ಚಿತ್ರಮಂದಿರದ ಬಾಗಿಲು ತಟ್ಟುಲು ಅಜ್ಜ ರೆಡಿ


Team Udayavani, Nov 30, 2018, 6:00 AM IST

27.jpg

ಎಲ್ಲ ಅಂದುಕೊಂಡಂತೆ ಆಗಿದ್ದರೆ, ಕಾದಂಬರಿ ಆಧಾರಿತ “ಅಜ್ಜ’ ಚಿತ್ರ ಈ ವಾರ ತೆರೆಗೆ ಬರಬೇಕಿತ್ತು. ಸಾಲು ಸಾಲು ಚಿತ್ರಗಳಿದ್ದರೂ, ಚಿತ್ರದಲ್ಲಿ ಅಪರೂಪದ ಕಥೆ ಇರುವ ಅಜ್ಜನನ್ನು ಇದೇ ನವೆಂಬರ್‌ ಕೊನೆಯೋಲಗೆ ಪ್ರೇಕ್ಷಕರ ಮುಂದೆ ತರುವುದಾಗಿ ಚಿತ್ರತಂಡ ಘೋಷಿಸಿತ್ತು. ಆದರೆ, ನಟ ಅಂಬರೀಶ್‌ ನಿಧನರಾದ ಹಿನ್ನೆಲೆಯಲ್ಲಿ ಅವರ ಶೋಕಾರ್ಥ, ಅಘೋಷಿತವಾಗಿ ಚಿತ್ರರಂಗದ ಬಹುತೇಕ ಚಟುವಟಿಕೆಗಳು ಕಳೆದ ಮೂರ್‍ನಾಲ್ಕು ದಿನಗಳಿಂದ ಬಂದ್‌ ಆಗಿರುವುದರಿಂದ, ಇಡೀ ಚಿತ್ರರಂಗವೇ ಈ ದುಃಖದಲ್ಲಿ ಭಾಗಿಯಾಗಿರುವುದರಿಂದ “ಅಜ್ಜ’ ಚಿತ್ರತಂಡ ಚಿತ್ರದ ಬಿಡುಗಡೆಯನ್ನು ಮುಂದೂಡಿದೆ.

ಇನ್ನು “ಅಜ್ಜ’ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಹಿರಿಯ ನಟ ದತ್ತಣ್ಣ ಬಣ್ಣ ಹಚ್ಚಿದ್ದಾರೆ. ಇತ್ತೀಚೆಗೆ ಚಿತ್ರದ ಬಿಡುಗಡೆ ಪೂರ್ವ ಸುದ್ದಿಗೋಷ್ಟಿಯನ್ನು ನಡೆಸಿದ್ದ ಚಿತ್ರತಂಡ, “ಅಜ್ಜ’ನ ಕೆಲ ವಿಶೇಷತೆಗಳ ಕುರಿತು ಮಾತನಾಡಿದೆ. 

“ಅಜ್ಜ’ ಕಾದಂಬರಿ ಆಧಾರಿತ ಚಿತ್ರವಾಗಿದ್ದು ಇದರಲ್ಲಿ ಹಾರರ್‌, ಥ್ರಿಲ್ಲರ್‌, ಕಥಾಹಂದರವನ್ನು ಹೊಂದಿದೆ. ಜೊತೆಗೆ ಸಾಮಾಜಿಕ ಕಳಕಳಿ ಇರುವ ಸಂದೇಶ ಕೂಡ ಚಿತ್ರದಲ್ಲಿದೆ. ಮೆಡಿಕಲ್‌ ವಿದ್ಯಾರ್ಥಿಗಳಿಗೆ  ಕನಿಷ್ಟ  ಒಂದು ವರ್ಷ ಗ್ರಾಮೀಣ ಸೇವೆ ಕಡ್ಡಾಯ ಎಂಬ ಸರಕಾರದ ನಿರ್ದೇಶನದಂತೆ ನಾಲ್ವರು ಯುವ ವೈದ್ಯರು ಯಾವುದೇ ಮೂಲಭೂತ ಸೌಕರ್ಯವಿಲ್ಲದ ಗ್ರಾಮೀಣ ಪ್ರದೇಶವೊಂದಕ್ಕೆ ಶುಶ್ರೂಷೆ ಮಾಡಲು ಹೋಗುತ್ತಾರೆ. ಆ ಅಪರಿಚಿತ ಸ್ಥಳದಲ್ಲಿ ಈ ನಾಲ್ವರು ಅನಿರೀಕ್ಷಿತವಾಗಿ ದುರಂತಕ್ಕೆ ಸಿಕ್ಕಿ ಹಾಕಿಕೊಳ್ತಾರೆ. ಅಲ್ಲಿ ಇವರಿಗೆ ಅಜ್ಜ, ಮೊಮ್ಮಗಳು ಇಬ್ಬರು ಸಿಗುತ್ತಾರೆ.  ಮುಂದೇನಾಗುತ್ತದೆ ಎಂಬುದೇ ಚಿತ್ರದ ಕಥೆಯ ಎಳೆ. ಅದನ್ನು ಚಿತ್ರಮಂದಿರದಲ್ಲೇ ನೋಡಬೇಕು’  ಎನ್ನುತ್ತಾರೆ “ಅಜ್ಜ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ  ವೇಮಗಲ್‌ ಜಗನ್ನಾಥ್‌. 

ಚಿತ್ರದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿರುವ ಹಿರಿಯ ನಟ ದತ್ತಣ್ಣ, “ವಾಸ್ತವ ಮತ್ತು ಭ್ರಮೆ ಇವುಗಳಲ್ಲಿ ಗಂಡ-ಹೆಂಡತಿ ಅನ್ನೋನ್ಯತೆ, ತಂದೆ-ಮಗನ ಸಂಬಂಧ ಹೀಗೆ ಅನೇಕ ಪಾತ್ರಗಳು ಇವತ್ತಿನ ಯುವ ಜನಾಂಗವನ್ನು ಪ್ರತಿನಿಧಿಸುತ್ತವೆ. ಅಜ್ಜ ಉಳಿದುಕೊಂಡಿರುವ ಜಾಗವನ್ನು ಕಬಳಿಸಲು ದುರುಳರ ತಂಡವೊಂದು ಬರುವುದು. ನಮ್ಮ ಕಾಲಘಟ್ಟದ ರಾಜಕೀಯ, ಯುವ ಪೀಳಿಗೆಯು ಯಾವ ರೀತಿ ಕೆಲಸ ನಿರ್ವಹಿಸುತ್ತಿದ್ದಾರೆ. ಎಂಬ ಹಲವು ಅಂಶಗಳೊಂದಿಗೆ ಸಿನಿಮಾ ಸಾಗುತ್ತದೆ. ಚಿತ್ರದಲ್ಲಿ ನನ್ನ ಪಾತ್ರವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರಕ್ಕೆ ಪ್ರಶಸ್ತಿ ಬರಬಹುದು ಎಂದು ಹಲವರು ಹೇಳುತ್ತಿದ್ದಾರೆ ಅದು ಜನರಿಗೆ ಬಿಟ್ಟಿದ್ದು’ ಎನ್ನುತ್ತಾರೆ.

“ಅಜ್ಜ’ ಚಿತ್ರದಲ್ಲಿ “ಅಜ್ಜ’ನ ಪಾತ್ರವನ್ನು ದತ್ತಣ್ಣ ನಿರ್ವಹಿಸಿದರೆ, ಮೊಮ್ಮಗಳ ಪಾತ್ರವನ್ನು ಪೃಥ್ವಿಶ್ರೀ ನಿರ್ವಹಿಸಿದ್ದಾರೆ. ಲತೀಶ್‌ ಮಡಕೇರಿ ಖಳನಟನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಉಳಿದಂತೆ ರಾಜ್‌ ಪ್ರವೀಣ್‌, ದೀಪಕ್‌ ರಾಜ್‌, ಅಶ್ವಿ‌ನಿ, ಮಾಧುರಿ ಶಶಿಕುಮಾರ್‌ ಮೊದಲಾದ ಕಲಾವಿದರು ಚಿತ್ರದ ಇತರೆ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಸಾಯಿಕಿರಣ್‌ ಸಂಗೀತ ಸಂಯೋಜಿಸಿದ್ದಾರೆ. ಮೈಸೂರು ಮೂಲದ ವಕೀಲ ಕೆ.ಪಿ. ಚಿದಾನಂದ್‌ ಚಿತ್ರವನ್ನು ನಿರ್ಮಿಸಿದ್ದಾರೆ. “ಅಜ್ಜ’ ಚಿತ್ರದ ಚಿತ್ರೀಕರಣವನ್ನು ಕೊಡಗು, ಕಾರವಾರ, ಉಡುಪಿಯ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಚಿತ್ರಿಸಲಾಗಿದೆ. ಸದ್ಯ ತನ್ನ ಶೀರ್ಷಿಕೆ ಮತ್ತು ಪೋಸ್ಟರ್‌ಗಳ ಮೂಲಕ ಸಿನಿಪ್ರಿಯರನ್ನು ಸೆಳೆಯುತ್ತಿರುವ “ಅಜ್ಜ’ ಹೇಗಿರಲಿದ್ದಾನೆ ಎಂಬುದು ಶೀಘ್ರದಲ್ಲಿಯೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.