ಮಠ ತುಂಬಾ ಹೊಸ ಬರ ಆಟ


Team Udayavani, Nov 16, 2018, 6:00 AM IST

35.jpg

ಗುರುಪ್ರಸಾದ್‌ ನಿರ್ದೇಶನದ “ಮಠ’ ಎಂಬ ಸಿನಿಮಾ ಬಂದಿದ್ದು, ದೊಡ್ಡ ಯಶಸ್ಸು ಕಂಡಿದ್ದು ನಿಮಗೆ ಗೊತ್ತೇ ಇದೆ. ಈಗ ಮತ್ತೂಮ್ಮೆ “ಮಠ’ ಸರದಿ. ಹೌದು, “ಮಠ’ ಎಂಬ ಸಿನಿಮಾವೊಂದು ಇತ್ತೀಚೆಗೆ ಮುಹೂರ್ತ ಕಂಡಿದೆ. ಚಿತ್ರದ ಟೈಟಲ್‌ ಫಾಂಟ್‌ ನೋಡಿದಾಗ ಗುರುಪ್ರಸಾದ್‌ “ಮಠ’ಕ್ಕೂ ಹೊಸಬರ “ಮಠ’ಕ್ಕೂ ಯಾವುದೇ ವ್ಯತ್ಯಾಸವಿಲ್ಲದಂತೆ ಕಂಡರೂ, ಚಿತ್ರತಂಡ ಹೇಳುವಂತೆ ಆ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲವಂತೆ.

ರವೀಂದ್ರ ವೆಂಶಿ ಈ ಚಿತ್ರದ ನಿರ್ದೇಶಕರು. ತರಂಗ ಸಂತೋಷ್‌ ಈ ಚಿತ್ರದ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರವಾಗಲು ಕಾರಣ ಕೂಡಾ ತರಂಗ ಸಂತೋಷ್‌. ಸಂತೋಷ್‌ ಅವರು ಸುಮಾರು 3 ಸಾವಿರ ಮಠಗಳಿಗೆ ಭೇಟಿ ನೀಡಿ ಅಲ್ಲಿನ ಸ್ವಾಮೀಜಿಗಳನ್ನು ಮಾತನಾಡಿಸಿದ್ದಾರೆ. ಈ ಭೇಟಿ ವೇಳೆ ಅವರಿಗೆ ಸಾಕಷ್ಟು ವಿಭಿನ್ನ ಅನುಭವಗಳಾಗಿವೆ. ಆ ಅನುಭವಗಳನ್ನು ನಿರ್ದೇಶಕ ರವೀಂದ್ರ ವೆಂಶಿ ಅವರಿಗೆ ಹೇಳಿದಾಗ, ಅದನ್ನು ಸಿನಿಮಾ ಮಾಡಲು ಮುಂದಾದರಂತೆ. ಈ ಮೂಲಕ “ಮಠ’ ಸಿನಿಮಾವಾಗಿದೆ. ಎಲ್ಲಾ ಓಕೆ ಚಿತ್ರಕ್ಕೆ “ಮಠ’ ಟೈಟಲ್‌ ಯಾಕೆ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ನಿರ್ದೇಶಕ ರವೀಂದ್ರ ಅವರು ಹೇಳುವಂತೆ, ಅವರಿಗೆ ಮಠ ಎಂಬ ಟೈಟಲ್‌ ಇಡುವ, ಯಶಸ್ವಿ ಚಿತ್ರವೊಂದರ ಲಾಭ ಪಡೆಯುವ ಯಾವುದೇ ಉದ್ದೇಶವಿಲ್ಲವಂತೆ. ಆದರೆ, ಕಥೆ ಹಿನ್ನೆಲೆಯನ್ನು ಸೂಚಿಸಲು ಬೇರೆ ಯಾವುದೇ ಶೀರ್ಷಿಕೆ ಸೂಕ್ತವಲ್ಲದ ಕಾರಣ ಕೊನೆಗೆ “ಮಠ’ ಎಂದಿಟ್ಟಿದ್ದಾಗಿ ಹೇಳುತ್ತಾರೆ. ಇಡೀ ಸಿನಿಮಾ ಹಾಸ್ಯದ ಹಿನ್ನೆಲೆಯಲ್ಲಿ ಸಾಗಲಿದ್ದು, ಮಠಗಳ ಕುರಿತಾದ ಸಾಕಷ್ಟು ಅಂಶಗಳನ್ನು ಹೇಳಲಿದ್ದಾರಂತೆ. ಹಾಗಾಗಿ, ಒಳ್ಳೆಯದು, ಕೆಟ್ಟದು ಎರಡೂ ಸಿನಿಮಾದಲ್ಲಿ ಬಂದು ಹೋಗಲಿದೆ ಎನ್ನುವುದು ಅವರ ಮಾತು. 30 ಜಿಲ್ಲೆಗಳಲ್ಲಿ ಚಿತ್ರೀಕರಣ ಮಾಡುವ ಉದ್ದೇಶ ನಿರ್ದೇಶಕರಿಗಿದೆ. ಚಿತ್ರದಲ್ಲಿ ಯಾವುದೇ ಇಮೇಜ್‌ ಇರದ ಹೊಸ ಕಲಾವಿದರಿಗೆ ಅವಕಾಶ ಕೊಡುವ ಉದ್ದೇಶ ನಿರ್ದೇಶಕರಿಗಿದೆ. ಚಿತ್ರದಲ್ಲಿ ಹಾಡುಗಳ ಜೊತೆ 8 ಜಾನಪದ ಗೀತೆಗಳನ್ನು ಸಂದರ್ಭಕ್ಕೆ ತಕ್ಕಂತೆ ಬಳಸಿಕೊಳ್ಳುವ ಉದ್ದೇಶ ಕೂಡಾ ನಿರ್ದೇಶಕರಿಗಿದೆ. 

ಚಿತ್ರದಲ್ಲಿ ನಟಿಸುತ್ತಿರುವ ಸಂತೋಷ್‌ ತಮ್ಮ ಅನುಭವ ಹಂಚಿಕೊಂಡರು. ಹಲವು ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿ ಅನುಭವವಿರುವ ಸಂತೋಷ್‌ಗೆ ಇಲ್ಲಿ ಪ್ರಮುಖ ಪಾತ್ರ ಸಿಕ್ಕಿದೆ. ಚಿತ್ರವನ್ನು ರಮೇಶ್‌ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಶ್ರೀ ಗುರು ಸಂಗೀತ, ಜೀವನ ಛಾಯಾಗ್ರಹಣ, ಸಿ.ರವಿಚಂದ್ರನ್‌ ಸಂಕಲನವಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Kannada Actress; ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.