ಹೀರೋ ಇಲ್ಲ ಕಥೆಯೇ ಎಲ್ಲಾ… 


Team Udayavani, Nov 2, 2018, 6:00 AM IST

s-26.jpg

ನೀವೇನಾದರೂ ಆಹಾರಪ್ರಿಯರಾಗಿದ್ದರೆ “ಕುಷ್ಕ’ ಎಂಬ ಪದವನ್ನು ಕೇಳಿರುತ್ತೀರಿ. ಈಗ ಯಾಕೆ ಈ “ಕುಷ್ಕ’ದ ಬಗ್ಗೆ ಮಾತು ಅಂತೀರಾ? ಅದಕ್ಕೂ ಒಂದು ಕಾರಣವಿದೆ. ಕನ್ನಡದಲ್ಲಿ “ಕುಷ್ಕ’ ಎಂಬ ಹೆಸರಿನ ಚಿತ್ರವೊಂದು ತಯಾರಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಪತ್ರಕರ್ತರ ಮುಂದೆ ಬಂದಿದ್ದ ಚಿತ್ರತಂಡ, “ಕುಷ್ಕ’ದ ಹಿಂದಿನ ವಿಶೇಷತೆಗಳ ಬಗ್ಗೆ ಮಾತನಾಡಿತು. 

“ಕುಷ್ಕ’ ಪಕ್ಕಾ ಮನೋರಂಜನಾತ್ಮಕ ಚಿತ್ರ. ಮನರಂಜನೆಯ ಒಂದಷ್ಟು ಎಳೆಯನ್ನು ಇಟ್ಟುಕೊಂಡು ಅದನ್ನು ನವಿರಾದ ಹಾಸ್ಯದ ಜೊತೆಗೆ ತೆರೆ ಮೇಲೆ ಹೇಳುತ್ತಿದ್ದೇವೆ ಎನ್ನುತ್ತದೆ “ಕುಷ್ಕ’ ಚಿತ್ರತಂಡ. ಯಾವುದೇ ಪಾತ್ರದ ವೈಭವೀಕರಣವಿಲ್ಲದೆ ನಮ್ಮ ನಡುವೆಯೇ ನಡೆಯಬಹುದಾದ ಒಂದಷ್ಟು ಘಟನೆಗಳನ್ನು ಆಧರಿಸಿ ಚಿತ್ರವನ್ನು ತೆರೆಮೇಲೆ ತೆರೆದಿಡಲಿದೆಯಂತೆ. ಇನ್ನು ಈ ಚಿತ್ರದಲ್ಲಿ ಯಾವುದೋ ಒಂದು ಪಾತ್ರ ಹೀರೋ ಅಂತ ಇಲ್ಲವಂತೆ. ಕಥೆಗೆ ಮತ್ತು ಸನ್ನಿವೇಶಕ್ಕೆ ತಕ್ಕಂತೆ ಪ್ರತಿಯೊಂದು ಪಾತ್ರಗಳು ತಮ್ಮದೇ ಆದ ಮಹತ್ವನ್ನು ಪಡೆದುಕೊಳ್ಳಲಿವೆಯಂತೆ. ಆದರೆ ಇನ್ನೊಂದು ವಿಶೇಷವೆಂದರೆ, ಚಿತ್ರದಲ್ಲಿ ಖಳನಾಯಕನ ಪಾತ್ರವೊಂದು ಇರಲಿದ್ದು ಅದನ್ನು ಮಠ ಗುರು ಪ್ರಸಾದ್‌ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಕನ್ನಡದಲ್ಲಿ ಒಂದಷ್ಟು ವೆಬ್‌ ಸೀರಿಸ್‌ಗಳನ್ನು ನಿರ್ದೇಶಿಸುವ ಮೂಲಕ ಸೋಷಿಯಲ್‌ ಮೀಡಿಯಾಗಳಲ್ಲಿ ಪರಿಚಿತರಾಗಿರುವ ನವ ಪ್ರತಿಭೆ ವಿಕ್ರಮ್‌ ಯೋಗಾನಂದ್‌ “ಕುಷ್ಕ’ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.  “ಸ್ಮಾರ್ಟ್‌ ಸ್ಕ್ರೀನ್‌ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ಪ್ರತಾಪ್‌ ರೆಡ್ಡಿ, ಮಧು ಗೌಡ, ಕೈಲಾಶ್‌ ಪಾಲ್‌ ಮತ್ತು ವಿಕ್ರಮ್‌ ಯೋಗಾನಂದ್‌ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 

“ಮಠ’ ಗುರು ಪ್ರಸಾದ್‌, ಕೈಲಾಶ್‌ ಪಾಲ್‌, ಚಂದನ್‌ ಗೌಡ, ಶೋಭರಾಜ್‌, ಅರುಣ್‌ ಕುಮಾರ್‌, ಟೋನಿ ವೇವ್‌, ರಾಕ್‌ಲೈನ್‌ ಸುಧಾಕರ್‌, ಜೀವನ್‌ ಲೈಫಿ, ಅರುಣ್‌, ಕಿರಣ್‌ ಆದಿತ್ಯ ಚಿತ್ರದ ಇತರೆ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಮಾಧುರಿ ಬ್ರಗಾಂಜ, ಸಂಜನಾ ಡಿ.ಎ ಎಂಬ ಇಬ್ಬರು ಅಚ್ಚ ಕನ್ನಡದ ಹುಡುಗಿಯರು ಈ ಚಿತ್ರದ ಮೂಲಕ ನಾಯಕ ನಟಿಯರಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಚಿತ್ರಕ್ಕೆ ಬಾಲರಾಜ್‌ ಚಿತ್ರಕಥೆ ಬರೆದಿದ್ದಾರೆ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಅಭಿಲಾಶ್‌ ಗುಪ್ತ ಸಂಗೀತ ಸಂಯೋಜನೆಯ ಹಾಡುಗಳಿಗೆ ರಾಮಕೃಷ್ಣ ರಣಗಟ್ಟಿ ಸಾಹಿತ್ಯವಿದೆ. ಇನ್ನು ಚಿತ್ರಕ್ಕೆ ಸ್ವತಃ ನಿರ್ದೇಶಕ ವಿಕ್ರಮ್‌ ಯೋಗಾನಂದ್‌ ಅವರೇ ಛಾಯಾಗ್ರಹಣ ಮತ್ತು ಸಂಕಲನವನ್ನು ಮಾಡಿದ್ದಾರೆ. ಸದ್ಯ “ಕುಷ್ಕ’ ಚಿತ್ರದ ಕೆಲಸಗಳು ಆರಂಭವಾಗಿದ್ದು, ಚಿತ್ರತಂಡದ ಯೋಜನೆಯ ಪ್ರಕಾರ ಮುಂದಿನ ಮಾರ್ಚ್‌ ಅಥವಾ ಏಪ್ರಿಲ್‌ ವೇಳೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.