ಟೀಸರ್‌ ಮೂಲಕ ಟ್ಯೂಬ್‌ ಬೆಳಕು


Team Udayavani, Nov 9, 2018, 6:00 AM IST

30.jpg

“ದಾರಿ ಇರುವ ಕಡೆ ಮಾತ್ರ ಹೋಗಬೇಕು. ಹಾಗೊಂದು ವೇಳೆ ದಾರಿ ತಪ್ಪಿದರೆ ಏನೆಲ್ಲಾ ಆಗುತ್ತೆ ಗೊತ್ತಾ…’?

– ಹೀಗೆ ಹೇಳಿ ಸುಮ್ಮನಾದರು ನಿರ್ದೇಶಕ ವೇಣುಗೋಪಾಲ್‌. ಅವರು ಹೇಳಿದ್ದು “ಟ್ಯೂಬ್‌ಲೈಟ್‌’ ಚಿತ್ರದ ಬಗ್ಗೆ. ಈ ಟೈಟಲ್‌
ಎಲ್ಲೋ ಕೇಳಿದಂತಿದೆಯಲ್ಲಾ ಎಂಬ ಪ್ರಶ್ನೆ ಎದುರಾಗಬಹುದು. ಕಳೆದ ನಾಲ್ಕು ವರ್ಷಗಳ ಹಿಂದೆ ಶುರುವಾದ ‌ “ಟ್ಯೂಬ್‌ಲೈಟ್‌’ ಈಗ ಬೆಳಕಿಗೆ ಬಂದಿದೆ. ನಿರ್ದೇಶಕ ವೇಣುಗೋಪಾಲ್‌, ಚಿತ್ರ¨ ‌ ಟೀಸರ್‌ ಬಿಡುಗಡೆ ಮಾಡಲೆಂದೇ ತಮ್ಮ ಚಿತ್ರತಂಡದೊಂದಿಗೆ ಮಾಧ್ಯಮ ಮುಂದೆ ಬಂದಿದ್ದರು. ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ ನಿರ್ದೇಶಕ ವೇಣುಗೋಪಾಲ್‌, ಆ ಕೆಲಸಕ್ಕೆ ಗುಡ್‌ಬೈ ಹೇಳಿ, ಈ ಚಿತ್ರ ನಿರ್ದೇಶನಕ್ಕೆ ಮುಂದಾದರು. ಸಾಕಷ್ಟು ಏರಿಳಿತಗಳ ನಡುವೆ “ಟ್ಯೂಬ್‌ಲೈಟ್‌’ ಮುಗಿಸಿದ್ದಾರೆ.

ತಮ್ಮ “ಟ್ಯೂಬ್‌ಲೈಟ್‌’ ಕುರಿತು ವೇಣುಗೋಪಾಲ್‌ ಹೇಳಿದ್ದಿಷ್ಟು. “ಕಥೆ ಬಗ್ಗೆ ಹೇಳುವುದಾದರೆ, ಇಲ್ಲಿ ನಾಲ್ಕು ಪ್ರಮುಖ ಪಾತ್ರಗಳ ನಡುವೆ ಕಥೆ ಸಾಗಲಿದೆ. ದಾರಿ ಇರುವ ಕಡೆ ಮಾತ್ರ ಹೋಗಬೇಕು, ದಾರಿ ತಪ್ಪಿದರೆ ಏನಾಗುತ್ತೆ ಎಂಬುದೇ ಕಥೆಯ ಸಾರಾಂಶ. ಇಲ್ಲಿ ಸಾಕಷ್ಟು ಬದುಕಿಗೆ ಹತ್ತಿರವಾಗುವಂತಹ ವಿಷಯಗಳಿವೆ. ಚಿತ್ರ ನಾಲ್ಕು ವರ್ಷದ ಹಿಂದೆ ಶುರುವಾಗಿದ್ದು, ತಡವಾಗಲು ಅನೇಕ ಕಾರಣ. ಹಾಗೆ ಹೇಳುವುದಾದರೆ, ಲಡಾಕ್‌, ಉತ್ತರಖಾಂಡ ಸೇರಿದಂತೆ ಹಲವು ಕಡೆ ಚಿತ್ರೀಕರಿಸಲಾಗಿದೆ. ಅಲ್ಲಿ ಹೋದಾಗ, ಅಲ್ಲಿನ
ಹವಾಗುಣಕ್ಕೆ ಹೊಂದಿಕೊಂಡು ಚಿತ್ರೀಕರಣ ಮಾಡಲಾಗುತ್ತಿತ್ತು. ಹಾಗಾಗಿ ಸಮಯ ಸಾಕಷ್ಟು ಹಿಡಿಯಿತು. ಅದೂ ಒಂದು ತಡವಾಗಲು ಮುಖ್ಯ ಕಾರಣ. ಇದ್ದೊಂದು ಜರ್ನಿ ಕಥೆಯಾದ್ದರಿಂದ ಸಹಜವಾಗಿಯೇ ಸಮಯ ಬೇಕಾಯಿತು’ ಎಂಬುದು ನಿರ್ದೇಶಕರ ಮಾತು. ಚಿತ್ರದಲ್ಲಿ ಗುರುನಂದನ್‌ ಇದ್ದಾರೆ. ಅವರೊಂದಿಗೆ ಆರ್ಯನ್‌, ರೋಹಿತ್‌ ಶೆಟ್ಟಿ ಮತ್ತು ರಾಜ್‌ ಕೂಡ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. 

ಗುರುನಂದ ನ್‌ “ಟ್ಯೂಬ್‌ಲೈಟ್‌’ ಬಗ್ಗೆ ತುಂಬಾ ನಂಬಿಕೆ ಇಟ್ಟುಕೊಂಡಿದ್ದಾರಂತೆ. ಅವರು 2014ರಲ್ಲಿ ಈ ಚಿತ್ರ ಒಪ್ಪಿ ಕೆಲಸ ಶುರುಮಾಡಿದಾಗ, “ಫ‌ಸ್ಟ್‌ ರ್‍ಯಾಂಕ್‌ ರಾಜು’ ಚಿತ್ರವಿನ್ನೂ ಶುರುವಾಗಿರಲಿಲ್ಲವಂತೆ. ಗುರುನಂದನ್‌ ಇಲ್ಲಿ ಫೋಟೋಗ್ರಾಫ‌ರ್‌ ಆಗಿ ಕಾಣಿಸಿಕೊಂಡಿದ್ದು, ಒಂದು ಪ್ರಾಜೆಕ್ಟ್ ಮೇಲೆ ಅವರು ಲಡಾಕ್‌ಗೆ ಪ್ರಯಾಣ ಬೆಳೆಸುತ್ತಾರೆ. ಅವರ ಜೊತೆ ಮೂವರು ಗೆಳೆಯರೂ ಹೊರಡುತ್ತಾರೆ. ಆ ದಾರಿ ಮಧ್ಯೆ ಒಂದಷ್ಟು ಸಮಸ್ಯೆ ಎದುರಾಗುತ್ತದೆ. ಅದೇ ಚಿತ್ರ¨  ಹೈಲೈಟ್‌’ ಎಂಬುದು ಗುರುನಂದನ್‌
ಮಾತು. ಈ ಚಿತ್ರಕ್ಕೆ ಸಂಬಂಧಿಸಿದಂತೆ ವೆಂಕಟಾದ್ರಿ ಎಂಬುವವರು ಕಂಪ್ಯೂಟರ್‌ ಗೇಮ್‌ವೊಂದನ್ನು ರೂಪಿಸಿದ್ದು , ಹದಿನೈದು ಹಂತದ ಗೇಮ್‌ ಅದು ಎಂಬುದು ವಿಶೇಷ. ಆ ಪೈಕಿ ಐದು ಹಂತದ ಗೇಮ್‌ ಆಡಿ ವಿಜೇತರಾದವರಿಗೆ ಸಿನಿಮಾ ಟಿಕೆಟ್‌ ಉಚಿತ
ಎಂಬುದು ಚಿತ್ರತಂಡದ ಹೇಳಿಕೆ.

ಚಿತ್ರಕ್ಕೆ ಮನೋಹರ ಜೋಶಿ ಛಾಯಾಗ್ರಹಣವಿದೆ. ಚಿತ್ರಕ್ಕೆ ವಿವೇಕ್‌ ಚಕ್ರವರ್ತಿ ಎರಡು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಜಗನ್‌ ಚಿತ್ರಕ್ಕೆ ನಿರ್ಮಾಪಕರು. ಇನ್ನು, ಈ ಚಿತ್ರದಲ್ಲಿ ಅನುಶ್ರೀ ಮತ್ತು ಸಹನಾ ನಾಯಕಿಯರು. ಇನ್ನೊಂದು ವಿಶೇಷವೆಂದರೆ,
“ಮಠ’ ಗುರುಪ್ರಸಾದ್‌ ಇಲ್ಲೊಂದು ಕಲ್ಕಿ ಎಂಬ ಪಾತ್ರ ಮಾಡಿದ್ದಾರಂತೆ. ಒಂದರ್ಥದಲ್ಲಿ ಸಿನಿಮಾಗೆ ಅವರೇ “ಲೈಮ್‌ಲೈಟ್‌’ ಅಂತೆ. ಚಿತ್ರ ನೋಡಿದವರಿಗೆ ಲಡಾಕ್‌ಗೆ ಹೋಗಿ ಬಂದ ಅನುಭವ ಆಗೋದು ಗ್ಯಾರಂಟಿ ಎಂಬುದು ಚಿತ್ರತಂಡದ ಮಾತು. ಎಲ್ಲವೂ
ಅಂದುಕೊಂಡಂತೆ ನಡೆದರೆ, ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ “ಟ್ಯೂಬ್‌ಲೈಟ್‌’ ಆನ್‌ ಆಗುತ್ತದೆ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.