ಭುವನ್‌ ರಾಂಧವ


Team Udayavani, Nov 9, 2018, 6:00 AM IST

27.jpg

ಭುವನ್‌ ಪೊನ್ನಪ್ಪ ಅಭಿನಯದ “ರಾಂಧವ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಮಾಜಿ ಉಪಮುಖ್ಯಮಂತ್ರಿ ಆರ್‌. ಅಶೋಕ್‌, ಹಿರಿಯ ನಟ ದೊಡ್ಡಣ್ಣ, ಪ್ರಿಯಾಂಕಾ ಉಪೇಂದ್ರ, ಅಮೂಲ್ಯ ಟ್ರೇಲರ್‌ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್‌ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಕೋರಿದರು. 

“ರಾಂಧವ’ ಚಿತ್ರದಲ್ಲಿ ಮುಂಬೈ ಬೆಡಗಿ ಅಪೂರ್ವ, ಭುವನ್‌ ಅವರಿಗೆ ನಾಯಕಿಯಾಗಿದ್ದಾರೆ. ಈ ಚಿತ್ರವನ್ನು ಸುನೀಲ್‌ ಎಸ್‌. ಅಚಾರ್ಯ ನಿರ್ದೇಶನ ಮಾಡಿದ್ದು, ಗಾಯಕ ಶಶಾಂಕ್‌ ಶೇಷಗಿರಿ ಈ ಚಿತ್ರದ ಹಾಡುಗಳಿಗೆ ಸಂಗೀತ ನಿರ್ದೇಶಕರು.
ಇನ್ನು “ರಾಂಧವ’ ಚಿತ್ರದಲ್ಲಿ ನಾಯಕ ನಟ ಭುವನ್‌ ಮೂರು ವಿಭಿನ್ನ ಶೈಲಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.
“ಮೊದಲ ಬಾರಿಗೆ ಒಂದೇ ಚಿತ್ರದಲ್ಲಿ ಮೂರು ಬಗೆಯ ಪಾತ್ರ ಮಾಡುವಂತಹ ಅವಕಾಶ ಈ ಚಿತ್ರದಲ್ಲಿ ಸಿಕ್ಕಿದೆ. ಒಂದು ಫೋಟೋಗ್ರಾಫ‌ರ್‌ ರಾಬರ್ಟ್‌ ಪಾತ್ರ, ಮತ್ತೂಂದು ರಾಜ ರಾಂಧವ ಪಾತ್ರ. ಇವೆರಡರ ಜೊತೆಗೆ ಇನ್ನೊಂದು ಸರ್‌ಪ್ರೈಸ್‌ ಪಾತ್ರವಿದ್ದು, ಅದು ಏನು ಅನ್ನೋದನ್ನ ತೆರೆಮೇಲೆ ನೋಡಬೇಕು. ಎಲ್ಲ ಪಾತ್ರಗಳನ್ನೂ ಒಗ್ಗೂಡಿಸಿದಾಗ ಚಿತ್ರದ ಕಥೆ ಗೊತ್ತಾಗುತ್ತದೆ.

ಚಿತ್ರದಲ್ಲಿ ಈ ಪಾತ್ರಗಳನ್ನು ಮಾಡುವ ಸಲುವಾಗಿ ಸುಮಾರು ಒಂದು ವರ್ಷ ತಯಾರಿ ಮಾಡಿಕೊಂಡಿದ್ದೇನೆ’ ಎನ್ನುತ್ತಾರೆ ನಟ ಭುವನ್‌. ಮೊದಲಿಗೆ ರಾಬರ್ಟ್‌ ಪಾತ್ರದ ಚಿತ್ರೀಕರಣ ಮಾಡಿಕೊಂಡು ನಂತರ ಆ ಸರ್‌ಪ್ರೈಸ್‌ ಪಾತ್ರವನ್ನು ಮುಗಿಸಿ, ಕೊನೆಯದಾಗಿ ಆ ರಾಜ ರಾಂಧವನ ಪಾತ್ರವನ್ನು ಚಿತ್ರೀಕರಿಸಲಾಯಿತಂತೆ. “ಚಿಕ್ಕ ವಯಸ್ಸಿನಿಂದಲೇ ನಾಟಕಗಳಲ್ಲಿ ಅಭಿನಯಿಸಿದ ಅನುಭವ ಇರುವುದರಿಂದ, ಮೂರು ಪಾತ್ರಗಳನ್ನು ನಿರ್ವಹಿಸುವುದು ಸುಲಭವಾಯಿತು. ಪಾತ್ರಗಳಲ್ಲಿ ತುಂಬ ಸವಾಲುಗಳಿದ್ದರೂ, ಇಷ್ಟಪಟ್ಟು
ಮಾಡಿದ್ದೇನೆ’ ಎನ್ನುತ್ತಾರೆ ಭುವನ್‌.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಸುನೀಲ್‌ ಆಚಾರ್ಯ, “ಚಿತ್ರರಂಗದ ಹಿನ್ನೆಲೆ ಇಲ್ಲದಿದ್ದರೂ, ಆಸಕ್ತಿಯಿಂದ ಈ ಕ್ಷೇತ್ರವನ್ನು ಆರಿಸಿಕೊಂಡು ಇಲ್ಲಿದೆ ಬಂದಿದ್ದೇನೆ. ಮೊದಲನೇ ಚಿತ್ರವಾದರೂ, ಎಲ್ಲರೂ ತುಂಬ ಸಹಕರಿಸಿದ್ದಾರೆ. ಇದರಲ್ಲಿ ಲವ್‌, ಸಸ್ಪೆನ್ಸ್‌
ಎಲ್ಲವೂ ಇದೆ. ಇಂದಿನ ಪ್ರೇಕ್ಷಕರ ಅಭಿರುಚಿಯನ್ನು ಗಮನದಲ್ಲಿಟ್ಟುಕೊಂಡು ಈ ಚಿತ್ರವನ್ನು ಮಾಡಿದ್ದೇವೆ. ಚಿತ್ರ ಎಲ್ಲರಿಗೂ ಇಷ್ಟವಾಗಲಿದೆ ಎಂಬ ಭರವಸೆ ಇದೆ’ ಎಂದರು. “ಪೊಟಾಟೋ ಟಾಕೀಸ್‌’ ಬ್ಯಾನರ್‌ನಲ್ಲಿ ಶಾಂತಕುಮಾರ್‌ ಈ ಚಿತ್ರವನ್ನು
ನಿರ್ಮಾಣ ಮಾಡಿದ್ದಾರೆ. ಸದ್ಯ ನಿಧಾನವಾಗಿ ಚಿತ್ರದ ಪ್ರಚಾರ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಜನವರಿ ವೇಳೆಗೆ “ರಾಂಧವ’ನನ್ನು ಪ್ರೇಕ್ಷಕರ ಮುಂದೆ ತರುವ ಸಿದ್ಧತೆಯಲ್ಲಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.