ನೋಟ್‌ ಬ್ಯಾನ್‌ ಸುತ್ತ ಮಟಾಶ್‌


Team Udayavani, Dec 7, 2018, 6:00 AM IST

d-75.jpg

    ಈ ಹಿಂದೆ “ಜುಗಾರಿ ಕ್ರಾಸ್‌’, “ಲಾಸ್ಟ್‌ ಬಸ್‌’ನಂತಹ ವಿಭಿನ್ನ ಕಥಾಹಂದರದ ಚಿತ್ರಗಳನ್ನು ತೆರೆಮೇಲೆ ತಂದು ಸೈ ಎನಿಸಿಕೊಂಡಿದ್ದ ಹಾಸ್ಯ ಚಕ್ರವರ್ತಿ ನರಸಿಂಹರಾಜು ಅವರ ಮೊಮ್ಮಗ ಎಸ್‌.ಡಿ ಅರವಿಂದ್‌ ಈ ಬಾರಿ “ಮಟಾಶ್‌’ ಎಂಬ ಮತ್ತೂಂದು ಅಂಥದ್ದೇ ಚಿತ್ರವನ್ನು ಪ್ರೇಕ್ಷಕರ ಮುಂದಿಡುತ್ತಿದ್ದಾರೆ. 

2016ರ ನವೆಂಬರ್‌ 8ರಂದು ಆದ ಐನೂರು ಮತ್ತು ಒಂದು ಸಾವಿರ ನೋಟುಗಳ ಅಮಾನ್ಯಿಕರಣ. ಆನಂತರ ನಡೆದ ಬೆಳವಣಿಗೆಗಳು, ಅದರಿಂದಾದ ಜನ ಸಾಮಾನ್ಯರಿಗಾದ ಉಪಯೋಗ ಮತ್ತು ಸಂಕಷ್ಟಗಳ ಸುತ್ತ ಮಟಾಶ್‌ ಚಿತ್ರದ ಕಥೆ ನಡೆಯಲಿದೆ. “ಮಟಾಶ್‌’ ಚಿತ್ರಕ್ಕೆ ಎಸ್‌.ಡಿ ಅರವಿಂದ್‌ ನಿರ್ದೇಶನದ ಜೊತೆಗೆ ಸಂಗೀತ ಸಂಯೋಜನೆ ಮತ್ತು ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. 

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಎಸ್‌.ಡಿ ಅರವಿಂದ್‌, “ಮಟಾಶ್‌ ಚಿತ್ರದಲ್ಲಿ ಡಿಮಾನಿಟೈಸೇಷನ್‌ ಸರಿಯೋ, ತಪ್ಪೋ ಎಂಬ ಸಂಗತಿಗಳನ್ನು ಎಲ್ಲಿಯೂ ಚರ್ಚಿಸಿಲ್ಲ. ಆದರೆ ನೋಟ್‌ಬ್ಯಾನ್‌ ಆದ ಸಂದರ್ಭದಲ್ಲಿ ಏನೇನು ಘಟನೆಗಳು ನಡೆದವು, ನಾವು-ನೀವು ಕಣ್ಣಾರೆ ಏನೇನು ನೋಡಿದ್ದೇವು, ಕೇಳಿದ್ದೆವೋ, ಅಂತಹ ಹಲವು ಸಂಗತಿಗಳನ್ನು ಇಟ್ಟುಕೊಂಡು ಈ ಚಿತ್ರದಲ್ಲಿ ಅವುಗಳನ್ನು ಕಟ್ಟಿಕೊಟ್ಟಿದ್ದೇವೆ. ಚಿತ್ರವನ್ನು ಮನರಂಜನಾತ್ಮಕವಾಗಿ ಹೇಳಿದ್ದು, ನೋಡುವ ಪ್ರೇಕ್ಷಕರಿಗೆ ಮಟಾಶ್‌ ಹೊಸಥರದ ಅನುಭವ ನೀಡಲಿದೆ’ ಎನ್ನುತ್ತಾರೆ. 

“ಮಟಾಶ್‌’ ಚಿತ್ರವನ್ನು ಇತ್ತೀಚೆಗೆ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಚಿತ್ರದ ಯಾವುದೇ ದೃಶ್ಯಗಳಿಗೆ ಕಟ್‌ ಅಥವಾ ಮ್ಯೂಟ್‌ ಇಲ್ಲದೆ “ಯು/ಎ’ ಪ್ರಮಾಣ ಪತ್ರ ಕೊಟ್ಟಿದೆ. ಸದ್ಯ, ಚಿತ್ರದ ಟೀಸರ್‌ ಮತ್ತು ಲಿರಿಕಲ್‌ ಹಾಡುಗಳು ಬಿಡುಗಡೆಯಾಗಿದ್ದು, ಪ್ರೇಕ್ಷಕರನ್ನ ಆಕರ್ಷಿಸುತ್ತಿದೆ. ಅದರಲ್ಲೂ ನಟ ಪುನೀತ್‌ ರಾಜಕುಮಾರ್‌ ಹಾಡಿರುವ ಉತ್ತರ ಕರ್ನಾಟಕ ಶೈಲಿಯ “ಚವಳಿಕಾಯಿ…’ ಹಾಡು ಸಖತ್‌ ಸದ್ದು ಮಾಡುತ್ತಿದೆ. ಅದರ ಜೊತೆಗೇ, “ನಮೋ ವೆಂಕಟೇಶಾ…’ ಹಾಗೂ “ವಾಟ್‌ ಎ ಟ್ರಾÂಜಿಡಿ…’ ಹಾಡುಗಳು ಕೂಡ ಕೇಳುಗರ ಗಮನ ಸೆಳೆದಿವೆ. ಚಿತ್ರದ ಟೈಟಲ್‌ ಮತ್ತು ಹಾಡುಗಳನ್ನು ಕೇಳಿದವರು, ಟ್ರೇಲರ್‌ನ್ನು ನೋಡಿದವರು ಸೋಷಿಯಲ್‌ ಮೀಡಿಯಾಗಳಲ್ಲಿ ಚಿತ್ರದ ಬಗ್ಗೆ ಸಾಕಷ್ಟು ಮೆಚ್ಚುಗೆಯ ಅಭಿಪ್ರಾಯಗಳು ವ್ಯಕ್ತಪಡಿಸುತ್ತಿದ್ದಾರೆ. ಅವರ ನಿರೀಕ್ಷೆಯನ್ನು ಹುಸಿ ಮಾಡದೆ “ಮಟಾಶ್‌’ ಚಿತ್ರವನ್ನು ಈ ವಾರ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ ಎನ್ನುತ್ತಾರೆ ನಿರ್ದೇಶಕ ಎಸ್‌.ಡಿ ಅರವಿಂದ್‌. 

ಇನ್ನುಳಿದಂತೆ ಸಮರ್ಥ ನರಸಿಂಹ ರಾಜು, ಐಶ್ವರ್ಯ ಸಿಂಧೋಗಿ, ರಜನಿ ಭಾರಧ್ವಾಜ್‌, ರೂಪ ಶ್ರೀಧರ್‌ ಸೇರಿದಂತೆ ಹಲವರು ಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅರವಿಂದ್‌ ನರಸಿಂಹರಾಜು ಚಿತ್ರದ ಕಲಾ ನಿರ್ದೇಶನ ಮಾಡಿದ್ದಾರೆ. “ಗೋಲ್ಸ… ಆ್ಯಂಡ್‌ ಡ್ರೀಮ್ಸ…’, “ಕ್ರೋಮ್ಸ… ಆ್ಯಂಡ್‌ ಬಲ್ಮಾನಿ’ ಬ್ಯಾನರ್‌ ಅಡಿ ಸತೀಶ್‌ ಪಾಠಕ್‌, ಗಿರೀಶ್‌ ಪಟೇಲ…, ಚಂದ್ರಶೇಖರ್‌ ಮನೂರ್‌, ಎಸ್‌.ಡಿ ಅರವಿಂದ್‌, ಆನಂದ್‌ ಚಿಟ್ಟವಾಡಗಿ, ರೂಪಾ ಬಡಿಗೇರ್‌, ಉಮೇಶ್‌ ಸುರೇಬಾನ್‌ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸಿದ್ದಾರೆ. ಒಟ್ಟಾರೆ ಮನರಂಜನೆ ಜೊತೆಗೆ ಒಂದು ಹದವಾದ ಸಂದೇಶವನ್ನು ಹೊತ್ತು ಬರುತ್ತಿರುವ “ಮಟಾಶ್‌’ ಎಷ್ಟರ ಮಟ್ಟಿಗೆ ಪ್ರೇಕ್ಷಕ ಪ್ರಭುಗಳಿಗೆ ಇಷ್ಟವಾಗುತ್ತದೆ ಅನ್ನೋದು ಇದೇ ವಾರಾಂತ್ಯಕ್ಕೆ ಗೊತ್ತಾಗಲಿದೆ. 

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.