ಸಮಾಜಕ್ಕೊಂದು ಸೌಹಾರ್ದ ಸಂದೇಶ ಟಿಪು ಟಿಪ್ಸ್‌


Team Udayavani, Nov 23, 2018, 6:00 AM IST

26.jpg

ಎಲ್ಲರಿಗೂ “ಟಿಪ್ಪುಸುಲ್ತಾನ್‌’ ಗೊತ್ತು. ಆದರೆ, “ಟಿಪ್ಪುವರ್ಧನ್‌’ ಗೊತ್ತಾ? – ಹೀಗೆಂದಾಕ್ಷಣ, ಸಣ್ಣ ಪ್ರಶ್ನೆ ಮೂಡಬಹುದು. ವಿಷಯವಿಷ್ಟೇ, “ಟಿಪ್ಪುವರ್ಧನ್‌’ ಎಂಬುದು ಸಿನಿಮಾ ಹೆಸರು. ಅಷ್ಟೇ ಅಲ್ಲ, ಆ ಚಿತ್ರದ ನಿರ್ದೇಶಕರ ಹೆಸರೂ ಕೂಡ. ಎಂ.ಟಿಪ್ಪುವರ್ಧನ್‌ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಜೊತೆಗೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಿದ್ದರು ಟಿಪ್ಪುವರ್ಧನ್‌. ಸಿನಿ ಮ್ಯೂಸಿಕ್‌ ಮೂಲಕ ಆಡಿಯೋ ಸಿಡಿ ಬಿಡುಗಡೆ ಮಾಡಲಾಯಿತು. ಅದು ಕೇವಲ ಆಡಿಯೋ ಸಿಡಿ ಮಾತ್ರವಲ್ಲ, ಅಂದು “ಅನುಭವಿಸಿ’ ಮತ್ತು “ಮಾನವೀಯತೆ’ ಎಂಬ ಎರಡು ಪುಸ್ತಕ ಬಿಡುಗಡೆ ಕಾರ್ಯಕ್ರಮವಾಗಿಯೂ ಮಾರ್ಪಟ್ಟಿತ್ತು. ಆಡಿಯೋ ಸಿಡಿ ಬಿಡುಗಡೆಗೂ ಮುನ್ನ, ತೆರೆಯ ಮೇಲೆ ಟ್ರೇಲರ್‌, ಹಾಡು ತೋರಿಸಲಾಯಿತು. ಆ ಬಳಿಕ ವೇದಿಕೆ ಮೇಲೆ ಚಿತ್ರತಂಡದವರನ್ನು ಕರೆಸಿದ ಟಿಪ್ಪುವರ್ಧನ್‌, ತಮ್ಮ ಚಿತ್ರದ ಬಗ್ಗೆ ಮಾತಿಗೆ ನಿಂತರು. “ಇದೊಂದು ಸೌಹಾರ್ದ ಸಾರುವ ಕಥೆ ಹೊಂದಿದೆ. ಇಬ್ಬರು ಗೆಳೆಯರ ಸಮಾಜ ಸುಧಾರಣೆ ಹೋರಾಟ ಚಿತ್ರದ ಮುಖ್ಯ ಸಾರಾಂಶ. ರಾಜಕೀಯದಲ್ಲಿ ವಿನಾಕಾರಣ, ರಾಜಕಾರಣ ಮಾಡಿ ಸಮಾಜದ ಶಾಂತಿ ಹದಗೆಟ್ಟು, ಸಮಾಜ ಹಾಳಾಗುತ್ತೆ. ಅದು ಬೇಡ ಎಂಬ ವಿಷಯ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಪೊಲೀಸ್‌, ಪತ್ರಕರ್ತರು, ಪೊಲಿಟಿಷಿಯನ್ಸ್‌ ಈ ಮೂವರು ಸರಿಯಾಗಿದ್ದರೆ ಸಮಾಜ ಗಟ್ಟಿಯಾಗುತ್ತೆ ಎಂಬ ಸಂದೇಶದ ಜೊತೆಗೆ ಪ್ರೀತಿ, ಸೆಂಟಿಮೆಂಟ್‌, ಹಾಸ್ಯ ಎಲ್ಲವೂ ಇಲ್ಲಿ ಮೇಳೈಸಿದೆ. ಇನ್ನು, ಈ ಚಿತ್ರದ ಮೂಲಕ ನಾಯಕ, ನಾಯಕಿ ಇಬ್ಬರರನ್ನು ಪರಿಚಯಿಸಲಾಗಿದೆ. ಬಹುತೇಕ ಹೊಸಬರೇ ಸೇರಿ ಮಾಡಿದ ಚಿತ್ರವಿದು. ನಿಮ್ಮ ಸಹಕಾರ ಇರಲಿ’ ಅಂದರು ಟಿಪ್ಪುವರ್ಧನ್‌. ಚಿತ್ರದ ನಾಯಕ ಕೇಶವ್‌ ಅವಕಾಶ ಕೊಟ್ಟ ನಿರ್ದೇಶಕರಿಗೆ ಥ್ಯಾಂಕ್ಸ್‌ ಹೇಳಿದರೆ, ವಿಶೇಷ ಪಾತ್ರ ನಿರ್ವಹಿಸಿರುವ ಚಿಕ್ಕ ಹೆಜ್ಜಾಜಿ ಮಹದೇವ್‌, ಇದೊಂದು ಸಮಾಜಕ್ಕೆ ಸಂದೇಶ ಕೊಡುವ ಚಿತ್ರವಾಗಿದ್ದು, ಎಲ್ಲರೂ ಸಹಕಾರ ಕೊಡಬೇಕು ಎಂಬ ಮನವಿ ಇಟ್ಟರು. ಚಿತ್ರಕ್ಕೆ ಆರ್‌.ಬಿ.ನದಾಫ್ ನಿರ್ಮಾಪಕರು. ದಾಮೋದರ್‌ ಸಂಗೀತವಿದೆ. ಸುರೇಶ್‌ ಚಂದ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸುಧಾಕರ್‌ ಬಾಬು ಛಾಯಾಗ್ರಹಣ ಮಾಡಿದ್ದಾರೆ. ಚಿತ್ರದಲ್ಲಿ ಮೈಕಲ್‌ ಮಧು, ಜೈ ಕುಮಾರ್‌, ಮಂಜು, ರಮ್ಯಾ, ಗೀತಪ್ರಿಯ, ಇನ್ಸಾಫ್ಖಾನ್‌, ಮಾಸ್ಟರ್‌ ಸೂರ್‌ ಮತ್ತು ಮಾಸ್ಟರ್‌ ಮನ್ವಿತ್‌ ನಟಿಸಿದ್ದಾರೆ.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.