ಸಾರ್ವಜನಿಕರ ಮಡಿಲಿಗೆ ಹಾಡು


Team Udayavani, Jan 4, 2019, 12:30 AM IST

x-81.jpg

ಅದು “ಸಾರ್ವಜನಿಕರಲ್ಲಿ ವಿನಂತಿ’ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮ. ಹಾಡಿನ ಕಾರ್ಯಕ್ರಮವೆಂದರೆ ಅಲ್ಲಿ ಬರೀ ಹಾಡು, ಮಾತಿಗಷ್ಟೇ ಜಾಗವಿರಲಿಲ್ಲ. ಸಮ್ಕಾ ಫ್ಯಾಷನ್‌ ತಂಡದಿಂದ ಫ್ಯಾಷನ್‌ ಶೋ ಕೂಡ ನಡೆದದ್ದು ವಿಶೇಷ. ಯೋಗರಾಜ್‌ ಭಟ್‌ ಮತ್ತು ಯೋಗಿ ಆಕರ್ಷಣೆಯಾಗಿದ್ದರು. ಅಂದು ಭಟ್ಟರು ಆಡಿಯೋ ಸಿಡಿ ಬಿಡುಗಡೆ ಮಾಡಿ, ಹೊಸಬರ ಚಿತ್ರಕ್ಕೆ ಶುಭಕೋರಿದರು. “ಹೊಸಬರ ಚಿತ್ರಗಳ ಬಗ್ಗೆ ನನಗೆ ನಿರೀಕ್ಷೆ ಹೆಚ್ಚು. ಅವರಲ್ಲಿ ಹೊಸತನ ಇರುತ್ತದೆ. ಈಗೀಗ ಬರುವ ಹೊಸಬರ ಚಿತ್ರಗಳಲ್ಲಿ ಅದು ಸಾಬೀತಾಗಿದೆ. ತುಂಬಾನೇ ಕಷ್ಟಪಟ್ಟು ಒದ್ದಾಡಿ, ಗುದ್ದಾಡಿ ಸಿನಿಮಾ ಮಾಡಿರುತ್ತಾರೆ. ಈ ಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ಸೇರಿದಂತೆ ಇಡೀ ತಂಡಕ್ಕೆ ಗೆಲುವು ಕೊಡಲಿ’ ಎಂದರು ಯೋಗರಾಜ್‌ಭಟ್‌.

ಯೋಗಿ ಕೂಡ ಅಂದು ಅತಿಥಿಯಾಗಿ ಆಗಮಿಸಿದ್ದರು. ಚಿತ್ರತಂಡ ಮೋಷನ್‌ ಪೋಸ್ಟರ್‌ ಬಿಡುಗಡೆ ಮಾಡಿದೆ. ಅದು ನನಗಂತೂ ಕುತೂಹಲ ಮೂಡಿಸಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಅಂದರು ಯೋಗಿ.

ನಿರ್ದೇಶಕ ಕೃಪಸಾಗರ್‌ ಅವರಿಗೆ ಇದು ಮೊದಲ ಚಿತ್ರ. “ಇಲ್ಲಿ ಮನರಂಜನೆ ಜೊತೆಗೆ ಸಮಾಜಕ್ಕೊಂದು ಸಂದೇಶವೂ ಇದೆ. ಒಂದು ವರ್ಷದ ಕನಸು ಈಗ ನನಸಾಗುತ್ತಿದೆ. ಕಥೆ ಬಗ್ಗೆ ಹೇಳುವುದಾದರೆ, ಇದೊಂದು ಕ್ರೈಂ, ಥ್ರಿಲ್ಲರ್‌ ಚಿತ್ರ. ಕೊಲೆ, ದರೋಡೆ, ಸಮಾಜ ಘಾತುಕ ಕೆಲಸ ಮಾಡಿದವರಷ್ಟೇ ಅಪರಾಧಿಗಳಲ್ಲ ಎಂಬ ವಿಷಯವೂ ಇಲ್ಲಿದೆ. ಇನ್ನು, ಈ ಚಿತ್ರದಲ್ಲಿ ವಿಶೇಷವಾದಂತಹ ಪಾತ್ರವಿದೆ. ಅದನ್ನು  ತೆರೆಯಮೇಲೆ ನೋಡಬೇಕು. ಸಾರ್ವಜನಿಕರು ಪೊಲೀಸ್‌ ಇಲಾಖೆ ಜೊತೆಗೆ ಕೈ ಜೋಡಿಸಿದರೆ ಸಮಾಜದಲ್ಲಿ ಅಪರಾಧ ಪ್ರಕರಣಗಳು ಹೇಗೆ ಕಡಿಮೆಯಾಗುತ್ತವೆ ಎಂಬುದನ್ನು ಇಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ನಮ್ಮ ಮೊಬೈಲ್‌ ಅನ್ನು ಬೇರೆಯವರಿಗೆ ಕೊಟ್ಟಾಗ ಅವರು ಏನು ಮಾಡಬಲ್ಲರು, ಅದರಿಂದ ಏನೆಲ್ಲಾ ಆಗುತ್ತದೆ ಎಂಬ ಅಂಶವೂ ಇಲ್ಲಿದೆ’ ಎಂಬುದು ನಿರ್ದೇಶಕ ಕೃಪಾಸಾಗರ್‌ ಮಾತು.

ಅನಿಲ್‌ ಎರಡು ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಆ ಪೈಕಿ ಒಂದು ಹಾಡನ್ನು ಪೊಲೀಸ್‌ ಇಲಾಖೆಗೆ ಅರ್ಪಿಸಲಾಗಿದೆ. ನಾಗೇಂದ್ರ ಪ್ರಸಾದ್‌ ಮತ್ತು ಚೇತನ್‌ ಗೀತೆ ರಚಿಸಿದ್ದಾರೆ. ಮದನ್‌ ನಾಯಕರಾದರೆ,  ಮೈಸೂರು ಮೂಲದ ಅಮೃತಾ ನಾಯಕಿಯಾಗಿದ್ದಾರೆ. ಇವರಿಬ್ಬರಿಗೂ ಮೊದಲ ಚಿತ್ರವಿದು. ಚಿತ್ರದಲ್ಲಿ ರಮೇಶ್‌ ಪಂಡಿತ್‌, ಮಂಡ್ಯ ರಮೇಶ್‌ ಸೇರಿದಂತೆ ಇತರರು ನಟಿಸಿದ್ದಾರೆ. ಉಮಾ ನಂಜುಂಡರಾವ್‌ ನಿರ್ಮಾಪಕರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.