ಚಂದಾದಾರರ ಮಾತುಕತೆ


Team Udayavani, Nov 16, 2018, 6:00 AM IST

34.jpg

“ಈಗಿನ ಚಿತ್ರಗಳಲ್ಲಿ ಫೈಟು, ಕೊಲೆ, ಲವ್ವು ಈ ವಿಷಯಗಳೇ ಜಾಸ್ತಿ ತುಂಬಿವೆ. ಫ್ಯಾಮಿಲಿ ಬಂದು ಸಿನಿಮಾ ನೋಡುವಂತೆಯೇ ಇಲ್ಲ. ಇಂತಹ ಚಿತ್ರಗಳಿಗೆ ಹೊರತಾಗಿ ನಮ್ಮ ಚಿತ್ರ ಮೂಡಿಬಂದಿದೆ. ಎಲ್ಲರೂ ಬಂದು ನೋಡುವ ಚಿತ್ರ ಇದಾಗಲಿದೆ..’

– ಹೀಗೆ ಹೇಳಿದ್ದು, ನಿರ್ಮಾಪಕ ಸನತ್‌ಕುಮಾರ್‌. ಅವರು ಹೇಳಿಕೊಂಡಿದ್ದು “ನೀವು ಕರೆ ಮಾಡಿದ ಚಂದಾದಾರರು’ ಚಿತ್ರದ ಟ್ರೇಲರ್‌ ಬಿಡುಗಡೆ ಸಮಾರಂಭದಲ್ಲಿ. ಹಾಗಾದರೆ, ನಿಮ್ಮ ಚಿತ್ರದಲ್ಲಿ ಏನೆಲ್ಲಾ ಇದೆ? ಈ ಪ್ರಶ್ನೆಗೆ ಇಲ್ಲೂ ಫೈಟು, ಲವ್ವು ಇತ್ಯಾದಿ ಇದೆ ಎಂಬ ಉತ್ತರ ನಾಯಕಿ ಶಿಲ್ಪಾ ಮಂಜುನಾಥ್‌ ಅವರಿಂದ ಬಂತು. ಅದಕ್ಕೂ ಮೊದಲು ನಿರ್ಮಾಪಕರು, “ಈಗಿನ ಚಿತ್ರಗಳಲ್ಲಿ ಬರೀ ಫೈಟು, ಕೊಲೆ, ಲವ್ವು ಇತ್ಯಾದಿ ಅಂಶಗಳೇ ಇರುತ್ತವೆ. ಕುಟುಂಬ ಸಮೇತ ಸಿನಿಮಾ ನೋಡಲು ಆಗುವುದಿಲ್ಲ. ನಮ್ಮ ಚಿತ್ರ ಅದಕ್ಕೆ ಹೊರತಾಗಿದೆ. ಇಲ್ಲಿ ಅದ್ಯಾವುದೂ ಇರುವುದಿಲ್ಲ’ ಎನ್ನುವ ಮೂಲಕ ಗೊಂದಲಕ್ಕೆ ಕಾರಣರಾದರು. ಪತ್ರಕರ್ತರ ಪ್ರಶ್ನೆಗಳಿಗೆ, “ನೀವು ಸಿನಿಮಾ ನೋಡಿ, ಇಲ್ಲಿ ಕೊಲೆ ಇದೆ ಅಂತ ಹೇಳಿದರೆ, ಸಸ್ಪೆನ್ಸ್‌ ಹೊರಟು ಹೋಗುತ್ತೆ, ಲವ್‌ ಇದೆ ಅಂದರೆ ಕಥೆಯ ಗುಟ್ಟು ಬಿಟ್ಟಂತಾಗುತ್ತೆ, ನಾನು ಬೇರೆ ಯಾವ ಚಿತ್ರಗಳ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ’ ಅಂತ ಸಬೂಬು ಕೊಡಲು ಮುಂದಾದರಾದರೂ, ಪತ್ರಕರ್ತರಿಂದ ತೂರಿಬಂದ ಪ್ರಶ್ನೆಗೆ ವೇದಿಕೆ ಮೇಲೆ ನಿರೂಪಣೆ ಮಾಡುತ್ತಿದ್ದ ಅವರ ಪುತ್ರ ಉತ್ತರಿಸಲು ಮುಂದಾದರು. ಅವರ ಮಾತು ಕೇಳದ ಪತ್ರಕರ್ತರು, ನಿರ್ದೇಶಕರಿಗೆ ಮೈಕ್‌ ಕೊಡಿ ಅವರೇ ಎಲ್ಲವನ್ನೂ ಹೇಳಲಿ’ ಅಂದಿದ್ದಕ್ಕೆ ಪುನಃ ನಿರ್ಮಾಪಕರು ಮಾತಿಗಿಳಿದರು. “ಇಲ್ಲಿ ನಿರ್ದೇಶಕ, ನಿರ್ಮಾಪಕರ ತಪ್ಪಿದೆ. ಕಥೆ ಕೇಳಿ ಚಿತ್ರೀಕರಣವೂ ಆಗಿ, ಆಮೇಲೆ ಬೇರೆಯವರ ಸಲಹೆ ಮೇರೆಗೆ ರೀ ಶೂಟ್‌ ಮಾಡಲಾಗಿದೆ. ಇಲ್ಲಿ ಪೋಷಕರು ತಮ್ಮ ಮಕ್ಕಳನ್ನು ಪ್ರೀತಿಯಿಂದ ಸಾಕಿ, ಸಲಹುತ್ತಾರೆ ಆದರೆ, ಮಕ್ಕಳು ಅವರ ನಂಬಿಕೆ ಹಾಳುಗೆಡವುತ್ತಾರೆ. ಇದು ಕಮರ್ಷಿಯಲ್‌ ಚಿತ್ರ. ಉತ್ತರ ಕರ್ನಾಟಕ ಭಾಗದಲ್ಲಿ ನಡೆದ ಘಟನೆಗಳು ಚಿತ್ರಕ್ಕೆ ಸ್ಫೂರ್ತಿ” ಎಂಬ ವಿವರ ಕೊಟ್ಟರು ನಿರ್ಮಾಪಕರು.

ನಿರ್ದೇಶಕ ಮೋನೀಶ್‌ ಅವರಿಗೆ ಇದು ಮೊದಲ ಚಿತ್ರ. ಹದಿನೈದು ದಿನಗಳ ಕಾಲ ಕೂರ್ಗ್‌ನಲ್ಲಿ ಚಿತ್ರೀಕರಣ ನಡೆಸಿ, ಆಮೇಲೆ ಅದನ್ನು ಎಡಿಟ್‌ ಮಾಡಿ, ನೋಡಿದಾಗ, ನಿರ್ದೇಶಕರಿಗೆ ತೃಪ್ತಿ ಆಗಲಿಲ್ಲವಂತೆ. ಕೊನೆಗೆ ರೀಶೂಟ್‌ ಮಾಡಿ ಚಿತ್ರ ಮಾಡಿದ್ದಾರೆ. “ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಹೊಂದಿರುವ ಚಿತ್ರ. ನವೆಂಬರ್‌ 23 ರಂದು ತೆರೆಗೆ ಬರುತ್ತಿದೆ. ಇಲ್ಲೊಂದು ಸಂದೇಶವಿದೆ. ಅದನ್ನು ಚಿತ್ರದಲ್ಲೇ ನೋಡಿ’ ಅಂದರು ಮೋನೀಶ್‌. 

ನಾಯಕಿ ಶಿಲ್ಪಾ ಮಂಜುನಾಥ್‌ ಇಲ್ಲಿ ಹಳ್ಳಿ ಹುಡುಗಿಯಾಗಿ ನಟಿಸಿದ್ದಾರಂತೆ. ಇಲ್ಲಿ ಮನರಂಜನೆ ಜೊತೆಗೆ ಕುತೂಹಲ ಕೆರಳಿಸುವ ಅಂಶಗಳಿವೆ ಎಂಬುದು ಅವರ ಮಾತು. ಇನ್ನು, ಮೊದಲು ಈ ಚಿತ್ರಕ್ಕೆ ಬೇರೊಬ್ಬ ಸಂಗೀತ ನಿರ್ದೇಶಕರು ಹಿನ್ನೆಲೆ ಸಂಗೀತ ನೀಡಿದ್ದರಂತೆ. ಅವರ ಕೆಲಸ ಇಷ್ಟವಾಗದಿದ್ದರಿಂದ ನಿರ್ದೇಶಕರು, ಮ್ಯಾಥು ಮನು ಅವರಿಗೆ ಹಿನ್ನೆಲೆ ಸಂಗೀತದ ಜವಾಬ್ದಾರಿ ನೀಡಿದ್ದಾರಂತೆ. ಕೇಶವ ಚಂದ್ರ ಇಲ್ಲಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದರೆ, ಶ್ರೀನಿವಾಸ ಛಾಯಾಗ್ರಹಣವಿದೆ. ದಿಲೀಪ್‌ರಾಜ್‌ ಇಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಉಳಿದಂತೆ ಬಹುತೇಕ ಹೊಸ ಕಲಾವಿದರು ನಟಿಸಿದ್ದಾರೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.