ಭಯದ ಬಣ್ಣ


Team Udayavani, Nov 9, 2018, 6:00 AM IST

28.jpg

ಚಂದನವನದ ಕದ ತಟ್ಟುತ್ತಿರುವ ಬಹುತೇಕ ಹೊಸ ಪ್ರತಿಭೆಗಳು ಹಾರರ್‌ ಚಿತ್ರಗಳ ಮೂಲಕ ಪ್ರೇಕ್ಷಕರನ್ನು ಬೆಚ್ಚಿ ಬೀಳಿಸಿ ಗೆಲ್ಲುತ್ತಿದ್ದಾರೆ. ಹೀಗಾಗಿ ಹೊಸದಾಗಿ ಚಿತ್ರರಂಗಕ್ಕೆ ಪ್ರವೇಶ ಪಡೆಯುವವರಿಗೆ ಹಾರರ್‌ ಚಿತ್ರಗಳು ಹಾಟ್‌ ಫೇವರೆಟ್‌ ಚಿತ್ರಗಳು ಎಂಬಂತಾಗಿ ಬಿಟ್ಟಿದೆ. ಈ ವರ್ಷಾಂತ್ಯಕ್ಕೆ ಇನ್ನಷ್ಟು ಹಾರರ್‌ ಚಿತ್ರಗಳು ತೆರೆಗೆ ಬರಲು ತುದಿಗಾಲಿನಲ್ಲಿ ನಿಂತಿದ್ದು, ಸದ್ಯ ಕನ್ನಡದಲ್ಲಿ ಹಾರರ್‌ ಚಿತ್ರಗಳ ಪರ್ವ ಮುಂದುವರೆಯುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಇತ್ತೀಚೆಗೆ “ವರ್ಣಮಯ’ ಎಂಬ ಅಂಥದ್ದೆ ಹಾರರ್‌ ಚಿತ್ರವೊಂದರ ಟ್ರೇಲರ್‌ ಬಿಡುಗಡೆಯಾಗಿದೆ.

ಈ ಹಿಂದೆ “ಪುಟಾಣಿ ಸಫಾರಿ’ ಎನ್ನುವ ಮಕ್ಕಳ ಚಿತ್ರವನ್ನು ನಿರ್ದೇಶಿಸಿದ್ದ ರವೀಂದ್ರ ವೆಂಶಿ “ವರ್ಣಮಯ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ತಮ್ಮ ಚಿತ್ರದ ವಿಶೇಷತೆಗಳ ಬಗ್ಗೆ ಮಾತನಾಡುವ ರವೀಂದ್ರ ವೆಂಶಿ, “ಕನ್ನಡದಲ್ಲಿ ಹಾರರರ್‌ ಚಿತ್ರಗಳಿಗೆ ಬರವಿಲ್ಲ. ತಿಂಗಳಿಗೆ ಕನಿಷ್ಠ ಮೂರ್‍ನಾಲ್ಕು ಹಾರರ್‌ ಚಿತ್ರಗಳು ಬಿಡುಗಡೆಯಾಗುತ್ತಲೇ ಇರುತ್ತವೆ. ಒಂದು ಬಂಗಲೆ ಅಥವಾ ನಿಗೂಢ ಜಾಗಕ್ಕೆ ಒಂದಷ್ಟು ಜನ ಹೋಗುವುದು. ಅಲ್ಲಿ ಅವರಿಗೆ ದೆವ್ವದ ಕಾಟ ಶುರುವಾಗುವುದು, ಅದಕ್ಕೊಂದು ಹಿನ್ನೆಲೆ, ಇವು ಸದ್ಯ ಬರುತ್ತಿರುವ ಹಾರರ್‌ ಚಿತ್ರಗಳ ಒಂದು ಎಳೆ. ಬಹುತೇಕ ಹಾರರ್‌ ಚಿತ್ರಗಳು ಇದೇ ಸಿದಟಛಿಸೂತ್ರವನ್ನು ಪಾಲಿಸುತ್ತಿವೆ. ಆದರೆ
ಇದನ್ನು ಹೊರತುಪಡಿಸಿ, ವೈಜ್ಞಾನಿಕವಾಗಿ ಪ್ಯಾರಾನಾರ್ಮಲ್‌ ಘಟನೆಗಳನ್ನು ಆಧರಿಸಿ “ವರ್ಣಮಯ’ ಚಿತ್ರವನ್ನು ತೆರೆಗೆ ತರುತ್ತಿದ್ದೇವೆ’ ಎನ್ನುತ್ತಾರೆ ನಿರ್ದೇಶಕ ರವೀಂದ್ರ ವೆಂಶಿ.

ಇನ್ನು ಈ ಚಿತ್ರದಲ್ಲಿ ಗ್ರಾಫಿಕ್ಸ್‌ ಇದೆ. ಆದರೆ ದೆವ್ವದ ಚಿತ್ರಣ ಬೇರೆಯದೇ ಶೈಲಿಯಲ್ಲಿದೆ, ತಲೆ ಕೆದರಿಕೊಂಡು ಭಯಾನಕ ದೆವ್ವ ಇಲ್ಲಿಲ್ಲ, ಏಕೆಂದರೆ ದೆವ್ವದ ಪರಿಕಲ್ಪನೆ ಪುರಾತನವಾದರೂ ಅದರ ಪ್ರಾತ್ಯಕ್ಷತೆ ಯಾರಿಗೂ ಗೊತ್ತಿಲ್ಲ. ಅದರ ಆಕಾರ, ರೂಪದ ಬಗ್ಗೆ ಸ್ಪಷ್ಟವಾದ ಮಾಹಿತಿ ನಿದರ್ಶನಗಳಿಲ್ಲ. ಹಾಗಾಗಿಯೇ ಇಂದಿನ ಜಗತ್ತಿನಲ್ಲಿ ಹೇಗೆ ಪರಿಕಲ್ಪನೆ ಮೂಡಿದೆಯೋ ಹಾಗೆಯೇ ಚಿತ್ರಿಸಲಾಗಿದ್ದು, ಇಡೀ ಚಿತ್ರದಲ್ಲಿ  ಮಾಟ-ಮಂತ್ರ, ಮಂತ್ರವಾದಿಗಳ ಅಬ್ಬರವಿಲ್ಲ. ಹಾಗಾಗಿಯೇ ಕತೆ ವಿಶೇಷ ಎನ್ನುವುದು ವರ್ಣಮಯ ಚಿತ್ರತಂಡದ ಮಾತು. 

ಚಿತ್ರಕ್ಕೆ ಶ್ರೀಗುರು ಹಿನ್ನೆಲೆ ಸಂಗೀತ ಸಂಯೋಜಿಸುತ್ತಿದ್ದರೆ, ಹಾಡುಗಳಿಗೆ ಹೊಸ ಪ್ರತಿಭೆಗಳಾದ ಸುಧಾಂಶು-ವಿನೋದ್‌ ರಾಗ ಸಂಯೋಜನೆ ಮಾಡಿದ್ದಾರೆ. ಜೀವನ ಗೌಡ ಛಾಯಾಗ್ರಹಣ, ಸಿ.ರವಿಚಂದ್ರನ್‌ ಅವರ ಸಂಕಲನ ಚಿತ್ರಕ್ಕಿದೆ. ರಾಜ್‌ ಎಂಬ ನವ ಪ್ರತಿಭೆ “ವರ್ಣಮಯ’ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ನಾಯಕಿಯರಾಗಿ ಶಕ್ತಿ ಎಸ್‌. ಶೆಟ್ಟಿ, ಸುನೀತಾ ಮರಿಯಾ ಪಿಂಟೋ, ಆರಾಧ್ಯ ಅಟ್ಟಾವರ ಅಭಿನಯಿಸುತ್ತಿದ್ದಾರೆ. 

ಉಳಿದಂತೆ ಮಂಡ್ಯ ಜಗ, ಹರೀಶ್‌ ಕುಂದೊರು, ಉಮೇಶ್‌ ಸಿಂಧನೂರು ಇತರೆ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ವರ್ಣಮಯ’ ಚಿತ್ರವನ್ನು ದೀಪ್ತಿ ದಾಮೋದರ್‌ ನಿರ್ಮಿಸುತ್ತಿದ್ದಾರೆ.  
 

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.