ಅಚಾತುರ್ಯದ ಸುತ್ತ ಗಿಲ್‌


Team Udayavani, Nov 9, 2018, 6:00 AM IST

29.jpg

ಚಿತ್ರರಂಗಕ್ಕೆ ಬರಬೇಕು ಎಂಬ ಹೊಸ ಪ್ರತಿಭೆಗಳು ಇತ್ತೀಚೆಗೆ ಮೊದಲು ಮುಖ ಮಾಡುವುದು ಕಿರುಚಿತ್ರಗಳತ್ತ. ತಮ್ಮ
ಪ್ರತಿಭೆಯನ್ನು ಒರೆಗೆ ಹಚ್ಚಲು ಕಿರುಚಿತ್ರಗಳು ಉತ್ತಮ ವೇದಿಕೆಯಾಗುತ್ತಿವೆ. ಇತ್ತೀಚೆಗೆ ಕಿರುಚಿತ್ರದ ಮೂಲಕವೇ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ, ಭರವಸೆ ಮೂಡಿಸಿ ದೊಡ್ಡ ಚಿತ್ರಗಳನ್ನು ನಿರ್ಮಿಸಲು ಮುಂದಾಗಿರುವ ಹೊಸಪ್ರತಿಭೆಗಳ ಉದಾಹರಣೆಗಳು ಚಿತ್ರರಂಗದಲ್ಲಿ ಸಾಕಷ್ಟು ಸಿಗುತ್ತವೆ. ಈ ಸಾಲಿಗೆ ಈಗ ಮತ್ತೂಂದು ಕಿರುಚಿತ್ರ ಸೇರ್ಪಡೆಯಾಗುತ್ತಿದೆ. ಅದರ ಹೆಸರು “ದಿ ಗಿಲ್ಟ್’. 

“ಬೆಂದಕಾಳೂರು ಪಿಕ್ಚರ್’ ಎಂಬ ಸಂಸ್ಥೆಯ ಮೂಲಕ ಚಿತ್ರರಂಗದ ಕಡೆಗೆ ಆಸಕ್ತಿಯನ್ನು ಬೆಳೆಸಿಕೊಂಡ, ಸಮಾನ ಮನಸ್ಕರು – ಸಮಾನ ವಯಸ್ಕರು ಸೇರಿಕೊಂಡು “ದಿ ಗಿಲ್ಟ್’ ಕಿರುಚಿತ್ರವನ್ನು ನಿರ್ಮಿಸಿದ್ದಾರೆ. ಸುಮಾರು ಮೂರು ವರ್ಷಗಳ ಹಿಂದೆ ಆರಂಭವಾದ “ಬೆಂದಕಾಳೂರು ಪಿಕ್ಚರ್’ ಸಂಸ್ಥೆ ಪ್ರತಿಭಾವಂತ ಯುವಕರ ತಂಡವನ್ನು ಕಟ್ಟಿಕೊಂಡು, ಕಿರುಚಿತ್ರಗಳು, ವೆಬ್‌ ಸೀರಿಸ್‌ಗಳ ನಿರ್ಮಾಣದಲ್ಲಿ ತೊಡಗಿಕೊಂಡಿದೆ. ಇದರ ಜತೆಗೆ ಬೇರೆ ಸಂಸ್ಥೆಗಳ, ತಂಡಗಳ ಚಿತ್ರ ನಿರ್ಮಾಣ ಕಾರ್ಯಕ್ಕೂ ಕೈ ಜೋಡಿಸುತ್ತಿದೆ.

ಸಣ್ಣ ಅಚಾತುರ್ಯದಿಂದ ನಡೆದ ಘಟನೆಗಳು ಹೇಗೆ ಜೀವಕ್ಕೆ ಕುತ್ತು ತರಲಿವೆ. ಇದರಿಂದ ಹೇಗೆಲ್ಲ ಸಂಕಷ್ಟಗಳನ್ನು ಅನುಭವಿಸಬೇಕಾಗುತ್ತದೆ ಎಂಬುದು “ದಿ ಗಿಲ್ಟ್’ ಕಿರುಚಿತ್ರದ ಕಥೆಯ ಒಂದು ಎಳೆ. ಸುಮಾರು ಹತ್ತು ನಿಮಿಷ ಅವಧಿಯ ಈ ಕಿರುಚಿತ್ರ ಕೇವಲ ನಾಲ್ಕು ಪಾತ್ರಗಳ ಸುತ್ತ ನಡೆಯುತ್ತದೆ. “ಒಂದು ಮೊಟ್ಟೆಯ ಕಥೆ’ ಚಿತ್ರದಲ್ಲಿ ಅಭಿನಯಿಸಿದ್ದ ನಟಿ ಅಮೃತಾ ನಾಯಕ್‌ ಈ ಕಿರುಚಿತ್ರದ ಪ್ರಧಾನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಕಿರುತೆರೆ ನಟ ನವೀನ್‌ ವಿಕ್ಟರ್‌, ಅಶ್ವಿ‌ನ್‌ ಹಾಸನ್‌ ಮತ್ತಿತರರು
ಚಿತ್ರದ ಇತರ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಹಿಂದೆ ಪ್ರಥಮಬಾರಿಗೆ ಮಲ್ಟಿಫ್ಲೆಕ್ಸ್‌ನಲ್ಲಿ ತೆರೆಕಂಡಿದ್ದ “ಇಂಡಿಪೆಂಡೆಂಟ್‌’, “ನೆವರ್‌ ಎಂಡ್‌’ ಮೊದಲಾದ ಕಿರುಚಿತ್ರಗಳನ್ನು ನಿರ್ದೇಶಿಸಿದ್ದ ಧೀರಜ್‌ ಈ ಕಿರುಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕೇವಲ ಒಂದು ದಿನದಲ್ಲಿ ಈ ಕಿರುಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಗುಣಮಟ್ಟದಲ್ಲಿ ಕೊರತೆಯಾಗಬಾರದು ಎಂಬ ಕಾರಣಕ್ಕೆ ಚಿತ್ರ ನಿರ್ಮಾಣದಲ್ಲಿ ಬಳಸುವ ಅತ್ಯಾಧುನಿಕ ಕ್ಯಾಮರ, 
ಮತ್ತಿತರ ಪರಿಕರಗಳನ್ನೆ ಇಲ್ಲಿ ಬಳಸಿಕೊಳ್ಳಲಾಗಿದೆ. ಇನ್ನು “ದಿ ಗಿಲ್ಟ್’ ಕಿರುಚಿತ್ರವನ್ನು ನೋಡಿ ಮೆಚ್ಚಿರುವ ನಟ ಶ್ರೀಮುರಳಿ ಇದನ್ನು ತಮ್ಮ ಅಧಿಕೃತ ಯೂ-ಟ್ಯೂಬ್‌ ಚಾನಲ್‌ ಮೂಲಕ ಬಿಡುಗಡೆ ಮಾಡಿ, ತಂಡಕ್ಕೆ ಶುಭ ಹಾರೈಸಿದ್ದಾರೆ. ಇನ್ನು “ದಿ ಗಿಲ್ಟ್’ ಕಿರುಚಿತ್ರಕ್ಕೆ ಪ್ರೇಕ್ಷಕರಿಂದ, ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ಖುಷಿಯಲ್ಲಿ ತಂಡ ಶಾರ್ಟ್‌ ಫಿಲಂನಿಂದ ಫಿಚರ್‌ ಫಿಲಂನತ್ತ ಗಮನ ಹರಿಸಿದ್ದು, ಚಿತ್ರದ ಪ್ರೀ ಪ್ರೊಡಕ್ಷನ್‌ ಕೆಲಸಗಳನ್ನು ಆರಂಭಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.