ ಪಡೆದಿವೆ. ಬದುಕು ಭ್ರಮೆಯಿಂದ ಸಾಗುತ್ತದೆ ಎಂಬುದನ್ನು ಎಷ್ಟು ಸೂಕ್ಷ್ಮವಾಗಿ ಹೇಳಿದ್ದಾರೋ, ಅಷ್ಟೇ ಸೂಕ್ಷ್ಮವಾಗಿ ಬದುಕಿನ ಮೌಲ್ಯ ಕುರಿತು ವಿವರಿಸಿದ್ದಾರೆ. ಇನ್ನೊಂದು ವಿಷಯ ಹೇಳಲೇಬೇಕು. ಮಂಗಳೂರು ಸಮೀಪದ ಗ್ರಾಮದಲ್ಲಿರುವ ಸುಮಾರು 800 ವರ್ಷದ ಹಳೆಯ ಮನೆಯಲ್ಲಿ ಚಿತ್ರೀಕರಿಸಲಾಗಿದೆ. ನನ್ನ ಭಾಗದ ಚಿತ್ರಣವನ್ನು ಅಲ್ಲಿ ಮಾಡಿದ್ದು ವಿಶೇಷ ಅನುಭವ ಕಟ್ಟಿಕೊಟ್ಟಿದೆ. ಇಲ್ಲಿರುವ ಸಾಹಿತ್ಯ ಮತ್ತು ಸಂಗೀತ ಮನತಟ್ಟುತ್ತದೆ’ ಎಂದರು.

ನಾಯಕ ಮನೋಜ್‌ ಪುತ್ತೂರ್‌ ಅವರಿಗೆ ಇಲ್ಲಿ ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. ರಿಚ್‌ ಇರುವ ಹುಡುಗ ತನ್ನ ತಾಯಿ ಬಗ್ಗೆ ಕೇರ್‌ ತೆಗೆದುಕೊಳ್ಳದೆ ಲೈಫ್ ನಡೆಸುವ ಪಾತ್ರವನ್ನು ನಿರ್ವಹಿಸಿದ್ದಾರಂತೆ. ನಿರ್ಮಾಪಕರು ಎಲ್ಲೂ ಹೊಂದಾಣಿಕೆ ಮಾಡಿಕೊಳ್ಳದೆ ಚಿತ್ರ ಮಾಡಿದ್ದಾರೆ. ಇದು ನನ್ನ ಪಾಲಿಗೆ ವಿಭಿನ್ನ ಚಿತ್ರ’ ಎಂಬುದು ಮನೋಜ್‌ ಮಾತು.

ನಾಯಕಿ ಆದ್ಯಾ ಆರಾಧನಾ ಅವರಿಗೆ ಇಲ್ಲೊಂದು ಹೊಸ ಇಮೇಜ್‌ ಸಿಗುವ ನಂಬಿಕೆ ಇದೆಯಂತೆ. ಜಯಶ್ರೀ, ಶೈನ್‌ಶೆಟ್ಟಿ, ಅನ್ವಿತಾ ಸಾಗರ್‌ ಸೇರಿದಂತೆ ತುಳು ಸಿನಿಮಾರಂಗದ ಅನೇಕರು ಇಲ್ಲಿ ನಟಿಸಿದ್ದಾರೆ. ಸುರೇಂದ್ರ ಅವರು ಚಿತ್ರಕ್ಕೆ ಛಾಯಾಗ್ರಹಣ ಮಾಡಿದರೆ, ಆಶೆ ಮೈಕೆಲ್‌ ಅವರ ಸಂಗೀತವಿದೆ.

ಟಾಪ್ ನ್ಯೂಸ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

6-sslc

Rank: ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.