ರಂಗು ರಂಗಿನ ಹಾಡು


Team Udayavani, Nov 23, 2018, 6:00 AM IST

27.jpg

ಹರೆಯದ ಹುಡುಗರ ಜೀವನ, ಬಯಕೆ, ಯೋಚನೆ, ಹಾವ-ಭಾವ ಎಲ್ಲವೂ ರಂಗು ರಂಗಾಗಿರುತ್ತದೆ. ಇಂಥ ರಂಗಿನ ಹುಡುಗರ ನವಿರಾದ ಕಥೆಯೊಂದು ಈಗ, “ರಂಗಾದ ಹುಡುಗರು’ ಹೆಸರಿನಲ್ಲಿ ಚಿತ್ರವಾಗಿ ತೆರೆಗೆ ಮೇಲೆ ಬರುತ್ತಿದೆ. ಈಗಾಗಲೇ ಈ ಚಿತ್ರದ ಶೂಟಿಂಗ್‌, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ಹಾಡುಗಳನ್ನು ಬಿಡುಗಡೆಗೊಳಿಸುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ. 

ಇತ್ತೀಚೆಗೆ ನಡೆದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಹಿರಿಯ ನಿರ್ದೇಶಕ ಎಸ್‌.ಮಹೇಂದರ್‌ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್‌ ಆಗಮಿಸಿ, ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. 

ಇದೇ ವೇಳೆ ಮಾತನಾಡಿದ ನಿರ್ದೇಶಕ ಎಸ್‌. ಮಹೇಂದರ್‌, “ನನಗೆ ಜೀವದಲ್ಲಿ ಒಳ್ಳೆಯದನ್ನು ಯೋಚನೆ ಮಾಡೋದು ಬಿಟ್ಟರೆ ಬೇರೇನೂ ಗೊತ್ತಿಲ್ಲ. ಭಗವಂತನ ಮೇಲೆ ಆಣೆ, ನನಗೆ ಪಾಸಿಟಿವ್‌ ಯೋಚನೆಗಳೇ ಜಾಸ್ತಿ. ಎಲ್ಲೋ ಕೊಳ್ಳೇಗಾಲದ ಮೂಲೆಯಿಂದ ಬಂದ ನಂಗೆ ಈ ಚಿತ್ರರಂಗ ಅನ್ನ ಕೊಟ್ಟಿದೆ. ಹಾಗೆ ಈಗಿನ ಯುವಕರು ಸಿಕ್ಕ ಅವಕಾಶವನ್ನು ಪರಿಪೂರ್ಣವಾಗಿ ಉಪಯೋಗಿಸಿಕೊಳ್ಳಬೇಕು. ಶೋಕಿಗಾಗಿ ಸಿನಿಮಾ ಬೇಡ. ಸಮಚಿತ್ತವನ್ನು ಕಾಪಾಡಿಕೊಳ್ಳಿ. ಸಿನಿಮಾ ಉದ್ಯಮ ಡಾಕ್ಟರ್‌, ಎಂಜಿನಿಯಿರಿಂಗ್‌ ವೃತ್ತಿ ಇದ್ದ ಹಾಗೆ ಅಲ್ಲ. ಪ್ರತಿ ದಿನ ಹೊಸದನ್ನು ಕೊಡುತ್ತಾ ಇರಬೇಕು. ಅದು ಹೋರಾಟ ಇದ್ದ ಹಾಗೆ. ಅದಕ್ಕೇ ಹೇಳ್ಳೋದು ಇಲ್ಲಿ ಗೆದ್ದವನೇ ಸ್ಟಾರ್‌. ಈಗಿನ ಯುವಕರು ಕನ್ನಡ ಚಿತ್ರರಂಗದ ರಥವನ್ನು ಬಹಳ ಚಾಕಚಕ್ಯತೆಯಿಂದ ಎಳೆಯಬೇಕು. ಇದುವರೆಗೂ ನಾವು ಈ ರಥವನ್ನು ಎಳೆದಿದ್ದೇವೆ. ಇದು ಕಷ್ಟಕರ ಎನ್ನುವುದು ನೆನಪಿರಲಿ. ಸಿಗುವ ಒಂದೊಂದು ಅವಕಾಶವು ದೊಡ್ಡದು ಎಂದು ಭಾವಿಸಬೇಕು’ ಎಂದು ಹೊಸ ತಂಡಕ್ಕೆ ಕಿವಿಮಾತು ಹೇಳಿದರು.

 ಇನ್ನು “ರಂಗಾದ ಹುಡುಗರು’ ಚಿತ್ರದಲ್ಲಿ ಮೂರು ಹಾಡುಗಳಿದ್ದು, ಸೇನಾಪತಿ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಚಿಕ್ಕಮಗಳೂರಿನ ಸುಂದರತಾಣಗಳಲ್ಲಿ ಚಿತ್ರದ ಹಾಡಿನ ಚಿತ್ರೀಕರಣ ನಡೆಸಲಾಗಿದೆ.  ಮೂವರು ಹೊಸ ಹುಡುಗರು ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಗರ್‌, ಪ್ರಖ್ಯಾತ್‌ ಅಮ್ರಿನ್‌ ಕುನಾಲ್‌, ಶ್ಯಾಮ್‌ ಪೊನ್ನಪ್ಪ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ರಂಗಾದ ಹುಡುಗರು’ ಚಿತ್ರವನ್ನು ಯು.ಎಸ್‌ ತೇಜಸ್‌ ಕುಮಾರ್‌ ನಿರ್ದೇಶನ ಮಾಡಿದ್ದಾರೆ. ಹೊಸಬರ ಈ ಚಿತ್ರಕ್ಕೆ ಬಸವರಾಜ್‌ ನಿರ್ಮಾಪಕರಾಗಿ ಬಂಡವಾಳ ಹೂಡಿದ್ದಾರೆ. ಕಲರ್‌ಫ‌ುಲ್‌ ಶೀರ್ಷಿಕೆ ಹೊಂದಿರುವ “ರಂಗಾದ ಹುಡುಗರು’ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು ಮುಂಬರುವ ಡಿಸೆಂಬರ್‌ 3ರಂದು  ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್‌ ಮಾಡಿದೆ. ಒಟ್ಟಾರೆ “ರಂಗಾದ ಹುಡುಗರು’ ಪ್ರೇಕ್ಷಕರನ್ನು ಯಾವ ರೀತಿ ರಂಜಿಸುತ್ತಾರೆ ಎಂಬುದು ಡಿಸೆಂಬರ್‌ ಮೊದಲ ವಾರದಲ್ಲಿ ಗೊತ್ತಾಗಲಿದೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.