ಸಸ್ಪೆನ್ಸ್‌ ಕಣ್ಣು


Team Udayavani, Nov 16, 2018, 6:00 AM IST

39.jpg

“ನಾನು ಈ ಸಿನಿಮಾದ ಹೀರೋ ಅಲ್ಲ, ರಾಜಕುಮಾರ್‌ ಮಗ ಅನ್ನೋ ಕಾರಣಕ್ಕೆ ನನ್ನನ್ನು ಹೀರೋ ಅಂತಿದ್ದಾರಷ್ಟೇ …’
– ಹೀಗೆ ಹೇಳಿ ಪಕ್ಕದಲ್ಲಿ ಕುಳಿತಿದ್ದ ನಿರ್ದೇಶಕ ದಯಾಳ್‌ ಪದ್ಮನಾಭನ್‌ ಅವರ ಮುಖ ನೋಡಿದರು ರಾಘವೇಂದ್ರ ರಾಜಕುಮಾರ್‌. ದಯಾಳ್‌  ನಕ್ಕರು. ರಾಘವೇಂದ್ರ ರಾಜಕುಮಾರ್‌ ಇರುವುದೇ ಹಾಗೆ. ಅವರದು ಸರಳ ವ್ಯಕ್ತಿತ್ವ. ತಮಗೆ ಅನಿಸಿದ್ದನ್ನು ನೇರವಾಗಿ ಹೇಳುತ್ತಾರೆ. ಇಷ್ಟವಾದ ಸಿನಿಮಾ, ಕಥೆಗಳನ್ನು ಪ್ರೋತ್ಸಾಹಿಸುತ್ತಾರೆ. ಕಥೆ ಮನಸಿಗೆ ನಾಟಿದರೆ ಆ ಕಥೆಯಲ್ಲಿ ತಾನೊಂದು ಪಾತ್ರವಾಗಬೇಕೆಂದು ಬಯಸುತ್ತಾರೆ. ಅಂದು ರಾಘವೇಂದ್ರ ರಾಜಕುಮಾರ್‌ ಅವರ ಮಾತಿಗೂ ಕಾರಣವಾಗಿದ್ದು, ಅವರ ಆಸೆ, ತಾನೊಂದು ಪಾತ್ರವಾಗಬೇಕೆಂಬ ಬಯಕೆ. ಅವರ ಬಯಕೆಗೆ ಕಾರಣ “ತ್ರಯಂಬಕಂ’. ಇದು ರಾಘವೇಂದ್ರ ರಾಜಕುಮಾರ್‌ ನಟಿಸುತ್ತಿರುವ ಸಿನಿಮಾ. ನಿಮಗೆ ಗೊತ್ತಿರುವಂತೆ ರಾಘವೇಂದ್ರ ರಾಜಕುಮಾರ್‌ ಅವರು ಒಂದು ದೊಡ್ಡ ಗ್ಯಾಪ್‌ನ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಈ ಮೂಲಕ ಚಿತ್ರರಂಗದಲ್ಲಿ ಮತ್ತೆ ಆ್ಯಕ್ಟೀವ್‌ ಆಗಿದ್ದಾರೆ. ಈಗಾಗಲೇ ಒಂದೆರಡು ಸಿನಿಮಾಗಳಲ್ಲಿ ನಟಿಸುತ್ತಿರುವ ರಾಘಣ್ಣ ಈಗ “ತ್ರಯಂಬಕಂ’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಇತ್ತೀಚೆಗೆ ಪುನೀತ್‌ ರಾಜಕುಮಾರ್‌ ಚಾಲನೆ ನೀಡಿದರು. 

ಎಲ್ಲಾ ಓಕೆ, ರಾಘಣ್ಣ ಈ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಇದಕ್ಕೂ ಕಾರಣ ಉತ್ತರಿಸುತ್ತಾರೆ. “ತುಂಬಾ ಒಳ್ಳೆಯ ಕಥೆಯಿದು. ಕಥೆ ಕೇಳಿದಾಗ ಈ ಕಥೆಯಲ್ಲಿ ನಾನಿರಬೇಕಿತ್ತೆಂಬ ಆಸೆಯಿಂದ ಒಪ್ಪಿಕೊಂಡೆ. ನಿಜ ಹೇಳಬೇಕೆಂದರೆ ನಾನು ಈ ಚಿತ್ರದ ಹೀರೋ ಅಲ್ಲ, ಪ್ರಮುಖ ಪಾತ್ರವೊಂದನ್ನು ಮಾಡುತ್ತಿದ್ದೇನಷ್ಟೇ. ಇಡೀ ಸಿನಿಮಾ ಮೂರು ಪಾತ್ರಗಳ ಸುತ್ತ ಸಾಗುತ್ತದೆ. ನಾನಿಲ್ಲಿ ತಂದೆಯಾಗಿ ನಟಿಸುತ್ತಿದ್ದೇನೆ. ಇದೊಂದು ಒಳ್ಳೆಯ ಸಿನಿಮಾವಾಗುವ ವಿಶ್ವಾಸವಿದೆ’ ಎಂದರು ರಾಘವೇಂದ್ರ ರಾಜಕುಮಾರ್‌. ತಂದೆ ಪಾತ್ರ ಎಂದ ಕೂಡಲೇ ಹಾಗೆ ಬಂದು ಹೀಗೆ ಹೋಗುವ ತಂದೆ ಎಂದು ಭಾವಿಸುವಂತಿಲ್ಲ. ಅವರ ಪಾತ್ರ ಹಲವು ಟ್ವಿಸ್ಟ್‌ಗಳೊಂದಿಗೆ ಸಾಗುತ್ತದೆ.

ನಿರ್ದೇಶಕ ದಯಾಳ್‌ ಖುಷಿಯಾಗಿದ್ದರು. ಅದಕ್ಕೆ ಕಾರಣ ಅವರ ತುಂಬಾ ದಿನಗಳ ಆಸೆ ಈಡೇರುತ್ತಿರುವುದು. ದಯಾಳ್‌ ಶಿವಭಕ್ತ. ಅವರಿಗೆ ಶಿವನ ಕುರಿತಾಗಿ ಸಿನಿಮಾ ಮಾಡಬೇಕೆಂಬ ಆಸೆ ತುಂಬಾ ದಿನಗಳಿಂದ ಇತ್ತಂತೆ. ಅದು ಈಗ “ತ್ರಯಂಬಕಂ’ ಮೂಲಕ ಈಡೇರುತ್ತಿದೆ. “ಇದು ಸೈಕಲಾಜಿಕಲ್‌ ಥ್ರಿಲ್ಲರ್‌ ಸಿನಿಮಾ. ಚಿತ್ರಕ್ಕೆ ಟೈಟಲ್‌ ಇಡಲು ಒಂದು ಕಾರಣವೂ ಇದೆ. ಅದು ಮೂರನೇ ಕಣ್ಣು. ನಾವು ಏನೇ  ಮಾಡಿದರೂ ಯಾರಾದರೊಬ್ಬರು ನಮ್ಮನ್ನು ಗಮನಿಸುತ್ತಿರುತ್ತಾರೆ. ಅದೇ ಕಾರಣದಿಂದ “ತ್ರಯಂಬಕಂ’ ಎಂದು ಟೈಟಲ್‌ ಇಟ್ಟಿದ್ದೇವೆ. ಚಿತ್ರದಲ್ಲಿ ಶಿವ, ಶಿವಲಿಂಗದ ಕುರಿತಾದ ಹಲವು ಅಂಶಗಳನ್ನು ಹೇಳುತ್ತಿದ್ದೇವೆ. ಭಕ್ತಿಪ್ರಧಾನ ಹಾಗೂ ಐತಿಹಾಸಿಕ ಅಂಶಗಳ ಮಿಶ್ರಣ ಕೂಡಾ ಚಿತ್ರದಲ್ಲಿದೆ’ ಎಂದು ಖುಷಿಯಿಂದ ಹೇಳಿಕೊಂಡರು ದಯಾಳ್‌. 

ಚಿತ್ರದಲ್ಲಿ ಅನುಪಮಾ ಹಾಗೂ ಆರ್‌ಜೆ ರೋಹಿತ್‌ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. “ಆ ಕರಾಳ ರಾತ್ರಿ’ ಚಿತ್ರದ ನಂತರ ಮತ್ತೂಮ್ಮೆ ದಯಾಳ್‌ ಸಿನಿಮಾದಲ್ಲಿ ನಟಿಸುತ್ತಿರುವ ಖುಷಿ ಹಾಗೂ ರಾಘಣ್ಣ ಅವರ ಜೊತೆ ಮೊದಲ ಬಾರಿಗೆ ನಟಿಸುತ್ತಿರುವ ಎಕ್ಸೆ„ಟ್‌ಮೆಂಟ್‌ ಬಗ್ಗೆ ಅನುಪಮಾ ಮಾತನಾಡಿದರು. ದಯಾಳ್‌ ಅವರು ಹೇಳಿದ್ದನ್ನು ಮಾಡಿ ತೋರಿಸುವ ನಿರ್ದೇಶಕನಾಗಿದ್ದರಿಂದ ಸಿನಿಮಾ, ಪಾತ್ರದ ಮೇಲೆ ರೋಹಿತ್‌ಗೆ ಭರವಸೆ ಇದೆಯಂತೆ. ಉಳಿದಂತೆ ಚಿತ್ರದಲ್ಲಿ ಶಿವಮಣಿ, ಅಮಿತ್‌, ಸಿಹಿಕಹಿ ಚಂದ್ರು ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಚಿತ್ರಕ್ಕೆ ನವೀನ್‌ ಕೃಷ್ಣ ಸಂಭಾಷಣೆ ಇದೆ. ಈ ಚಿತ್ರದ ಕಥೆ ತುಂಬಾ ಕ್ಲಿಷ್ಟವಾಗಿದ್ದರಿಂದ ಸಂಭಾಷಣೆಗೂ ಸಾಕಷ್ಟು ಸಮಯ ಹಿಡಿಯಿತಂತೆ. ಅಂದಹಾಗೆ, ಚಿತ್ರದ ಸ್ಟೋರಿ ಕಾನ್ಸೆಪ್ಟ್ ಸಂದೀಪ್‌ ಹಾಗೂ ಸ್ವಾಮಿ ಅವರದ್ದಾಗಿದ್ದು, ಫ್ಯೂಚರ್‌ ಎಂಟರ್‌ಟೈನ್‌ಮೆಂಟ್‌ ಫಿಲಂಸ್‌ನಡಿ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ಗಣೇಶ್‌ ನಾರಾಯಣ್‌ ಸಂಗೀತ, ರಾಕೇಶ್‌ ಛಾಯಾಗ್ರಹಣ, ಕ್ರೇಜಿಮೈಂಡ್‌ ಶ್ರೀ ಸಂಕಲನವಿದೆ. ಅವಿನಾಶ್‌ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. 

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.