ಸೈಲೆಂಟ್‌ ವೈದಿಯ ಸುಂದರ ಕಣ್ಣು


Team Udayavani, Dec 7, 2018, 6:00 AM IST

d-78.jpg

ವೈದಿ ಕಳೆದ ಎರಡು ದಶಕಗಳಿಂದಲೂ ಚಿತ್ರರಂಗದಲ್ಲಿ ದುಡಿಯುತ್ತಿರುವ ಯಶಸ್ವಿ ಛಾಯಾಗ್ರಾಹಕ. ಛಾಯಾಗ್ರಹಣದಲ್ಲಿ ವೈದಿ ಗೋಲ್ಡ್‌ ಮೆಡಲಿಸ್ಟ್‌. ಇದುವರೆಗೆ 25 ಕ್ಕೂ ಹೆಚ್ಚು ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ್ದಾರೆ. ತಮಿಳು, ಮಲಯಾಳಂ ಮತ್ತು ಕನ್ನಡ ಈ ಮೂರು ಭಾಷೆಯಲ್ಲೂ ವೈದಿ ಕ್ಯಾಮೆರಾ ಹಿಡಿದಿದ್ದಾರೆ. ಮೂರು ಭಾಷೆಯ ಬಹುತೇಕ ಸ್ಟಾರ್ಗಳಿಗೆ ಛಾಯಾಗ್ರಾಹಣ ಮಾಡಿರುವುದು ವೈದಿ ಅವರ ವಿಶೇಷತೆ.

 ಗಣೇಶ್‌ ಅಭಿನಯದ “ರೋಮಿಯೋ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ವೈದಿ, ಮೆಲ್ಲನೆ ಕನ್ನಡ ಚಿತ್ರರಂಗದಲ್ಲೇ ಹೆಚ್ಚು ಬಿಜಿಯಾಗಿಬಿಟ್ಟರು. ಮೊದಲ ಚಿತ್ರದ ಬಳಿಕ ಯಶ್‌ ಅಭಿನಯದ “ಗೂಗ್ಲಿ’, “ಮಿಸ್ಟರ್‌ ಅಂಡ್‌ ಮಿಸ್ಸಸ್‌ ರಾಮಾಚಾರಿ’,”ಮಾಸ್ಟರ್‌ ಪೀಸ್‌’ ಚಿತ್ರಗಳಲ್ಲಿ ಕೆಲಸ ಮಾಡುತ್ತಲೇ ಅವರು ಪುನೀತ್‌ರಾಜ್‌ಕುಮಾರ್‌ ಅಭಿನಯದ “ರಣವಿಕ್ರಮ’ ಚಿತ್ರಕ್ಕೂ ಕ್ಯಾಮೆರಾ ಹಿಡಿದರು. ಅಷ್ಟೇ ಅಲ್ಲ, “ರಾಗ’ ಚಿತ್ರದಲ್ಲೂ ವೈದಿ ಕೆಲಸ ಮಾಡಿದ್ದಾರೆ. ವಿಶೇಷವೆಂದರೆ, ನಿರ್ದೇಶಕ ಪವನ್‌ ಒಡೆಯರ್‌ ಅವರೊಂದಿಗೆ ಮೂರು ಚಿತ್ರಗಳಲ್ಲಿ ವೈದಿ ಕೆಲಸ ಮಾಡಿದ್ದಾರೆ. “ಗೂಗ್ಲಿ’, “ರಣವಿಕ್ರಮ’ ಮತ್ತು ಇದೀಗ ಬಿಡುಗಡೆಗೆ ರೆಡಿಯಾಗಿರುವ ಪುನೀತ್‌ರಾಜಕುಮಾರ್‌ ಅಭಿನಯದ “ನಟ ಸಾರ್ವಭೌಮ’ ಚಿತ್ರಕ್ಕೂ ಕ್ಯಾಮೆರಾ ಹಿಡಿದಿದ್ದಾರೆ. 

ಹಾಗೆ ನೋಡಿದರೆ, ವೈದಿ ಅವರು ಎರಡು ದಶಕಗಳಿಂದಲೂ ಚಿತ್ರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಪೈಕಿ ಅವರು ಅದು ಕನ್ನಡ ಚಿತ್ರರಂಗದಲ್ಲೇ ಹೆಚ್ಚು ಸ್ಟಾರ್ ಚಿತ್ರಗಳಲ್ಲಿ ಕೆಲಸ ಮಾಡಿದ್ದು ವಿಶೇಷ. ಹಾಗೆ ಹೇಳುವುದಾದರೆ, ಕನ್ನಡದಲ್ಲಿ ಅವರು ಈವರೆಗೆ ಮಾಡಿರುವ ಎಲ್ಲಾ ಚಿತ್ರಗಳೂ ದೊಡ್ಡ ಸಕ್ಸಸ್‌ ಕಂಡಿವೆ. ಸ್ಟಾರ್ ಸಿನಿಮಾಗಳಿಗಷ್ಟೇ ಅಲ್ಲ, ಹೊಸಬರ ಜೊತೆಯಲ್ಲೂ ಸಿನಿಮಾ ಮಾಡುವ ತುಡಿತ ಇದೆ ಎನ್ನುವ ವೈದಿ, ಕಥೆ ಮತ್ತು ತಂಡ ಹೇಗಿರುತ್ತೆ ಎಂಬುದನ್ನು ನೋಡಿ ಕೆಲಸ ಮಾಡುವುದಾಗಿ ಹೇಳುತ್ತಾರೆ.

ಎಲ್ಲಾ ಸರಿ, ವೈದಿ ಅವರಿಗೆ ಕನ್ನಡ ಸ್ಪಷ್ಟವಾಗಿ ಬರುತ್ತಾ? ಈ ಪ್ರಶ್ನೆ ಎಲ್ಲರೂ ಕೇಳುತ್ತಾರೆ. ಆದರೆ, ವೈದಿ ಹೆಮ್ಮೆಯಿಂದ ಹೇಳುವುದಿಷ್ಟು. ಕನ್ನಡ ಭಾಷೆ ಅರ್ಥವಾಗುತ್ತೆ. ಮಾತನಾಡಲೂ ಬರುತ್ತೆ. ಅದಕ್ಕೆ ಕಾರಣ ನಿರ್ದೇಶಕ ಪವನ್‌ ಒಡೆಯರ್‌ ಎನ್ನುತ್ತಾರೆ. ವೈದಿ ಅವರ ಸಿನಿಜರ್ನಿಯಲ್ಲಿ ಪುನೀತ್‌ರಾಜ್‌ಕುಮಾರ್‌ ಅವರ “ನಟ ಸಾರ್ವಭೌಮ’ ಚಿತ್ರ ವಿಶೇಷವಂತೆ. ಯಾಕೆಂದರೆ, ಅದು ವೈದಿ ಅವರಿಗೆ 25 ನೇ ಚಿತ್ರ. ಹಾಗಾಗಿ, ಎಂದಿಗಿಂತ ವಿಶೇಷವಾದ ಕಾಳಜಿಯೊಂದಿಗೆ ಆ ಚಿತ್ರ ಮಾಡಿದ್ದಾರಂತೆ. ಇಷ್ಟು ವರ್ಷಗಳ ಕಾಲ ಅವರು ಮೂರು ಭಾಷೆಯ ಚಿತ್ರರಂಗದಲ್ಲಿ ಕೆಲಸ ಮಾಡಿದ್ದರೂ, ಅವರಿಗೆ ಕನ್ನಡ ಚಿತ್ರರಂಗ ಕಂಫ‌ರ್ಟ್‌ ಎನ್ನುತ್ತಾರೆ.

ಕನ್ನಡದಲ್ಲಿ ಸದ್ಯಕೆ ಒಂದಷ್ಟು ಹೊಸ ಕಥೆ ಕೇಳುತ್ತಿರುವ ವೈದಿ, ಇಷ್ಟರಲ್ಲೇ ಮತ್ತೂಬ್ಬ ಸ್ಟಾರ್‌ ನಟರ ಸಿನಿಮಾ ಮಾಡುವ ಸುಳಿವು ನೀಡುತ್ತಾರೆ. ಇದುವರೆಗೆ ಕನ್ನಡದಲ್ಲಿ ಮೂವರು ಸ್ಟಾರ್ ಜೊತೆಗೇ ಸಿನಿಮಾ ಮಾಡಿರುವ ಅವರು, ಚಾಲೆಂಜ್‌ ಸಿನಿಮಾ ಅಂದರೆ, ಎಲ್ಲಿಲ್ಲದ ಖುಷಿಯಂತೆ. “ನಟ ಸಾರ್ವಭೌಮ’ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ ಎನ್ನುವ ಅವರು, ಅದೊಂದು ವಿಭಿನ್ನ ಕಥೆ. ಹಾಗಾಗಿ, ಪ್ರತಿಯೊಂಬ್ಬ ತಂತ್ರಜ್ಞನಿಗೂ ಅದೊಂದು ಚಾಲೆಂಜ್‌ ಚಿತ್ರ ಎನ್ನುವುದನ್ನು ಮರೆಯುವುದಿಲ್ಲ ಅವರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.