ಥ್ರಿಲ್ಲರ್‌ ಮಾತು; ಚುಮುಚುಮು ಚಳಿಯಲ್ಲಿ


Team Udayavani, Oct 26, 2018, 6:00 AM IST

udgarsha.jpg

ಅದು ಮುಂಜಾನೆ ಮಡಿಕೇರಿಯ ಪ್ರಶಾಂತ ವಾತಾವರಣ. ಎರಡು ತಿಂಗಳ ಹಿಂದಷ್ಟೆ ಮಳೆಯ ಹೊಡೆತಕ್ಕೆ ಅಕ್ಷರಶಃ ನಲುಗಿ ಹೋಗಿದ್ದ ಕಾಫಿನಾಡು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಎಂದಿನಂತೆ ಚಳಿಗಾಲದ ತಣ್ಣನೆ ಗಾಳಿ ಕೊಡಗಿನಲ್ಲಿ ಬೀಸತೊಡಗಿದೆ. ಇಂತಹ ವಾತಾವರಣದಲ್ಲಿ ಕನ್ನಡದ ಸದಭಿರುಚಿ ನಿರ್ದೇಶಕ ಎಂದೇ ಕರೆಸಿಕೊಳ್ಳುವ ಸುನೀಲ್‌ ಕುಮಾರ್‌ ದೇಸಾಯಿ ತಮ್ಮ “ಉದ್ಘರ್ಷ” ಚಿತ್ರದ ಕ್ಲೈಮ್ಯಾಕ್ಸ್‌ ದೃಶ್ಯಗಳನ್ನು ಸೆರೆಹಿಡಿಯುವಲ್ಲಿ ನಿರತರಾಗಿದ್ದರು. ಇನ್ನು ದೇಸಾಯಿ ತಮ್ಮ ಚಿತ್ರದ ಕ್ಲೈಮ್ಯಾಕ್ಸ್‌ ಚಿತ್ರೀಕರಣವನ್ನು ತೋರಿಸುವ ಸಲುವಾಗಿಯೇ ಬೆಂಗಳೂರಿನಿಂದ ಸಿನಿಮಾ ಪತ್ರಕರ್ತರು, ಮಾಧ್ಯಮ ಪ್ರತಿನಿಧಿಗಳನ್ನು ಆಹ್ವಾನಿಸಿದ್ದರು. ಅಲ್ಲಿ ದೇಸಾಯಿ ಹಂಚಿಕೊಂಡ “ಉದ್ಘರ್ಷ” ಅನುಭವ ಅವರ ಮಾತುಗಳಲ್ಲೇ ..

“ಉದ್ಘರ್ಷ” ಯುನಿವರ್ಸಲ್‌ ಕಂಟೆಟ್‌, ಸಬೆjಕ್ಟ್ ಇರುವ ಸಿನಿಮಾ.”ಪ್ರಚಂಚದಲ್ಲಿ ಯಾವಾಗ ಸಿನಿಮಾ ಶುರುವಾಯಿತೊ, ಅಂದಿನಿಂದ ಇಂದಿನವರೆಗೂ ಸಸ್ಪೆನ್ಸ್‌, ಥ್ರಿಲ್ಲರ್‌ ಸಿನಿಮಾಗಳನ್ನು ನೋಡುವ, ಖುಷಿಪಡುವ ಒಂದು ದೊಡ್ಡ ಪ್ರೇಕ್ಷಕ ವರ್ಗವೇ ಇದೆ. ಎಂಬತ್ತು ವರ್ಷದ ಹಿಂದೆ ಬಂದ ಸಸ್ಪೆನ್ಸ್‌, ಥ್ರಿಲ್ಲರ್‌ ಸಿನಿಮಾಗಳನ್ನು ಇಂದಿಗೂ ಪ್ರೇಕ್ಷಕರು ನೋಡುತ್ತಾರೆ. ಆ ಸಿನಿಮಾಗಳಿಗೆ ಅಂಥದ್ದೊಂದು ಶಕ್ತಿ ಇದೆ.

ಸಸ್ಪೆನ್ಸ್‌, ಥ್ರಿಲ್ಲರ್‌ ಸಿನಿಮಾಗಳಿಗೆ ನೇಟಿವಿಟಿ, ಭಾಷೆ ಯಾವುದೂ ಅಡ್ಡಿಯಾಗುವುದಿಲ್ಲ. ಅದು ಎಲ್ಲಾ ಕಾಲಕ್ಕೂ, ಎಲ್ಲಾ ಭಾಷೆಗೂ, ಎಲ್ಲಾ ಥರದ ಪ್ರೇಕ್ಷಕರಿಗೂ ಸಲ್ಲುವ ಸಿನಿಮಾ. “ಉದ್ಘರ್ಷ”ಕೂಡ ಅಂಥದ್ದೆ ಸಿನಿಮಾ. ಇದು ಯಾವುದೋ ಒಂದು ಭಾಷೆ, ನೇಟಿವಿಟಿಗೆ ಸೀಮಿತವಾದ ಸಿನಿಮಾವಲ್ಲ. ಹಾಗಾಗಿಯೇ ಇದನ್ನ ಕನ್ನಡದ ಜೊತೆ ಜೊತೆಗೆ ತಮಿಳು, ತೆಲುಗಿನಲ್ಲೂ ಮಾಡಲು ಮುಂದಾದೆವು. ಇದನ್ನು ಯಾವುದೇ ಭಾಷೆಯಲ್ಲಿ ಮಾಡಿದ್ರು ಪ್ರೇಕ್ಷಕರು ನೋಡಿ, ಖುಷಿಪಡುತ್ತಾರೆ. ನನ್ನ ಹಿಂದಿನ ಸಸ್ಪೆನ್ಸ್‌, ಥ್ರಿಲ್ಲರ್‌ ಸಿನಿಮಾಗಳು ಅದೇ ಕಾರಣಕ್ಕಾಗಿ ಬೇರೆ ಬೇರೆ ಭಾಷೆಗಳಿಗೆ ರಿಮೇಕ್‌ ಆಗಿ, ಡಬ್‌ ಆಗಿ ಗೆದ್ದಿರುವುದು.

“ಉದ್ಘರ್ಷ” ಕೂಡ ಅದೇ ಸಾಲಿಗೆ ಸೇರುವ ಸಿನಿಮಾ. ಹೊಸ ವರ್ಷದ ಹಿಂದಿನ ರಾತ್ರಿಯಿಂದ ಶುರುವಾಗುವ ಸಿನಿಮಾದ ಕಥೆ, ಮರುದಿನ ಮುಗಿಯುತ್ತದೆ. 48 ಗಂಟೆಗಳಲ್ಲಿ ಒಂದು ಕ್ರೈಂ ಹಿಂದೆ, ಏನೇನು ಸಸ್ಪೆನ್ಸ್‌, ಥ್ರಿಲ್ಲರ್‌ ಘಟನೆಗಳೆ “ಉದ್ಘರ್ಷ” ಸಿನಿಮಾ. ಇಂದಿನ ಜನರೇಶನ್‌ ಇಷ್ಟವಾಗುವ ರೀತಿಯಲ್ಲಿ ಅದನ್ನು ಕಟ್ಟಿ ಕೊಡುತ್ತಿದ್ದೇವೆ’ ಎನ್ನುವುದು ದೇಸಾಯಿ ಮಾತು.

ಹೆಂಗಸರ ವಯಸ್ಸು ಮತ್ತು
ಸಿನಿಮಾ ಬಜೆಟ್‌ ಕೇಳಬಾರದು!

“ಸಾಮಾನ್ಯವಾಗಿ ಹೆಂಗಸರ ವಯಸ್ಸು, ಗಂಡಸರ ಸಂಬಳ ಕೇಳಬಾರದು’ ಎಂಬ ನುಡಿಗಟ್ಟನ್ನು ನೀವೆಲ್ಲ ಕೇಳಿರುತ್ತೀರಿ. ಈಗ ಆ ನುಡಿಗಟ್ಟಿಗೆ “ಸಿನಿಮಾದ ಬಜೆಟ್‌ ಕೂಡ ಕೇಳಬಾರದು!’ ಎಂಬ ಇನ್ನೊಂದು ಸಾಲನ್ನು ಸೇರಿಸಿದ್ದಾರೆ ದೇಸಾಯಿ! ಏಕಕಾಲಕ್ಕೆ ಕನ್ನಡ,ತಮಿಳು, ತೆಲುಗು ಭಾಷೆಗಳಲ್ಲಿ “ಉದ್ಘರ್ಷ”ಚಿತ್ರ ತಯಾರಾಗುತ್ತಿದ್ದು, ಜೊತೆಗೆ ಹಿಂದಿಗೂ ಡಬ್‌ ಆಗುತ್ತಿದೆ. ತೆರೆಮೇಲೆ ಕನ್ನಡಕ್ಕಿಂತ ತಮಿಳು, ತೆಲುಗು, ಹಿಂದಿ ಕಲಾವಿದರ ಬೃಹತ್‌ ತಾರಾಗಣವೇ ಇದೆ. ಈಗಾಗಲೇ ಕೇರಳ, ಹೈದರಾಬಾದ್‌, ಬೆಂಗಳೂರು, ಮಡಿಕೇರಿ ಸುತ್ತಮುತ್ತ ಸುಮಾರು 65ಕ್ಕೂ ಹೆಚ್ಚು ದಿನಗಳ ಚಿತ್ರೀಕರಣ ನಡೆಸಲಾಗಿದೆ. ಇಷ್ಟೊಂದು ದೊಡ್ಡ ಕಲಾವಿದರು, ತಂತ್ರಜ್ಞರು, ಆಧುನಿಕ ಪರಿಕರಗಳನ್ನು ಬಳಸಿ ದೇಸಾಯಿ”ಉದ^ರ್ಷ’ವನ್ನು ಸೆರೆ ಹಿಡಿಯುತ್ತಿರುವುದರಿಂದ,ಚಿತ್ರದ ಬಜೆಟ್‌ ಎಷ್ಟಿರಬಹುದು..? ಎಂಬ ಕುತೂಹಲದ ಪ್ರಶ್ನೆ ಮೂಡುವುದು ಸಹಜ.

ಇದೇ ಪ್ರಶ್ನೆಯನ್ನು ಪತ್ರಕರ್ತರು ದೇಸಾಯಿ ಅವರ ಮುಂದಿಟ್ಟಾಗ ಬಂದ ಉತ್ತರ “ಹೆಣ್ಣಿನ ವಯಸ್ಸು ಕೇಳಬಾರದು.., ಹಾಗೆ ಸಿನಿಮಾದ ಬಜೆಟ್‌ ಕೂಡ ಕೇಳಬಾರದು!’ ಅನ್ನೋದು.

“ಯಾವುದೇ ಹೆಣ್ಣು ತನ್ನ ಸರಿಯಾದ ವಯಸ್ಸು ಹೇಳ್ಳೋದಿಲ್ಲ. ಹಾಗೆ ಯಾವುದೇ ನಿರ್ದೇಶಕ, ನಿರ್ಮಾಪಕ ಕೂಡ, ತಮ್ಮ ಸಿನಿಮಾದ ಸರಿಯಾದ ಬಜೆಟ್‌ ಹೇಳ್ಳೋದಿಲ್ಲ’ ಎಂಬ ಉತ್ತರ ದೇಸಾಯಿ ಅವರದ್ದು.

“ಸಿನಿಮಾದ ಸಬೆjಕ್ಟ್ ಏನು ಡಿಮ್ಯಾಂಡ್‌ ಮಾಡುತ್ತದೆಯೋ, ಅದೆಲ್ಲವನ್ನು ನಿರ್ಮಾಪಕರು ಒದಗಿಸಿಕೊಟ್ಟಿದ್ದಾರೆ. ಎಲ್ಲೂ.., ಯಾವುದಕ್ಕೂ ರಾಜಿಯಾಗದಂತೆ ಸಿನಿಮಾ ಮಾಡುತ್ತಿದ್ದೇವೆ. ತೆರೆಮೇಲೆ ಸಿನಿಮಾ ನೋಡಿದ್ರೆ, ಎಷ್ಟೊಂದು ಖರ್ಚು ಮಾಡಿದ್ದೇವೆ ಅನ್ನೋದು ಪ್ರೇಕ್ಷಕರಿಗೆ ಗೊತ್ತಾಗುತ್ತೆ’ ಎಂಬ ಜಾಣತನದ ಉತ್ತರ ಕೊಡುತ್ತಾರೆ ದೇಸಾಯಿ.

ಆದಷ್ಟು ಬೇಗ ಪ್ರೇಕ್ಷಕರ ಮುಂದೆ ಬರುತ್ತೇವೆ ಸದ್ಯ “ಉದ್ಘರ್ಷ” ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿದ್ದೇವೆ. ನಾವಂದುಕೊಂಡಂತೆ ಚಿತ್ರ ಬಂದಿದೆ.ಎಷ್ಟು ಬೇಗ ಆಗುತ್ತದೆಯೊ, ಅಷ್ಟು ಬೇಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಬೇಕು ಎಂಬ ಕಾತುರ ನಮಗೂ ಇದೆ. ಅದಕ್ಕಾಗಿಯೇ ಬಿಡುವಿಲ್ಲದೆ ಚಿತ್ರೀಕರಣ ಮಾಡುತ್ತಿದ್ದೇವೆ’ ಎನ್ನುತ್ತಾರೆ ದೇಸಾಯಿ. ಇನ್ನು ದೇಸಾಯಿ ಅವರ ಜೊತೆಗಿದ್ದ
ಚಿತ್ರದ ಕಲಾವಿದರಾದ ಠಾಕೂರ್‌ ಅನೂಪ್‌ ಸಿಂಗ್‌, ಸಾಯಿ ಧನ್ಸಿಕಾ,ಕಬೀರ್‌ ಸಿಂಗ್‌, ತಾನ್ಯಾ ಹೋಪ್‌ ಚಿತ್ರದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರೂ, ತಮ್ಮ ಪಾತ್ರಗಳ ಬಗ್ಗೆ ಹೆಚ್ಚಿನ ಗುಟ್ಟು ಬಿಟ್ಟುಕೊಡಲಿಲ್ಲ. ಇನ್ನು ನಿರ್ಮಾಪಕ ದೇವರಾಜ್‌. ಆರ್‌, ಚಿತ್ರ ನಿರ್ಮಾಣಕ್ಕೆ ಬಂದ ಬಗ್ಗೆ ಹೇಳಿಕೊಂಡರು.

– ಜಿ.ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.