ಹುಡುಗರ ಕಥೆ ನಿಮ್ಮ ಜೊತೆ


Team Udayavani, Nov 16, 2018, 6:00 AM IST

31.jpg

ಪ್ರಿಯಾಂಕಾ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಸೆಕೆಂಡ್‌ ಹಾಫ್’ ಚಿತ್ರದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‌ ನಟಿಸಿದ್ದು ನಿಮಗೆ ಗೊತ್ತಿರಬಹುದು. ಆ ಚಿತ್ರದ ನಂತರ ನಿರಂಜನ್‌ ಬೇರೆ ಯಾವ ಸಿನಿಮಾ ಮೂಲಕವೂ ಸುದ್ದಿಯಾಗಿರಲಿಲ್ಲ. ಈಗ ನಿರಂಜನ್‌ ಹೊಸ ಸಿನಿಮಾದ ಮೂಲಕ ಬರುತ್ತಿದ್ದಾರೆ. ಅದು “ನಮ್‌ ಹುಡುಗರ ಕಥೆ’. ಇದು ನಿರಂಜನ್‌ ಸೋಲೋ ಹೀರೋ ಆಗಿ ನಟಿಸುತ್ತಿರುವ ಮೊದಲ ಸಿನಿಮಾ. ಇತ್ತೀಚೆಗೆ ಈ ಸಿನಿಮಾಕ್ಕೆ ಮುಹೂರ್ತ ನಡೆಯಿತು. ಗವಿಸಿದ್ಧಪ್ಪ ಈ ಚಿತ್ರದ ನಿರ್ದೇಶಕರು. ಸುಮಾರು 10 ವರ್ಷಗಳಿಂದ ಹಲವು ನಿರ್ದೇಶಕರ ಬಳಿ ಕೆಲಸ ಮಾಡಿದ್ದ ಗವಿಸಿದ್ಧಪ್ಪ ಅವರಿಗೆ ಇದು ಚೊಚ್ಚಲ ಸಿನಿಮಾ. ಈಗ ತಮ್ಮ ಮೊದಲ ಸಿನಿಮಾದಲ್ಲೇ ಹೆಸರು ಬದಲಿಸಿಕೊಂಡಿದ್ದು, ಎಚ್‌.ಬಿ.ಸಿದ್ದು ಎಂಬ ಹೆಸರಿನೊಂದಿಗೆ ಅಖಾಡಕ್ಕೆ ಇಳಿದಿದ್ದಾರೆ. 

ಸಿದ್ದು ಕಥೆ ಮಾಡಿಕೊಂಡು ಹೀರೋಗಾಗಿ ಹುಡುಕಾಟ ನಡೆಸುತ್ತಿದ್ದರಂತೆ. ಅವರ ಕಥೆಗೆ ವಿಭಿನ್ನ ಮ್ಯಾನರೀಸಂ ಇರುವ ಹೀರೋ ಬೇಕಾದ ಕಾರಣ, ಸಾಕಷ್ಟು ಹುಡುಕಾಟ ನಡೆಸುತ್ತಿದ್ದರಂತೆ. ಅದೊಂದು ದಿನ “ಸೆಕೆಂಡ್‌ ಹಾಫ್’ ಸಿನಿಮಾಕ್ಕೆ ಹೋದ ಸಿದ್ದು ಫ‌ುಲ್‌ ಖುಷಿಯಾಗಿದ್ದಾರೆ. ಕಾರಣ, ತಾವು ಅಂದುಕೊಂಡಂತಹ ಹೀರೋ ಸಿಕ್ಕಿದ್ದು. “ಸೆಕೆಂಡ್‌ ಹಾಫ್ ಸಿನಿಮಾ ನೋಡಿದ ನಂತರ ನೇರವಾಗಿ ನಿರಂಜನ್‌ ಮನೆಗೆ ಹೋಗಿ ಕಥೆ ಬಗ್ಗೆ ಹೇಳಿದೆ. ಅವರು ಕೂಡ ಇಷ್ಟಪಟ್ಟು ಎಲ್ಲವನ್ನು ಪಕ್ಕಾ ಮಾಡಿಕೊಂಡು ಬನ್ನಿ ಅಂದರು. ಅದರಂತೆ ನಿರ್ಮಾಪಕರೊಂದಿಗೆ ಹೋದೆ’ ಎನ್ನುತ್ತಾ ಸಿನಿಮಾ ಆರಂಭವಾದ ಬಗ್ಗೆ ಹೇಳಿಕೊಂಡರು. ಎಲ್ಲಾ ಓಕೆ ಈ ಸಿನಿಮಾದಲ್ಲಿ ಏನು ಹೇಳಲು ಹೊರಟಿದ್ದಾರೆ, ಚಿತ್ರದ ಕಥೆ ಏನು ಎಂದರೆ, ಸ್ನೇಹಿತರ ಸುತ್ತ ತಿರುಗುವ ಕಥೆ ಎಂಬ ಉತ್ತರ ನಿರ್ದೇಶಕರಿಂದ ಬರುತ್ತದೆ. “ಚಿತ್ರ ಮಂಡ್ಯ ಟೌನ್‌ನಲ್ಲಿ ನಡೆಯುತ್ತದೆ. ಸ್ನೇಹಿತರ ಮಧ್ಯೆ ಒಂದು ಸುಳ್ಳು ಬಂದರೆ ಅದರಿಂದ ಏನೆಲ್ಲಾ ತೊಂದರೆಯಾಗುತ್ತದೆ’ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ. 

ನಾಯಕ ನಿರಂಜನ್‌ “ಸೆಕೆಂಡ್‌ಹಾಫ್’ ನಂತರ ಅನೇಕ ಕಥೆ ಕೇಳಿದರಂತೆ. ಅದರಲ್ಲಿ ತುಂಬಾ ಇಷ್ಟವಾದ ಕಥೆ ಇದಂತೆ. “ಈ ಚಿತ್ರದ ಮೂಲಕ ಪೂರ್ಣಪ್ರಮಾಣದ ನಾಯಕನಾಗುತ್ತಿದ್ದೇನೆ. ಹಾಡು, ಫೈಟ್‌ ಎಲ್ಲವೂ ಇದೆ’ ಎಂದಷ್ಟೇ ಹೇಳಿದರು ನಿರಂಜನ್‌. ಚಿತ್ರದಲ್ಲಿ ರಿಯಾ ರನ್ವಿಕಾ ನಾಯಕಿ. ಪಕ್ಕಾ ಹೋಮ್ಲಿ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಚಿತ್ರಕ್ಕೆ ಅಭಿಮಾನ್‌ರಾಯ್‌ ಸಂಗೀತವಿದೆ. ಈ ಚಿತ್ರವನ್ನು ಅಶ್ರಫ್ ಎನ್ನುವವರು ನಿರ್ಮಿಸುತ್ತಿದ್ದು, ರೋಶನ್‌, ನಟರಾಜ್‌ ಸಹ ನಿರ್ಮಾಪಕರಾಗಿದ್ದಾರೆ. 

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.